6
  • Latest

ಉಸಿರುಗಟ್ಟಿಸುವ ಬಿಸಿ ಗಾಳಿ: ಆರೋಗ್ಯ ಕಾಪಾಡುವುದೇ ದೊಡ್ಡ ಸವಾಲು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉಸಿರುಗಟ್ಟಿಸುವ ಬಿಸಿ ಗಾಳಿ: ಆರೋಗ್ಯ ಕಾಪಾಡುವುದೇ ದೊಡ್ಡ ಸವಾಲು!

AchyutKumar by AchyutKumar
March 11, 2025
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ವಾತಾವರಣದಲ್ಲಿ ಈಚೆಗೆ ಸಾಕಷ್ಟು ಬದಲಾವಣೆಗಳಾಗಿದೆ. ನಿತ್ಯ ಬೆಳಗ್ಗೆ 11 ಗಂಟೆ ನಂತರದ ಉಷ್ಣತೆಗೆ ಜನ ತತ್ತರಿಸಿದ್ದಾರೆ. ಮಧ್ಯಾಹ್ನ 3 ಗಂಟೆಯವರೆಗೂ ಭಾರೀ ಪ್ರಮಾಣದ ಬಿಸಿಲು ಬರುತ್ತಿದ್ದು, ಕರಾವಳಿ ಭಾಗದ ಬಹುತೇಕರಿಗೆ ಮನೆಯಿಂದ ಹೊರಬರುವುದೇ ಸಮಸ್ಯೆಯಾಗಿದೆ!

`ಕೆಲವು ದಿನಗಳಿಂದ ಜಿಲ್ಲೆಯ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣತೆಯ ವಾತಾವರಣ ಕಂಡು ಬರುತ್ತಿದೆ. ಇದರಿಂದ ಉಂಟಾಗುವ ಉಷ್ಣ ಗಾಳಿಯ ಪರಿಣಾಮದಿಂದ ಅನಾರೋಗ್ಯಕ್ಕೆ ಒಳಗಾಗುವವರ ಸಾಧ್ಯತೆ ಹೆಚ್ಚಿದೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ದತೆ ಮಾಡಿಕೊಳ್ಳಿ’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸೂಚಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ಬಿಸಿ ಗಾಳಿಯ ಪರಿಣಾಮ ಹೀಟ್ ವೇವ್ ಸ್ಟೊಕ್’ನಿಂದ ಬಳಲುವವರಿಗೆ ತಕ್ಷಣದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ, ತಾಲೂಕು ಮತ್ತು ಸಮುದಾಯ ಆಸ್ಪತ್ರೆಗಳಲ್ಲಿ ಅಗತ್ಯ ಸಂಖ್ಯೆಯ ಹಾಸಿಗೆಗಳನ್ನು ಮೀಸಲಿಡಬೇಕು. ಚಿಕಿತ್ಸಾ ಕೊಠಡಿಯಲ್ಲಿ ತಂಪು ವಾತಾವರಣ ಇರುವಂತೆ ಕೂಲರ್, ಫ್ಯಾನ್ ಅಳವಡಿಸಬೇಕು’ ಎಂದು ಸೂಚಿಸಿದರು. `ಹೀಟ್ ವೇವ್ ಸಂದರ್ಭದಲ್ಲಿ ಹೊರಾಂಗಣದಲ್ಲಿ ಯಾವುದೇ ಬೇಸಿಗೆ ಶಿಬಿರ, ಎನ್‌ಸಿಸಿ, ಎನ್‌ಎಸ್‌ಎಸ್ ಶಿಬಿರಗಳ ಚಟುವಟಿಕೆಗಳನ್ನು ನಡೆಸಬಾರದು. ಬಿಸಿ ಗಾಳಿಯ ಪರಿಣಾಮಗಳ ಕುರಿತಂತೆ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಅರಿವು ಮೂಡಿಸಬೇಕು’ ಎಂದು ಸಲಹೆ ನೀಡಿದರು.

Advertisement. Scroll to continue reading.

`ಸಾರ್ವಜನಿಕರು ಹೊರಗಡೆ ಓಡಾಡುವಾಗ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಟೋಪಿಗಳನ್ನು ಧರಿಸುವುದು ಉತ್ತಮ. ಛತ್ರಿಗಳನ್ನು ಬಳಸಿದರೂ ಸಮಸ್ಯೆಯಿಲ್ಲ. ಜೊತೆಗೆ ಸಾದ್ಯವಾದಷ್ಟು ಮಧ್ಯಾಹ್ನದ ಸಮಯದಲ್ಲಿ ಹೊರಗಡೆ ಓಡಾಡುವುದನ್ನು ಕಡಿಮೆಗೊಳಿಸಬೇಕು’ ಎಂದು ಕರೆ ನೀಡಿದರು. `ಬಿಸಿಲಿನಲ್ಲಿ ಶ್ರಮದಾಯಕ ಕೆಲಸಗಳನ್ನು ಮಾಡಬಾರದು. ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು. ಆಗಾಗ ನೀರು ಕುಡಿಯುವ ಮೂಲಕ ಎಲ್ಲರೂ ದೇಹವು ನಿರ್ಜಲೀಕರಣವಾದಂತೆ ಎಚ್ಚರವಹಿಸಬೇಕು’ ಎಂದು ಕರೆ ನೀಡಿದರು.

ಈ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ನೀರಜ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ ಮೋಹನ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಅರ್ಚನಾ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ ರಮೇಶ್ ರಾವ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ ನಟರಾಜ್ ಇತರರಿದ್ದರು.

ShareSendTweetShare
ADVERTISEMENT
Previous Post

ಮದುವೆ ಮನೆಗೆ ಗೋ ಮಾಂಸ: ಗರ್ಭದ ಹಸು ಕೊಂದ ದುರಳರ ಸೆರೆ!

Next Post

ಹ್ವಾಯಿ ಇಲ್ಲಿ ಕೇಣಿ: 1 ಲಕ್ಷದ ಬಾಂಡ್ ಕೊಟ್ಟವರಿಗೆ ಮಾತ್ರ ಪ್ರತಿಭಟನೆ ಅವಕಾಶ!

Next Post
ಹ್ವಾಯಿ ಇಲ್ಲಿ ಕೇಣಿ: 1 ಲಕ್ಷದ ಬಾಂಡ್ ಕೊಟ್ಟವರಿಗೆ ಮಾತ್ರ ಪ್ರತಿಭಟನೆ ಅವಕಾಶ!

ಹ್ವಾಯಿ ಇಲ್ಲಿ ಕೇಣಿ: 1 ಲಕ್ಷದ ಬಾಂಡ್ ಕೊಟ್ಟವರಿಗೆ ಮಾತ್ರ ಪ್ರತಿಭಟನೆ ಅವಕಾಶ!

Forest spirit all year round in the name of Padma Shri!

ಪದ್ಮಶ್ರೀ ಹೆಸರಿನಲ್ಲಿ ವರ್ಷವಿಡೀ ವನ ಚೇತನ!

ಉತ್ತರ ಕನ್ನಡ | ಈ ಎಲ್ಲಾ ಊರುಗಳಲ್ಲಿ ಸರಾಯಿ ಮಾರಾಟ-ಸಾಗಾಟ ನಿಷೇಧ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.