6
  • Latest
Outcry against the innocent.. Riots at the police station too Bhupa finally goes to jail!

ಅಮಾಯಕರ ವಿರುದ್ಧ ಕೂಗಾಟ.. ಪೊಲೀಸ್ ಠಾಣೆಯಲ್ಲಿಯೂ ರಂಪಾಟ: ಕೊನೆಗೂ ಜೈಲು ಸೇರಿದ ಭೂಪ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಮಾಯಕರ ವಿರುದ್ಧ ಕೂಗಾಟ.. ಪೊಲೀಸ್ ಠಾಣೆಯಲ್ಲಿಯೂ ರಂಪಾಟ: ಕೊನೆಗೂ ಜೈಲು ಸೇರಿದ ಭೂಪ!

AchyutKumar by AchyutKumar
in ಸ್ಥಳೀಯ
Outcry against the innocent.. Riots at the police station too Bhupa finally goes to jail!

ಸರಾಯಿ ಕೊಡಿಸದ ಕಾರಣ ಸ್ನೇಹಿತ ಬೈಕ್ ಜೊತೆ ಪರಾರಿಯಾಗಿದ್ದ ಜೊಯಿಡಾದ ಪ್ರವೀಣ ಸುಧೀರ್’ರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಬಂಧನದ ವೇಳೆಯೂ ಪ್ರವೀಣ ಸುಧೀರ್ ಸಾಕಷ್ಟು ರಂಪಾಟ ನಡೆಸಿದ್ದು, ಬಂಧನಕ್ಕೆ ತೆರಳಿದವರಿಗೆ ಬೆದರಿಕೆ ಒಡ್ಡಿದ ಬಗ್ಗೆಯೂ ಪ್ರಕರಣ ದಾಖಲಾಗಿದೆ.

ADVERTISEMENT

ರಾಮನಗರದ ಪ್ರವೀಣ ಸುಧೀರ್ ಅವರು ಮಾರ್ಚ 9ರ ರಾತ್ರಿ ಶುಭಂ ಉತ್ತರೆ ಎಂಬಾತರ ಬಳಿ `ಸರಾಯಿ ಕುಡಿಸು’ ಎಂದು ಕಾಡಿಸಿದ್ದರು. ಸರಾಯಿ ಕೊಡಿಸದ ಕಾರಣ ಶುಭಂ ಅವರ ಮನೆಗೆ ನುಗ್ಗಿ ಕೂಗಾಡಿದ್ದರು. ಶುಭಂ ಅವರ ತಾಯಿ ಬಳಿ `ನಿನ್ನ ಮಗನಿಗಾಗಿ ನಾನು ಸಾಕಷ್ಟು ದುಡ್ಡು ಖರ್ಚು ಮಾಡಿದ್ದೇನೆ’ ಎಂದಿದ್ದರು. ಇದಕ್ಕೆ ವಿರೋಧವ್ಯಕ್ತಪಡಿಸಿದ ಶುಭಂ ಅವರ ಕೆನ್ನೆಗೆ ಬಾರಿಸಿದ್ದರು. ಹೊಡೆದಾಟ ತಡೆಯಲು ಆಗಮಿಸಿದ ಶುಭಂ ಅವರ ಸಹೋದರಿ ಸಾಕ್ಷಿ ಅವರ ಮೈ ಮುಟ್ಟಿ ಅನುಚಿತವಾಗಿ ವರ್ತಿಸಿದ್ದರು. ಕೊನೆಗೆ ಮನೆ ಅಂಗಳದಲ್ಲಿದ್ದ ಬೈಕನ್ನು ಅಪಹರಿಸಿಕೊಂಡು ಹೋಗಿದ್ದರು.

ಹೋಗವ ಮುನ್ನ `ನನ್ನ ವಿರುದ್ಧ ಸಾಕಷ್ಟು ದೂರುಗಳಿವೆ. ಪೊಲೀಸರಿಂದ ಸಹ ಏನೂ ಮಾಡಲಾಗುವುದಿಲ್ಲ’ ಎಂದು ಹೇಳಿ ಬೆದರಿಸಿದ್ದರು. ಶುಭಂ ಪತ್ತಾರ್ ಅವರು ರಾಮನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ ತನಿಖೆ ನಡೆಸಿದ ಪೊಲೀಸರು ಪ್ರವೀಣ ಸುಧೀರ್ ವಿಚಾರಣೆಗೆ ತೆರಳಿದ್ದರು. ಜೊಯಿಡಾ ರಾಮಲಿಂಗಗಲ್ಲಿಯಲ್ಲಿದ್ದ ಪ್ರವೀಣ ಸುಧೀರ್ ನೋಟಿಸ್ಸು ಸ್ವೀಕರಿಸಲು ಸಹ ಬಾಗಿಲು ತೆರೆದಿರಲಿಲ್ಲ. ಅಲ್ಲಿನ ಬೀಟ್ ಸಿಬ್ಬಂದಿ ರಾಜು ಚಲವಾದಿ ಅವರನ್ನು ಆ ವೇಳೆ ಪ್ರವೀಣ ಸುಧೀರ್ ನಿಂದಿಸಿದ್ದರು.

