6
  • Latest
Even if you throw garbage anywhere it's a police case!

ಎಲ್ಲೆಂದರಲ್ಲಿ ಕಸ ಎಸೆದರೂ ಪೊಲೀಸ್ ಕೇಸು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎಲ್ಲೆಂದರಲ್ಲಿ ಕಸ ಎಸೆದರೂ ಪೊಲೀಸ್ ಕೇಸು!

AchyutKumar by AchyutKumar
March 12, 2025
in ಸ್ಥಳೀಯ
Even if you throw garbage anywhere it's a police case!
advt advt advt
ADVERTISEMENT

`ರಸ್ತೆ ಅಂಚಿನಲ್ಲಿ ಕಸ ಎಸೆಯುವವರಿಂದ ಭಾರೀ ಪ್ರಮಾಣದ ದಂಡ ವಸೂಲಿ ಜೊತೆ ಅವರ ವಿರುದ್ಧ ಪೊಲೀಸ್ ಪ್ರಕರಣವನ್ನು ದಾಖಲಿಸಬೇಕು’ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅವರು ಬುಧವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಸಿ ಮತ್ತು ಘನ ತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆ ನಡೆಸಿದರು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಿರುವ ಬ್ಲಾಕ್ ಸ್ಪಾಟ್‌ಗಳಲ್ಲಿ ಸಿಸಿಟಿವಿ ಅಳವಡಿಸುವ ಮೂಲಕ ಮತ್ತು ನಗರಸಭೆ ಸಿಬ್ಬಂದಿಗಳಿAದ ನಿರಂತರವಾಗಿ ನಿಗಾವಹಿಸುವ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರನ್ನು ಪತ್ತೆ ಹಚ್ಚುವಂತೆ ಸೂಚಿಸಿದರು.

ADVERTISEMENT
ADVERTISEMENT

`ಕಸ ಹಾಕುವವರಿಗೆ ಗರಿಷ್ಠ ಮಟ್ಟದ ದಂಡವನ್ನು ವಿಧಿಸುವ ಜೊತೆಗೆ ಸಾರ್ವಜನಿಕ ಸ್ಥಳವನ್ನು ವಿರೂಪಗೊಳಿಸಿದ ಕುರಿತಂತೆ ಪೊಲೀಸ್ ಪ್ರಕರಣವನ್ನು ದಾಖಲಿಸಿ. ಪ್ರಕರಣ ದಾಖಲಿಸಿದ ಮತ್ತು ದಂಡ – ಪ್ರಗತಿಯ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿ’ ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

`ರಾಷ್ಟಿಯ ಹೆದ್ದಾರಿಯ ವ್ಯಾಪ್ತಿಯಲ್ಲಿ ತ್ಯಾಜ್ಯ ಕಂಡು ಬಂದಲ್ಲಿ ಸಂಬ0ಧಪಟ್ಟ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹೆದ್ದಾರಿಯಲ್ಲಿ ಪ್ರವಾಸಿಗರಿಗಿಂತ ಸ್ಥಳೀಯರಿಂದಲೇ ಹೆಚ್ಚಿನ ಪ್ರಮಾಣದ ತ್ಯಾಜ್ಯ ಸಂಗ್ರಹವಾಗುತ್ತಿದ್ದು ಈ ಬಗ್ಗೆ ಪರಿಶೀಲಿಸಬೇಕು. ನಗರ ಪ್ರದೇಶದಲ್ಲಿ ಕಸ ಹಾಕುವ ಪ್ರದೇಶದಲ್ಲಿನ ಅಕ್ಕಪಕ್ಕದ ಮನೆ ಮತ್ತು ವಾಣಿಜ್ಯ ಮಳಿಗೆಗಳಲ್ಲಿರುವ ಸಿಸಿ ಟಿವಿಗಳನ್ನು ಪರಿಶೀಲಿಸಿ ಕಸ ಹಾಕುವವರನ್ನು ಗುರುತಿಸಬೇಕು’ ಎಂದರು.

Advertisement. Scroll to continue reading.
Advertisement. Scroll to continue reading.

