6
  • Latest
Beef for wedding Arrest of miscreants who killed pregnant cow!

ಮದುವೆ ಮನೆಗೆ ಗೋ ಮಾಂಸ: ಗರ್ಭದ ಹಸು ಕೊಂದ ದುರಳರ ಸೆರೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಮದುವೆ ಮನೆಗೆ ಗೋ ಮಾಂಸ: ಗರ್ಭದ ಹಸು ಕೊಂದ ದುರಳರ ಸೆರೆ!

AchyutKumar by AchyutKumar
in ದೇಶ - ವಿದೇಶ
Beef for wedding Arrest of miscreants who killed pregnant cow!
advt advt advt
ADVERTISEMENT

ಮೇವಿಗೆ ತೆರಳಿದ್ದ ಗರ್ಭಿಣಿ ಹಸುವನ್ನು ತುಂಡರಿಸಿದ ದುಷ್ಟರು ಅದರ ಮಾಂಸವನ್ನು ಮದುವೆ ಕಾರ್ಯಕ್ರಮಕ್ಕೆ ಸರಬರಾಜು ಮಾಡಲು 7500ರೂ ಮುಂಗಡ ಹಣ ಪಡೆದಿದ್ದು, ಹೊನ್ನಾವರದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಭಟ್ಕಳದ ಮದುವೆ ಮನೆಗೆ ಮಾಂಸ ಪೂರೈಕೆಯ ಗುತ್ತಿಗೆ ಪಡೆದಿದ್ದ ದುಷ್ಟರು ಹಸುವಿನ ಫೋಟೋ ಕಳುಹಿಸಿದ್ದರು. ಅದಾದ ನಂತರ ಆ ಆಕಳನ್ನು ಕೊಂದು ಹೊಟ್ಟೆಯೊಳಗಿದ್ದ ಕರುವನ್ನು ಬಿಸಾಡಿದ್ದರು. ಹಸುವನ್ನು ತುಂಡು ತುಂಡಾಗಿ ಕತ್ತರಿಸಿ ಮಾಂಸ ಅಪಹರಿಸಿದ್ದರು. ಈ ಪ್ರಕರಣ ದೊಡ್ಡ ಸುದ್ದಿಯಾದ ಬೆನ್ನಲ್ಲೆ ಪೊಲೀಸರು ಆರು ತಂಡ ರಚಿಸಿ ಆರೋಪಿಗಳ ಹುಡುಕಾಟ ನಡೆಸಿದ್ದರು. ಮೊದಲು ಇಬ್ಬರು ಸಿಕ್ಕಿಬಿದ್ದಿದ್ದರೂ ಇನ್ನಿಬ್ಬರು ತಲೆಮರೆಸಿಕೊಂಡಿದ್ದರು. ಆ ಇಬ್ಬರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ADVERTISEMENT
ADVERTISEMENT

ಹೊನ್ನಾವರದ ಸಾಲ್ಕೋಡು, ಕೊಂಡದಕುಳಿ ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಗೋ ಕಳ್ಳತನ ನಡೆಯುತ್ತಿತ್ತು. ಜನ ಆ ಭಾಗದ ಚಿರತೆ ಮೇಲೆ ಸಾಕಷ್ಟು ಅನುಮಾನ ಪಟ್ಟಿದ್ದರು. ಆದರೆ, ಜನವರಿ 19ರಂದು ಗರ್ಭಿಣಿ ಹಸು ತುಂಡು ತುಂಡಾಗಿ ಬಿದ್ದಿರುವುದನ್ನು ನೋಡಿದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣ ದಾಖಲಾದ ನಂತರ 400ಕ್ಕೂ ಅಧಿಕ ಶಂಕಿತರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಇನ್ನಷ್ಟು ಗೋ ಮಾಂಸ ಭಕ್ಷಣೆಯ ಪ್ರಕರಣಗಳು ಹೊರ ಬಂದಿದ್ದು, ಅಕ್ರಮ ಜಾನುವಾರು ಸಾಗಾಟಗಳನ್ನು ಪೊಲೀಸರು ತಡೆದಿದ್ದರು.

Advertisement. Scroll to continue reading.

