6
  • Latest
Sidhu's calculation What did Uttara Kannada get in this budget

ಸಿದ್ದು ಲೆಕ್ಕ: ಈ ಬಜೆಟಿನಲ್ಲಿ ಉತ್ತರ ಕನ್ನಡಕ್ಕೆ ಸಿಕ್ಕಿದ್ದೇನು?

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಿದ್ದು ಲೆಕ್ಕ: ಈ ಬಜೆಟಿನಲ್ಲಿ ಉತ್ತರ ಕನ್ನಡಕ್ಕೆ ಸಿಕ್ಕಿದ್ದೇನು?

AchyutKumar by AchyutKumar
in ರಾಜ್ಯ
Sidhu's calculation What did Uttara Kannada get in this budget

ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಉತ್ತರ ಕನ್ನಡ ಜಿಲ್ಲೆಗೆ ಕೆಲ ಯೋಜನೆಗಳನ್ನು ಘೋಷಿಸಿದ್ದಾರೆ. ಕರಾವಳಿ, ಮಲೆನಾಡು ಹಾಗೂ ಬಯಲು ಸೀಮೆಯ ಪ್ರದೇಶವನ್ನು ಒಳಗೊಂಡ ಜಿಲ್ಲೆಗೆ ಇಲ್ಲಿನ ಕೆಲ ಯೋಜನೆಗಳು ಆಶಾದಾಯಕ ಬೆಳವಣಿಗೆಯೆನಿಸಿದೆ.

ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಿಸುವುದಾಗಿ ಅವರು ಹೇಳಿದ್ದಾರೆ. ರೈತರ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಾವಯವ ಪ್ರಮಾಣೀಕರಣ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ. ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಸಿದ್ದಿ ಸಮುದಾಯದವರನ್ನು ಒಳಗೊಂಡು ಸೋಲಿಗ, ಹಲಸರು, ಜೇನು ಕುರುಬ, ಗೌಡಲು, ಕುಡಿಯ, ಮಲೆಕುಡಿಯ, ಕಾಡುಕುರುಬ, ಇರುಳಿಗ, ಕೊರಗ, ಬೆಟ್ಟಕುರುಬ, ಯರವ, ಪಣಿಯನ್ ಇತ್ಯಾದಿ ಪರಿಶಿಷ್ಟ ಪಂಗಡದ ಬುಡಕಟ್ಟುಗಳ ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು 200 ಕೋಟಿ ರೂ ಅನುದಾನ ಘೋಷಿಸಿದ್ದಾರೆ. ಇದರೊಂದಿಗೆ ಈ ಸಮುದಾಯದವರಿಗೆ ರಾಜ್ಯ ಸಿವಿಲ್ ಸೇವೆಯಲ್ಲಿ ಹೆಚ್ಚಿನ ಅವಕಾಶ ಕೊಡಲು ನೇರ ನೇಮಕಾತಿ ಮಾಡಿಕೊಳ್ಳುವ ಭರವಸೆ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆಗೆ ಅನುಕೂಲವಾಗುವಂತೆ ಕೊಂಡಿ ರಸ್ತೆಗಳನ್ನು ನಬಾರ್ಡ ಸಹಯೋಗದಲ್ಲಿ ಅಭಿವೃದ್ಧಿಪಡಿಸಲು ಸಿದ್ದರಾಮಯ್ಯ 30 ಕೋಟಿ ರೂ ಒದಗಿಸುವುದಾಗಿಯೂ ಬಜೆಟಿನಲ್ಲಿ ಹೇಳಲಾಗಿದೆ. ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಕಿ ಬಂದರು, ಹೊನ್ನಾವರದಲ್ಲಿ ಹಡಗು ನಿರ್ಮಾಣ ಕ್ಷೇತ್ರ ಹಾಗೂ ನದಿ ಕ್ರೂಸ್ ಪ್ರವಾಸೋದ್ಯಮ ಯೋಜನೆಗಳಿಗೆ ಯೋಜನೆ ರೂಪಿಸುವ ಬಗ್ಗೆ ಸರ್ಕಾರ ಚಿಂತಿಸಿದೆ. ಕರಾವಳಿಯಲ್ಲಿನ ಕಡಲು ಕೊರತ ತಡೆಗೆ ಚೆನೈ ಐಟಿಐ ಅವರಿಂದ `ಶೋರ್ಲೈನ್ ಮ್ಯಾನೇಜ್ಮೆಂಟ್ ಪ್ಲಾನ್’ ಸಿದ್ಧಪಡಿಸಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಆ ಮೂಲಕ ಹಂತ ಹಂತವಾಗಿ ಕಡಲ ಕೊರತ ತಡೆಯುವ ಭರವಸೆ ನೀಡಿದ್ದಾರೆ. ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ ಒಟ್ಟಾರೆಯಾಗಿ 83 ಕೋಟಿ ರೂ ಅನುದಾನವನ್ನು ಒದಗಿಸುವ ಬಗ್ಗೆ ಬಜೆಟಿನಲ್ಲಿ ನಮೂದಿಸಲಾಗಿದೆ. ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಈ ಸಾಲಿನಲ್ಲಿ ಅನುದಾನ ಒದಗಿಸಿ ಕಾಮಗಾರಿ ನಡೆಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಅಭಿವೃದ್ಧಿ ಹಾಗೂ ರಸ್ತೆಬದಿ ಸೌಲಭ್ಯಗಳನ್ನು ಉನ್ನತ್ತಿಕರಿಸುವ ಮೂಲಕ ಶೈಕ್ಷಣಿಕ, ಆರೋಗ್ಯ, ಸಾಹಸ, ಪರಿಸರ, ಜಲಸಾರಿಗೆ ಹಾಗೂ ಕಡಲ ತೀರದ ಪ್ರವಾಸೋದ್ಯಮ ನಡೆಸುವ ಬಗ್ಗೆಯೂ ಸರ್ಕಾರಕ್ಕೆ ಚಿಂತನೆಯಿದೆ. ಉತ್ತರ ಕನ್ನಡ ಸೇರಿ ಆರು ಜಿಲ್ಲೆಗಳಲ್ಲಿನ ಭೂ ಕುಸಿತ ತಡೆಗೆ 200 ಕೋಟಿ ರೂ ಮೀಸಲಿಡುವುದಾಗಿ ಬಜೆಟ್ ಅಂಕಿ-ಅoಶಗಳು ಹೇಳಿಕೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ 200 ಕೋಟಿ ರೂ ವೆಚ್ಚದಲ್ಲಿ ಸಮುದ್ರ ಕೊರೆತ ತಗ್ಗಿಸುವುದು ಹಾಗೂ ರಾಜ್ಯದಲ್ಲಿ ಪ್ರಗತಿಯಲ್ಲಿರುವ 42 ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣವನ್ನು ಸದರಿ ಸಾಲಿನಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ.

