6
  • Latest
Chandrakath Kochharkar's demand to protect the interests of forest encroachers

ಅರಣ್ಯ ಅತಿಕ್ರಮಣದಾರರ ಹಿತ ಕಾಪಾಡಲು ಚಂದ್ರಕಾoತ ಕೊಚರೇಕರ ಆಗ್ರಹ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯ ಅತಿಕ್ರಮಣದಾರರ ಹಿತ ಕಾಪಾಡಲು ಚಂದ್ರಕಾoತ ಕೊಚರೇಕರ ಆಗ್ರಹ

AchyutKumar by AchyutKumar
March 8, 2025
in ರಾಜ್ಯ
Chandrakath Kochharkar's demand to protect the interests of forest encroachers
advt advt advt
ADVERTISEMENT

`ಬಡವರ ಪರ ಎಂದು ಸಾರುವ ರಾಜ್ಯ ಹಾಗೂ ಕೇಂದ್ರ ಸರ್ಕಾರ 2005ರ ಪೂರ್ವದಿಂದಲೂ ಅರಣ್ಯ ಭೂಮಿಯಲ್ಲಿರುವ ಬಗರ ಹುಕುಂ ಸಾಗುವಳಿದಾರರ ಹಿತ ಕಾಪಾಡಲು ಈ ತಿಂಗಳ ಅಂತ್ಯದೊಳಗೆ ಸುಪ್ರೀಂ ಕೋರ್ಟಿಗೆ ಅಫಿಡಾವಿಟ್ ಸಲ್ಲಿಸಬೇಕು’ ಎಂದು ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾoತ ಕೊಚರೇಕರ ಆಗ್ರಹಿಸಿದ್ದಾರೆ.

`ವಸತಿ ಮತ್ತು ಜೀವನೋಪಾಯಕ್ಕೆ ಅರಣ್ಯ ಭೂಮಿಯಲ್ಲಿ ಬದುಕನ್ನು ಕಟ್ಟಿಕೊಂಡವರ ಹಿತದೃಷ್ಟಿಯಿಂದ ಸುಪ್ರೀಂ ಕೋರ್ಟಿಗೆ ಈ ತಿಂಗಳ ಅವಧಿಯಲ್ಲಾದರೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಅಫಿಡಾವಿಟ್ ಸಲ್ಲಿಸಿ ಮದ್ಯಪ್ರವೇಶ ಮಾಡಬೇಕು’ ಎಂದವರು ಒತ್ತಾಯಿಸಿದ್ದಾರೆ. `ಈ ದಿಶೆಯಲ್ಲಿ ನಿರ್ಲಕ್ಷ್ಯ ಮಾಡಿದರೆ ಜಿಲ್ಲೆಯ ಲಕ್ಷಾಂತರ ಬಡ ಅರಣ್ಯ ಭೂಮಿ ಸಾಗುವಳಿದಾರರ ಬದುಕು ಬೀದಿಗೇ ಬರುವ ಅಪಾಯವಿದೆ’ ಎಂದು ಅವರು ಆತಂಕವ್ಯಕ್ತಪಡಿಸಿದ್ದಾರೆ.

ADVERTISEMENT
ADVERTISEMENT

`ಅರಣ್ಯ ಹಕ್ಕು ಕ್ಲೇಮು ತಿರಸ್ಕರಿಸಲ್ಪಟ್ಟ ಅರ್ಜಿದಾರರ ಒತ್ತುವರಿ ತೆರವುಗೊಳಿಸಲು ಕೆಲವು ಸಂಘಟನೆಯವರು ಸುಪ್ರೀಂ ಕೋರ್ಟಿನ ಮೆಟ್ಟಿಲೇರಿದ ಪ್ರಕರಣ ವಿಚಾರಣೆ ಹಂತದಲ್ಲಿದೆ. ಈ ಪ್ರಕರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅರಣ್ಯ ಭೂಮಿ ಸಾಗುವಳಿದಾರರ ಪರವಾಗಿ ಅಫೀಡವಿಟ್ ಸಲ್ಲಿಸುವ ತುರ್ತು ಅಗತ್ಯವಿದೆ. ಜಿಲ್ಲೆಯಲ್ಲಿ ವಸತಿ ಮತ್ತು ಜೀವನೋಪಾಯಕ್ಕೆ ಒಂದು ಲಕ್ಷಕ್ಕಿಂತ ಹೆಚ್ಚು ಜನರು ಅರಣ್ಯ ಭೂಮಿಯಲ್ಲಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಆ ಪೈಕಿ 75000ಕ್ಕೂ ಹೆಚ್ಚು ಕುಟುಂಬಗಳು ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿಯನ್ನು ಸಲ್ಲಿಸಿವೆ’ ಎಂದವರು ವಿವರಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

