6
  • Latest
May Ambedkar Jayanti be meaningfu

`ಅರ್ಥಪೂರ್ಣವಾಗಿರಲಿ ಅಂಬೇಡ್ಕರ್ ಜಯಂತಿ’

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

`ಅರ್ಥಪೂರ್ಣವಾಗಿರಲಿ ಅಂಬೇಡ್ಕರ್ ಜಯಂತಿ’

AchyutKumar by AchyutKumar
April 1, 2025
in ರಾಜ್ಯ
May Ambedkar Jayanti be meaningfu
advt advt advt
ADVERTISEMENT

`ಉತ್ತರ ಕನ್ನಡ ಜಿಲ್ಲೆಯಲ್ಲಿ ಏಪ್ರಿಲ್ 5ರಂದು ಬಾಬು ಜಗಜೀವನ ರಾಮ್ ಜಯಂತಿ ಹಾಗೂ ಏಪ್ರಿಲ್ 14ರಂದು ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ ನಡೆಯಲಿದೆ. ಈ ಎರಡು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸೂಚಿಸಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. `ಏಪ್ರಿಲ್ 14ರಂದು ನಡೆಯುವ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಲಾರ್ಪಣೆ, ಪುಷ್ಪ ನಮನ ಮತ್ತು ಪೂಜೆ ಸಲ್ಲಿಸಲಾಗುತ್ತದೆ. ಇದಾದ ನಂತರ ಭಾವಚಿತ್ರಗಳನ್ನು ತರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಿಜೃಂಭಣೆಯ ಮೆರವಣಿಗೆ ಆಯೋಜಿಸಬೇಕು’ ಎಂದವರು ತಿಳಿಸಿದರು.

ADVERTISEMENT
ADVERTISEMENT

ಮೆರವಣಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರು ಮತ್ತು ಮಜ್ಜಿಗೆ ವ್ಯವಸ್ಥೆ ಮಾಡುವಂತೆ ತಿಳಿಸಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾತಂಡಗಳನ್ನು ಪ್ರಾಯೋಜಿಸುವಂತೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಮಹಿಳೆಯರಿಂದ ಕುಂಭಮೇಳದ ಮೆರವಣಿಗೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಬಾಬು ಜಗಜೀವನ ರಾಮ್ ಮತ್ತು ಬಿ ಆರ್ ಅಂಬೇಡ್ಕರ್ ಅವರ ಕುರಿತು ವಿಷಯ ತಜ್ಞರಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು. ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಪ ಜಾತಿ ಮತ್ತು ಪ ಪಂಗಡದ ಪ್ರತಿಭಾನ್ವಿತರಿಗೆ ಹಾಗೂ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಬೇಕು’ ಎಂದು ಸೂಚಿಸಿದರು.

Advertisement. Scroll to continue reading.
Advertisement. Scroll to continue reading.

`ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಎಲ್ಲಾ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಪೊಲೀಸ್ ಇಲಾಖೆವತಿಯಿಂದ ಮೆರವಣಿಗಗೆ ಸೂಕ್ತ ಪೊಲೀಸ್ ಭದ್ರತೆ ಮತ್ತು ಪೊಲೀಸ್ ಬ್ಯಾಂಡ್ ಒದಗಿಸಬೇಕು’ ಎಂದರು. ಈ ಸಭೆಯಲ್ಲಿ ಉಪವಿಭಾಗಾಧಿಕಾರಿ ಕನಿಷ್ಕ, ಜಿ ಪಂ ಉಪಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಸಮುದಾಯದ ಮುಖಂಡರಾದ ದೀಪಕ್ ಕುಡಾಲಕರ್, ಹನುಮಂತ ತಳವಾರ್, ಮಾಲ ಪ್ರದೀಪ್ ಹುಲಸ್ವಾರ, ಶ್ಯಾಮ್ ಸುಂದÀರ್ ಗೋಕರ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

 

ShareSendTweetShare
ADVERTISEMENT
Previous Post

ಚಾಕಲೇಟು ಆಸೆ ತೋರಿಸಿ ಅತ್ಯಾಚಾರ: ಒಂದನೇ ತರಗತಿ ಕೂಸಿನ ಬದುಕು ನರಕ!

Next Post

ಅರಣ್ಯವಾಸಿಗಳ ಪರವಾಗಿ 144 ಸಂಘಟನೆ!

Next Post
Forest rights Hearing in Supreme Court on April 2

ಅರಣ್ಯವಾಸಿಗಳ ಪರವಾಗಿ 144 ಸಂಘಟನೆ!

Chandguli From now on I'll eat Tambuli here every day!

ಚಂದ್ಗುಳಿ | ಇನ್ಮುಂದೆ ಇಲ್ಲಿ ನಿತ್ಯವೂ ತಂಬುಳಿ ಊಟ!

ಅಡಿಕೆ ವಿಮೆ | ಸಚಿವರ ಬಳಿ ಸಂಸದರ ದೂರು: ಕೇಂದ್ರ ಸರ್ಕಾರದ ಆದೇಶಕ್ಕೆ ಬೆಲೆಯೇ ಇಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.