Advertisement. Scroll to continue reading.

ಅದಾದ ನಂತರ ಮಾರ್ಚ 31ರಂದು ಪೊಲೀಸ್ ಸಿಬ್ಬಂದಿ ಸಿಬ್ಬಂದಿ ರಾಜು ಚಲವಾದಿ, ಸದಾಶಿವ ಮಠಪತಿ ಅವರ ಜೊತೆ ಪಿಎಸ್‌ಐ ಬಸವರಾಜ ಮಬನೂರು ಸಹ ಪ್ರವೀಣ ಅವರ ಬಂಧನಕ್ಕೆ ತೆರಳಿದ್ದರು. ಆಗಲೂ, ಪ್ರವೀಣ ಸುಧೀರ್ ಮನೆ ಬಾಗಿಲು ತೆರೆಯದೇ ಪ್ರತಿರೋಧವ್ಯಕ್ತಪಡಿಸಿದರು. ಅದಾಗಿಯೂ, ಪೊಲೀಸರು ಪ್ರವೀಣ ಸುಧೀರರನ್ನು ವಶಕ್ಕೆಪಡೆದರು. ರಾಮಲಿಂಗೇಶ್ವರ ದೇವಸ್ಥಾನ ಎದುರು ನಡೆದುಬರುವಾಗ `ನಮ್ಮ ಏರಿಯಾ ಬೀಟಿಗೆ ಈ ಹೊಲೆಯರನ್ನು ನೇಮಿಸಿದ್ದಾರೆ. ನನ್ನನ್ನು ಮುಟ್ಟಬೇಡ’ ಎಂದು ಪ್ರವೀಣ ಸುಧೀರ್ ಕೂಗಾಡಿದರು. ರಾಜು ಚಲವಾದಿ ಅವರ ಜಾತಿಯನ್ನು ಹಿಯಾಳಿಸಿದರು. ರಾಜು ಚಲವಾದಿ ಅವರು ಕೈ ಹಿಡಿಯಲು ಯತ್ನಿಸಿದಾಗ ಬಲಗೈ ತಿರುಚಿದರು. ಸದಾಶಿವ ಮಠಪತಿ ಅವರ ಎದೆಗೆ ತಿವಿದು ನೋವುಂಟು ಮಾಡಿದರು.

Advertisement. Scroll to continue reading.

ಪೊಲೀಸ್ ಠಾಣೆಗೆ ಬಂದ ನಂತರವೂ ಅಲ್ಲಿ ಪ್ರವೀಣ ಸುಧೀರ್ ಕೂಗಾಡಿದರು. `ರಾಮನಗರದಲ್ಲಿ ಹೇಗೆ ಡ್ಯೂಟಿ ಮಾಡುತ್ತೀರಿ? ನೋಡುತ್ತೇನೆ’ ಎನ್ನುತ್ತ ಬೆದರಿಸಿದರು. ಆ ಬೆದರಿಕೆಗೆ ಬಗ್ಗದೇ ಪೊಲೀಸರು ಪ್ರವೀಣ ಸುಧೀರ’ರನ್ನು ಜೈಲಿಗೆ ಕಳುಹಿಸಿದರು.

Previous Post

ಪುಕ್ಕಟ್ಟೆ ಪ್ರಚಾರಕ್ಕೆ ಕತ್ತರಿ ಪ್ರಯೋಗ: ತ್ಯಾಜ್ಯ ತುಂಬುವ ತೆರೆದ ವಾಹನದಲ್ಲಿ ವಿದ್ಯಾರ್ಥಿನಿಯರ ಚಿತ್ರ ಮೆರವಣಿಗೆ!

Next Post

ಬಸ್ಸು ಓಡಿಸಬೇಕು… ದುಡ್ಡು ಎಣಿಸಬೇಕು!

Next Post
I have to drive the bus... I have to count money!

ಬಸ್ಸು ಓಡಿಸಬೇಕು... ದುಡ್ಡು ಎಣಿಸಬೇಕು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