6
  • Latest
Waste everywhere The District Magistrate's order has no value!

ಎಲ್ಲೆಂದರಲ್ಲಿ ತ್ಯಾಜ್ಯ: ಜಿಲ್ಲಾಧಿಕಾರಿ ಆದೇಶಕ್ಕೆ ಇಲ್ಲ ಬೆಲೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎಲ್ಲೆಂದರಲ್ಲಿ ತ್ಯಾಜ್ಯ: ಜಿಲ್ಲಾಧಿಕಾರಿ ಆದೇಶಕ್ಕೆ ಇಲ್ಲ ಬೆಲೆ!

AchyutKumar by AchyutKumar
March 16, 2025
in ಸ್ಥಳೀಯ
Waste everywhere The District Magistrate's order has no value!
advt advt advt
ADVERTISEMENT

`ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರಿಗೆ ದಂಡ ವಿಧಿಸಿ, ಪೊಲೀಸ್ ಪ್ರಕರಣ ದಾಖಲಿಸಿ’ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ  ಲಕ್ಷ್ಮೀಪ್ರಿಯಾ ಅಧೀನ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಆದರೆ, ಈ ಆದೇಶ ಕಿಂಚಿತ್ತು ಪಾಲನೆ ಆಗುತ್ತಿಲ್ಲ!

ಕುಮಟಾದ ಆಳ್ವೆಕೊಡಿ ಬಳಿಯ ಹೊನ್ಮವ ರಾಜ್ಯ ಹೆದ್ದಾರಿ ಪಕ್ಕ ಭಾನುವಾರ ಭಾರೀ ಪ್ರಮಾಣದ ತ್ಯಾಜ್ಯ ಬಿದ್ದಿದೆ. ಪರಿಣಾಮ ಮೀನು ಮಾರುಕಟ್ಟೆ ತಿರುವು ಪ್ರದೇಶ ಗಬ್ಬೆದ್ದಿದೆ. ನಿತ್ಯ ಈ ಮಾರ್ಗದಲ್ಲಿ ಪುರಸಭೆ ವಾಹನ ಸಂಚರಿಸಿದರೂ ತ್ಯಾಜ್ಯ ನಿರ್ವಹಣೆ ಬಗ್ಗೆ ಯಾರಿಗೂ ಕಾಳಜಿ ಇಲ್ಲ.

Advertisement. Scroll to continue reading.
ADVERTISEMENT
ADVERTISEMENT

ಅನುದಿನವೂ ಇಲ್ಲಿ ಅನೇಕರು ಆಗಮಿಸಿ ತ್ಯಾಜ್ಯ ಎಸೆಯುತ್ತಿದ್ದಾರೆ. ಬೀಡಾಡಿ ದನಗಳು ಅಲ್ಲಿನ ಪ್ಲಾಸ್ಟಿಕ್ ಸೇವಿಸಿ ಅನಾರೋಗ್ಯಕ್ಕೊಳಗಾಗುತ್ತಿವೆ. ಗಬ್ಬೆದ್ದ ಕೋಳಿ ತ್ಯಾಜ್ಯ ಬೀದಿ ನಾಯಿಗಳ ಪಾಲಾಗುತ್ತಿದೆ. ರಸ್ತೆ ದಾಟುವ ವೇಳೆ ಜಾನುವಾರುಗಳಿಗೆ ವಾಹನ ಗುದ್ದುವುದು ಇಲ್ಲಿನ ಸಾಮಾನ್ಯ ಸನ್ನಿವೇಶ.

Advertisement. Scroll to continue reading.

ಈ ಭಾಗದಲ್ಲಿ ದಯಾ ನಿಲಯ ಎಂಬ ಬುದ್ದಿಮಾಂದ್ಯ ವಸತಿ ಶಾಲೆಯೂ ಇದೆ. ಅಕ್ಕ-ಪಕ್ಕದ ಪ್ರದೇಶಗಳಲ್ಲಿ ಸಾಕಷ್ಟು ಮನೆಗಳಿವೆ. ವಿಪರೀತ ತ್ಯಾಜ್ಯದಿಂದ ರೋಗ ಹರಡುವ ಆತಂಕ ಹೆಚ್ಚಾಗಿದೆ. ಅದಾಗಿಯೂ ಪುರಸಭೆ ಸ್ವಚ್ಛತೆ ಬಗ್ಗೆ ಗಮನಹರಿಸುತ್ತಿಲ್ಲ.

`ಈ ಭಾಗದಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕ್ರಮವಾಗಬೇಕು. ತ್ಯಾಜ್ಯ ಎಸೆಯುವವರ ಪತ್ತೆಗೆ ಸಿಸಿ ಕ್ಯಾಮರಾ ಅಳವಡಿಸಬೇಕು. ಕೂಡಲೇ ಸ್ವಚ್ಛತೆಗೆ ಆದ್ಯತೆ ಕೊಡಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ಆಗ್ರಹಿಸಿದೆ. ಒಂದು ವಾರದೊಳಗೆ ಯಾವುದೇ ಕ್ರಮವಾಗದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿಯೂ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್, ಸುಧಾಕರ ನಾಯ್ಕ ಹಾಗೂ ಶಿವು ಮುಕ್ರಿ ಎಚ್ಚರಿಸಿದ್ದಾರೆ.

ShareSendTweetShare
ADVERTISEMENT
Previous Post

ಶಿಸ್ತಿನ ಸಿಫಾಯಿಗೆ 78ರ ಹರೆಯ!

Next Post

ಮೂರು ದಿನ ಶ್ರೀಧರ ಸ್ವಾಮಿ ಆರಾಧನೆ

Next Post
Three days of worship of Sridhara Swami

ಮೂರು ದಿನ ಶ್ರೀಧರ ಸ್ವಾಮಿ ಆರಾಧನೆ

Confrontation with officer Court grants journalist's plea!

ಅಧಿಕಾರಿ ಜೊತೆ ಸಂಘರ್ಷ: ಪತ್ರಕರ್ತನ ಮನವಿ ಪುರಸ್ಕರಿಸಿದ ನ್ಯಾಯಾಲಯ!

The girl who left home!

ಮನೆ ಬಿಟ್ಟು ಹೋದ ಹುಡುಗಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.