ಮೂಲ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಹೊನ್ನಾವರದ ಸಾಲ್ಕೊಡದಲ್ಲಿ ಮೇವಿಗೆ ತೆರಳಿದ್ದ ಗರ್ಭಿಣಿ ಗೋವು ಕೊಂದ ತೌಫಿಕ್ ಹಾಗೂ ಫೈಜಾನ್ ಸಿಕ್ಕಿ ಬಿದ್ದರು. ಅವರೊಡನೆ ವಾಸೀಂ ಹಾಗೂ ಮುಜಾಮಿಲ್ ಸಹ ಈ ಪ್ರಕರಣದಲ್ಲಿ ಭಾಗಿಯಾಗಿರುವುದು ಅರಿವಿಗೆ ಬಂದಿತು. ಆದರೆ, ಎಷ್ಟು ಹುಡುಕಾಟ ನಡೆಸಿದರೂ ವಾಸೀಂ ಹಾಗೂ ಮುಜಾಮಿಲ್ ಸಿಕ್ಕಿರಲಿಲ್ಲ. ಹೀಗಾಗಿ ಅವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ 50 ಸಾವಿರ ರೂ ಬಹುಮಾನ ನೀಡುವುದಾಗಿಯೂ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಘೋಷಿಸಿದ್ದರು.

ಹಿರಿಯ ಪೊಲೀಸ್ ಅಧಿಕಾರಿಗಳಾದ ಎಂ ಜಗದೀಶ, ಮಹೇಶ ಕೆ ನೇತ್ರತ್ವದಲ್ಲಿ ದುಷ್ಟರ ಹುಡುಕಾಟಕ್ಕೆ ತಂಡ ರಚನೆಯಾಯಿತು. ಸಿಪಿಐ ಸಂತೋಷ ಕಾಯ್ಕಿಣಿ, ಸಿದ್ದರಾಮೇಶ್ವರ ಎಸ್, ಪಿಎಸ್‌ಐ ರಾಜಶೇಖರ, ಮಮತಾ ನಾಯ್ಕ ಜೊತೆ ಹೊನ್ನಾವರದ ಪಿಎಸ್‌ಐ ಮಂಜುನಾಥ ತಂಡದವರು ಕಳ್ಳರ ಹುಡುಕಾಟ ನಡೆಸಿದರು. ಭಟ್ಕಳ, ಮುರುಡೇಶ್ವರ, ಹೊನ್ನಾವರ ಪೊಲೀಸ್ ಠಾಣೆಯ ಸಿಬ್ಬಂದಿ ಪೈಕಿ ಅಬ್ದುಲ್ ಹಮೀದ್, ಕೃಷ್ಣೆಗೌಡ, ನಾಗರಾಜ ಮೋಗೇರ, ದಿನೇಶ ನಾಯ್ಕ, ಲೋಕೇಶ ಕತ್ತಿ, ಮಂಜುನಾಥ ಲಕ್ಮಾಪುರಿ, ಮೈನುದ್ದೀನ್ ಘಾಟ್ನೀ, ಆನಂದ ಲಮಾಣಿ, ವಿಠ್ಠಲ್ ಹಳಿ, ಮಲ್ಲಿಕಾರ್ಜುನ ಸರದಾರ ಸೇರಿ ಈ ಪ್ರಕರಣಕ್ಕಾಗಿ ಓಡಾಟ ನಡೆಸಿದರು. ಸಿಡಿಆರ್ ವಿಭಾಗದ ಉದಯ ಗುಣಗಾ ಹಾಗೂ ಬಬನ ಗೋ ಕಳ್ಳರ ತಾಂತ್ರಿಕ ಚಲನ-ವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು.

Advertisement. Scroll to continue reading.