`ಹಸಿ ಮತ್ತು ಒಣ ತ್ಯಾಜ್ಯ ಸಂಗ್ರಹಣೆಯನ್ನು ವ್ಯವಸ್ಥಿತವಾಗಿ ಸಂಗ್ರಹಿಸಬೇಕು. ಸಂಗ್ರಹಿಸಿದ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಂಗಡಣೆ ಮಾಡಿ ಅದನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಬೇಕು. ಹಸಿ ಕಸದಿಂದ ಕಾಂಪೋಸ್ಟ್ ತಯಾರಿಕೆಗೆ ಆದ್ಯತೆ ನೀಡಬೇಕು. ಒಣ ಕಸವನ್ನು ಸಂಸ್ಕರಿಸಿ ಮಾರಾಟ ಮಾಡಬೇಕು’ ಎಂದರು. `ಇ-ತ್ಯಾಜ್ಯ ಸಂಗ್ರಹಣೆ ಕುರಿತಂತೆ ಅರಿವು ಮೂಡಿಸಿ ಆಭಿಯಾನ ಮಾದರಿಯಲ್ಲಿ ಕ್ರಮ ಕೈಗೊಂಡು ಈ ತಿಂಗಳ ಅಂತ್ಯಕ್ಕೆ ಸಂಗ್ರಹಿಸಿದ ಇ-ತ್ಯಾಜ್ಯದ ವಿವರಗಳನ್ನು ನೀಡಬೇಕು. ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು. ಈ ಬಗ್ಗೆ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಾಲಿನ್ಯ ನಿಯಮತ್ರಣ ಮಂಡಳಿವತಿಯಿ0ದ ನಿರಂತರವಾಗಿ ದಾಳಿಗಳನ್ನು ನಡೆಸಬೇಕು’ ಎಂದು ಸೂಚಿಸಿದರು.

`ವೈದ್ಯಕೀಯ ತ್ಯಾಜ್ಯಗಳ ಸಂಗ್ರಹ ಮತ್ತು ವಿಲೇವಾರಿಯನ್ನು ಇನ್ನೂ ಹೆಚ್ಚು ಸಮಪರ್ಕಕವಾಗಿ ಕೈಗೊಳ್ಳಬೇಕು. ಹಸಿ ಮತ್ತು ಘನ ತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಕಡ್ಡಾಯವಾಗಿ 3 ತಿಂಗಳಿಗೊಮ್ಮೆ ನಡೆಸುವ ಮೂಲಕ ಜಿಲ್ಲೆಯನ್ನು ಸಂಪೂರ್ಣ ತ್ಯಾಜ್ಯ ಮುಕ್ತ ಸ್ವಚ್ಛ ಜಿಲ್ಲೆಯನ್ನಾಗಿ ಮಾಡಲು ಶ್ರಮವಹಿಸಬೇಕು’ ಎಂದರು.

ಈ ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ.ಎಂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ್, ಜಿಲ್ಲಾ ಪರಿಸರ ಅಧಿಕಾರಿ ಬಿ ಕೆ ಸಂತೋಷ್ ಇದ್ದರು.

ShareSendTweetShare
ADVERTISEMENT
Previous Post

ಅನಧಿಕೃತ ಗೈರು: ಯಲ್ಲಾಪುರ ಪೊಲೀಸ್ ಸಿಬ್ಬಂದಿಗೆ ಅಮಾನತು ಶಿಕ್ಷೆ!

Next Post

ಸ್ಕೂಟಿಯಲ್ಲಿದ್ದ ಕಾಸು ಕಳ್ಳರ ಪಾಲು!

Next Post
Sagavani tree theft: The lawyer who questioned the thieves was threatened!

ಸ್ಕೂಟಿಯಲ್ಲಿದ್ದ ಕಾಸು ಕಳ್ಳರ ಪಾಲು!

Financial assistance to poor patients Former MLA writes letter to Chief Minister

ಬಡ ರೋಗಿಗಳಿಗೆ ಆರ್ಥಿಕ ನೆರವು: ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಶಾಸಕಿ

ಕಾರವಾರ ಇದೀಗ ದಗ ದಗ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.