6
  • Latest
Sirsi Inauguration of new bus stand auspicious Transport Minister promises crores of rupees!

ಶಿರಸಿ | ನೂತನ ಬಸ್ ನಿಲ್ದಾಣಕ್ಕೆ ಉದ್ಘಾಟನೆ ಭಾಗ್ಯ: ಕೋಟಿ ಲೆಕ್ಕಾಚಾರದ ಭರವಸೆ ನೀಡಿದ ಸಾರಿಗೆ ಸಚಿವ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಿರಸಿ | ನೂತನ ಬಸ್ ನಿಲ್ದಾಣಕ್ಕೆ ಉದ್ಘಾಟನೆ ಭಾಗ್ಯ: ಕೋಟಿ ಲೆಕ್ಕಾಚಾರದ ಭರವಸೆ ನೀಡಿದ ಸಾರಿಗೆ ಸಚಿವ

AchyutKumar by AchyutKumar
in ರಾಜ್ಯ
Sirsi Inauguration of new bus stand auspicious Transport Minister promises crores of rupees!

ಕಳೆದ ನಾಲ್ಕುವರೆ ತಿಂಗಳಿನಿoದ ಉದ್ಘಾಟನೆಗೆ ಕಾದಿದ್ದ ಶಿರಸಿಯ ನೂತನ ಬಸ್ ನಿಲ್ದಾಣ ಶುಕ್ರವಾರದಿಂದ ಸಾರ್ವಜನಿಕ ಬಳಕೆಗೆ ಲಭ್ಯವಾಗಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಈ ಬಸ್ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ.

ADVERTISEMENT

`ಈ ವೇಳೆ 2 ಸಾವಿರ ಹೊಸ ಬಸ್ ಖರೀದಿಗಾಗಿ ಸರ್ಕಾರ ಅನುದಾನ ನೀಡಿದೆ’ ಎಂದು ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ. `ಬಸ್ ಖರೀದಿಗೆ 130 ಕೋಟಿ ಅನುದಾನ ಸಿಕ್ಕಿದ್ದು, ಮುಂದಿನ ಮೂರು ತಿಂಗಳ ಒಳಗೆ 300 ಬಸ್ ಖರೀದಿಸಲಾಗುತ್ತದೆ’ ಎಂಬ ವಿಷಯವನ್ನು ಜನರ ಮುಂದಿಟ್ಟಿದ್ದಾರೆ.

ಇದರೊAದಿಗೆ `ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ 6 ಜಿಲ್ಲೆಯ ಜನರ ಅನುಕೂಲಕ್ಕಾಗಿ ಒಟ್ಟು 700 ಹೆಚ್ಚುವರಿ ಬಸ್ ಸೌಕರ್ಯ ಕಲ್ಪಿಸುವ ಭರವಸೆ ನೀಡಿದ್ದಾರೆ. `ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ 480 ಕೋಟಿ ಮಹಿಳೆಯರು ಉಚಿತವಾಗಿ ಸಂಚರಿಸಿದ್ದಾರೆ. ಕಳೆದ 4 ವರ್ಷಗಳಿಂದ ಸಾರಿಗೆ ಸಂಸ್ಥೆಗಳಲ್ಲಿ ಬಸ್ ಖರೀದಿಸದೇ ಇರುವದರಿಂದ ಸಮಸ್ಯೆಯಾಗಿದ್ದು, ಎಲ್ಲಾ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುತ್ತದೆ’ ಎಂದವರು ಹೇಳಿದ್ದಾರೆ.

Advertisement. Scroll to continue reading.

ಉದ್ಯೋಗ ನೇಮಕಾತಿ:
`4 ಸಾರಿಗೆ ಸಂಸ್ಥೆಗಳಲ್ಲಿ ಒಟ್ಟು 9000 ಸಿಬ್ಬಂದಿ ನೇಮಕ ಮಾಡಲಾಗುತ್ತಿದ್ದು, ಅದರಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 2,000 ಸಿಬ್ಬಂದಿ ಒದಗಿಸಲಾಗುತ್ತದೆ. ಅನುಕಂಪ ಆಧಾರದಲ್ಲಿ 1000 ಸಿಬ್ಬಂದಿ ನೇಮಕ ಆಗಲಿದೆ’ ಎಂದವರು ಮಾಹತಿ ನೀಡಿದರು. `ಸಾರಿಗೆ ಸಂಸ್ಥೆಯ ಸಿಬ್ಬಂದಿಗಾಗಿ ಆರೋಗ್ಯ ವಿಮೆ ಜಾರಿಗೊಳಿಸಿದ್ದು, ವಾರ್ಷಿಕ 850ರೂ ಭರಿಸಿದರೆ ಇಡೀ ಕುಟುಂಬದ ಸದಸ್ಯರಿಗೆ ಅನುಕೂಲವಾಗಲಿದೆ. ಈ ಸಂಬAಧ 300 ಆಸ್ಪತ್ರೆಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಮುಂದಿನ 3 ತಿಂಗಳಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಈ ಯೋಜನೆ ಅನುಷ್ಠಾನ ಮಾಡಲಾಗುತ್ತದೆ’ ಎಂದವರು ಹೇಳಿದರು.

Advertisement. Scroll to continue reading.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಮಾತನಾಡಿ `ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದೆ, ಸರ್ಕಾರ ರಚನೆ ಪೂರ್ವದಲ್ಲಿ ನೀಡಿದ ಆಶ್ವಾಸನೆಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲಾಗಿದೆ. ವಿದ್ಯಾರ್ಥಿಗಳು, ಮಹಿಳೆಯರಿಗೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಅನುಕೂಲ ಮಾಡಿಕೊಡಲಾಗಿದೆ’ ಎಂದರು.

ವಾ.ಕ.ರಾ.ಸಾ.ಸAಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಭರಮಗೌಡ (ರಾಜು) ಅಲಗೌಡ ಕಾಗೆ, ಶಿರಸಿ ಶಾಸಕ ಭೀಮಣ್ಣ ನಾಯ್ಕ, ಕಾರ್ಯಕ್ರಮದಲ್ಲಿ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ಶಿರಸಿ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೆರೆ, ಶಿರಸಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಎನ್ ಗೌಡ, ವಾ.ಕ.ರ.ಸಾ.ಸಂಸ್ಥೆಯ ಉಪಾಧ್ಯಕ್ಷ ಪೀರಸಾಬ್ ಕೌತಾಳ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಯೋಗೇಶ ಎ ಎಂ, ಜಂಟಿ ಸಾರಿಗೆ ಆಯುಕ್ತೆ ಓಂಕಾರೇಶ್ವರಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಶಿರಸಿ ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಇದ್ದರು.

Previous Post

ನಿಂತಿದ್ದ ಲಾರಿಗೆ ಪಿಕಪ್ ಡಿಕ್ಕಿ: ಸಾವು

Next Post

ಅರಣ್ಯಾಧಿಕಾರಿ ಜೀಪ್ ಪಲ್ಟಿ: ಚಾಲಕನಿಗೆ ಪೆಟ್ಟು!

Next Post

ಅರಣ್ಯಾಧಿಕಾರಿ ಜೀಪ್ ಪಲ್ಟಿ: ಚಾಲಕನಿಗೆ ಪೆಟ್ಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