`1980ರ ಅರಣ್ಯ ಸಂರಕ್ಷಣಾ ಕಾಯ್ದೆ ಜ್ಯಾರಿಗೆ ಬಂದ ನಂತರ 1978ರ ಪೂರ್ವದ ಒತ್ತುವರಿಗಳನ್ನು ಸಕ್ರಮ ಪಡಿಸಲು ಕೇಂದ್ರ ಸರ್ಕಾರ ಶರತ್ತು ಬಧ್ಧ ಅನುಮೋದನೆ ನೀಡಿತ್ತು. ಆದರೆ, ಆಗ ನಡೆದ ಸಕ್ರಮ ಪ್ರಕ್ರಿಯೆಗಳು ಪಾರದರ್ಶಕವಾಗಿರಲಿಲ್ಲ. ಇದರಿಂದ ಸಾವಿರಾರು ಅರ್ಹ ಪ್ರಕರಣಗಳು ಬಿಟ್ಟು ಹೋದವು. ಈ ಬಗ್ಗೆ ರಾಜ್ಯ ಸರ್ಕಾರದ ನಡವಳಿಯಲ್ಲಿಯೇ ಉಲ್ಲೇಖಗಳಿವೆ’ ಎಂಬುದನ್ನು ಚಂದ್ರಕಾoತ ಕೋಚ್ರೆಕರ್ ಅವರು ನೆನಪು ಮಾಡಿಕೊಟ್ಟಿದ್ದಾರೆ.

`ಬಿಟ್ಟು ಹೋಗಿರುವ ಅರ್ಹ ಪ್ರಕರಣಗಳನ್ನು ಪುನರ್ ಪರಿಶೀಲಿಸಿ ಮಂಜೂರಿಗೆ ಶಿಫಾರಸು ಮಾಡಲು ಅಂದು ರಾಜ್ಯ ಸರ್ಕಾರ ಆದೇಶಿಸಿತ್ತು. ಆದರೆ, ಸರ್ಕಾರದ ಆದೇಶ ಈ ವರೆಗೂ ಅನುಷ್ಠಾನಕ್ಕೆ ಬಂದಿಲ್ಲ. ಇಂಥ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ ಅರಣ್ಯ ಹಕ್ಕು ಕಾಯ್ದೆ ಜಾರಿ ಮಾಡಿದ್ದು, ಪಾರಂಪರಿಕ ಅರಣ್ಯವಾಸಿ ವ್ಯಾಖ್ಯೆಯ ಬಗೆಗಿನ ಗೊಂದಲದಿAದ ಬಡವರ ಅರ್ಜಿ ಮೂಲೆಗುಂಪಾಗಿದೆ’ ಎಂದವರು ವಿವರಿಸಿದ್ದಾರೆ.

ShareSendTweetShare
ADVERTISEMENT
Previous Post

ಸರ್ಕಾರಿ ಜಾಗದಲ್ಲಿ ಅತಿಕ್ರಮಣದಾರರ ಮನೆ: ದಿಢೀರ್ ಕಾರ್ಯಾಚರಣೆಯಿಂದ ಎಲ್ಲವೂ ನೆಲಸಮ!

Next Post

ಮಾರ್ಚ 9: ಜೋರಾಗಿ ಓಡುವವರಿಗೆ ಪೊಲೀಸರ ಬಹುಮಾನ!

Next Post
March 9 Police reward those who run fast!

ಮಾರ್ಚ 9: ಜೋರಾಗಿ ಓಡುವವರಿಗೆ ಪೊಲೀಸರ ಬಹುಮಾನ!

ವೃದ್ಧನ ಬದುಕು ಕಸಿದ ಜೀವ ಜಲ!

Rapist finally caught!

ಕೊನೆಗೂ ಸಿಕ್ಕಿಬಿದ್ದ ಅತ್ಯಾಚಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.