ಇದರೊoದಿಗೆ 2025-26ನೇ ಸಾಲಿನಲ್ಲಿ ಹೊನ್ನಾವರ, ಚಾಮರಾಜನಗರ ಮತ್ತು ಚಿತ್ರದುರ್ಗದಲ್ಲಿ 20 ಕೋಟಿ ರೂ ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳನ್ನು ನಿರ್ಮಾಣ ಉದ್ದೇಶಕ್ಕಾಗಿ 12 ಕೋಟಿ ರೂ ಅನುದಾನ ನೀಡಲು ಬಜೆಟ್ ನಿರ್ಧರಿಸಿದೆ. ಹಳಿಯಾಳದಲ್ಲಿ ಕೆರೆ ತುಂಬಿಸುವ ಯೋಜನೆಗೆ ಸಹ ಬಜೆಟ್ ಒತ್ತು ನೀಡಿದೆ.

 

ShareSendTweetShare
Previous Post

IAS ಓದುವ ಮುನ್ನ ಜಿಲ್ಲಾಧಿಕಾರಿಯಾದ ಯಲ್ಲಾಪುರದ ಹುಡುಗಿ!

Next Post

ಏಳಲ್ಲ.. ಆರೇ ದಿನದೊಳಗೆ ಬೆಳೆ ವಿಮೆ ಪರಿಹಾರ!

Next Post
Crop insurance compensation within six days not seven!

ಏಳಲ್ಲ.. ಆರೇ ದಿನದೊಳಗೆ ಬೆಳೆ ವಿಮೆ ಪರಿಹಾರ!

BJP is the first to welcome the Congress budget!

ಕಾಂಗ್ರೆಸ್ ಬಜೆಟ್ ಸ್ವಾಗತಿಸಿದ ಮೊದಲ ಬಿಜೆಪಿಗ!

Farmers' union president says Sidhu's budget is a waste!

ಸಿದ್ದು ಬಜೆಟ್ ಸಪ್ಪೆ ಎಂದ ರೈತ ಸಂಘ ಅಧ್ಯಕ್ಷ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.