ಅದರ ಪ್ರಕಾರ ಜನವರಿ 23ರಂದು ಧಾರವಾಡ ಕಡೆಯಿಂದ ಆರೋಪಿತರು ತಪ್ಪಿಸಿಕೊಂಡು ಹೋಗಿರುವ ಅನುಮಾನ ಕಾಡಿತು. ಈ ಹಿನ್ನಲೆ 130 ಪ್ರದೇಶದಲ್ಲಿಸಿ ಸಿಸಿ ಕ್ಯಾಮರಾಗಳನ್ನು ಪೊಲೀಸರು ತಪಾಸಣೆ ಮಾಡಿದರು. ಹಾವೇರಿ, ದಾವಣಗೆರೆ, ವಿಜಯಪುರ, ಗೋವಾ-ಮಹಾರಾಷ್ಟçದಲ್ಲಿ ಸಹ ಆ ಇಬ್ಬರಿಗಾಗಿ ಹುಡುಕಾಟ ನಡೆಸಿದರು. ಈ ನಡುವೆ ಮಾರ್ಚ 8ರಂದು ಪಿಎಸ್‌ಐ ಮಂಜುನಾಥ ಅವರಿಗೆ ಆರೋಪಿ ಮಜಮಿಲ್ ಭಟ್ಕಳದ ಮನೆಗೆ ಬಂದ ಮಾಹಿತಿ ಸಿಕ್ಕಿತು. ಪೊಲೀಸ್ ಸಿಬ್ಬಂದಿ ಕೃಷ್ಣೆಗೌಡ, ನಾಗರಾಜ ಮೊಗೇರ್, ಲೋಕೇಶ ಕತ್ತಿ, ದಿನೇಶ ನಾಯಕ ಅವರನ್ನು ಅಲ್ಲಿಗೆ ಕಳುಹಿಸಿ, ಮಜಮಿಲ್’ನನ್ನು ವಶಕ್ಕೆ ಪಡೆದರು.

ನಂತರ ಉಳಿದ ಸಿಬ್ಬಂದಿ ಅಬ್ದುಲ್ ಹಮೀದ್, ವಿಠ್ಠಲ ಹಳ್ಳಿ, ಮಲ್ಲಿಖಾರ್ಜುನ ಸೇರಿ ಮುಂಬೈ ಪ್ರಯಾಣ ಬೆಳಸಿದರು. ಅಲ್ಲಿನ ಪಕೀರ ಬಜಾರಿನಲ್ಲಿ ಗುಲ್ವಾಡಿ ಸರ್ಕಲ್ ಬಳಿ ಅಡಗಿದ್ದ ವಾಸಿಂ’ನನ್ನು ಅವರೆಲ್ಲರೂ ಸೇರಿ ಬಂಧಿಸಿದರು. ಇನ್ನೂ ಈ ಪ್ರಕರಣ ಬೇದಿಸಲು ಸಾರ್ವಜನಿಕರು ಪೊಲೀಸರಿಗೆ ನೆರವಾಗಿದ್ದರು. ದುಷ್ಟರ ಸುಳಿವು ನೀಡಿದ ಇಬ್ಬರಿಗೆ ಪೊಲೀಸರು 50 ಸಾವಿರ ರೂ ಬಹುಮಾನವನ್ನು ನೀಡಿದರು.

ShareSendTweetShare
ADVERTISEMENT
Previous Post

ಉತ್ತರ ಕನ್ನಡ: 18 ಮಂಗಗಳ ಅಸಹಜ ಸಾವು!

Next Post

ಉಸಿರುಗಟ್ಟಿಸುವ ಬಿಸಿ ಗಾಳಿ: ಆರೋಗ್ಯ ಕಾಪಾಡುವುದೇ ದೊಡ್ಡ ಸವಾಲು!

Next Post

ಉಸಿರುಗಟ್ಟಿಸುವ ಬಿಸಿ ಗಾಳಿ: ಆರೋಗ್ಯ ಕಾಪಾಡುವುದೇ ದೊಡ್ಡ ಸವಾಲು!

ಹ್ವಾಯಿ ಇಲ್ಲಿ ಕೇಣಿ: 1 ಲಕ್ಷದ ಬಾಂಡ್ ಕೊಟ್ಟವರಿಗೆ ಮಾತ್ರ ಪ್ರತಿಭಟನೆ ಅವಕಾಶ!

ಹ್ವಾಯಿ ಇಲ್ಲಿ ಕೇಣಿ: 1 ಲಕ್ಷದ ಬಾಂಡ್ ಕೊಟ್ಟವರಿಗೆ ಮಾತ್ರ ಪ್ರತಿಭಟನೆ ಅವಕಾಶ!

Forest spirit all year round in the name of Padma Shri!

ಪದ್ಮಶ್ರೀ ಹೆಸರಿನಲ್ಲಿ ವರ್ಷವಿಡೀ ವನ ಚೇತನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.