ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ಇದೀಗ ನಿರಾಳರಾಗಿದ್ದಾರೆ. ಕಾರಣ ಅವರ ಮೇಲಿದ್ದ ಎರಡನೇ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ ವಜಾ ಮಾಡಿದೆ.
2006ರಲ್ಲಿ ಮಠದಲ್ಲಿ 10ನೇ ತರಗತಿ ಓದುತ್ತಿರುವಾಗ ನಡೆದ ಚಾತುರ್ಮಾಸ್ಯದ ಅವಧಿಯಲ್ಲಿ ಅತ್ಯಾಚಾರ ನಡೆದ ಬಗ್ಗೆ ಸಂತ್ರಸ್ತೆ ದೂರಿದ್ದರು. 2012ರ ಅಗಸ್ಟ್ನಲ್ಲಿ ಚಾತುರ್ಮಾಸ್ಯ ನಡೆಯುತ್ತಿದ್ದಾಗ ಬೆಂಗಳೂರಿನ ಗಿರಿನಗರದಲ್ಲಿಯೂ ಅತ್ಯಾಚಾರ ನಡೆದ ಬಗ್ಗೆ ದೂರಿದ್ದರು.
ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸಿ 2018ರ ಸೆಪ್ಟೆಂಬರ್ 7ರಂದು ದೋಷಾರೋಪಣ ಪಟ್ಟಿ ಸಲ್ಲಿಸಿತ್ತು. ದುರು ಹಾಗೂ ದೋಷಾರೋಪಣ ಪಟ್ಟಿ ರದ್ಧು ಕೋರಿ ರಾಘವೇಶ್ವರ ಭಾರತೀ ಸ್ವಾಮೀಜಿ ಹೈಕೋರ್ಟಿನ ಮೊರೆ ಹೋಗಿದ್ದರು.
11 ಜೂನ್ 2024ರಂದು ಈ ಪ್ರಕರಣದ ವಿಚಾರಣೆ ನಡೆದಿತ್ತು. ಸುಮಾರು ಎಂಟು ತಿಂಗಳ ಕಾಲ ಆದೇಶವನ್ನು ರಹಸ್ಯವಾಗಿರಿಸಲಾಗಿತ್ತು. ಶುಕ್ರವಾರ ನ್ಯಾಯಮೂರ್ತಿ ಎಂನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆ ಆದೇಶವನ್ನು ಪ್ರಕಟಿಸಿದೆ.
ಇದೇ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತ್ರಸ್ತೆಯ ಪತಿ ಮಂಜುನಾಥ್ ಹೆಬ್ಬಾರ್ ವಿರುದ್ಧದ ಪ್ರಕರಣಗಳನ್ನು ಸಹ 2021ರ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟು ರದ್ಧುಪಡಿಸಿದೆ. ಮಠದ ಪರವಾಗಿ ಪಿ ಎನ್ ಮನಮೋಹನ್ ನ್ಯಾಯಾಲಯದಲ್ಲಿ ವಾದಿಸಿದ್ದರು.







