ಅರಣ್ಯ ಹಕ್ಕು ಕಾಯ್ದೆ ವಿಷಯವಾಗಿ ಸುಪ್ರೀಂ ಕೋರ್ಟನಲ್ಲಿ ಏಪ್ರಿಲ್ 2ರಂದು ವಿಚಾರಣೆ ನಡೆಯಲಿದೆ. `ಕೇಂದ್ರ ಸರ್ಕಾರವೂ ಅರಣ್ಯ ಹಕ್ಕು ಕಾಯಿದೆಯನ್ನು ಸಮರ್ಥವಾಗಿ ಸಮರ್ಥಿಸಿಕೊಳ್ಳಬೇಕು’ ಎಂದು ಆಗ್ರಹಿಸಿ 144 ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿವೆ.
ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವ ಜೂವಾಲ್ ಓರಾಮ ಅವರಿಗೆ ಮಾರ್ಚ 31ರಂದು ಇಮೇಲ್ ಮೂಲಕ ವಿವಿಧ ಸಂಘಟನೆಯವರು ತಮ್ಮ ಅಭಿಪ್ರಾಯ ರವಾನಿಸಿದ್ದಾರೆ. `ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿ ಕುಟುಂಬಗಳಿಗೆ ಅರಣ್ಯ ಭೂಮಿ ಹಕ್ಕಿಗೆ ಸಂಬAಧಿಸಿ ಕೇಂದ್ರ ಸರ್ಕಾರ ಅರಣ್ಯವಾಸಿಗಳ ಪರ ನಿಲುವು ಬೆಂಬಲಿಸಬೇಕು’ ಎಂದು ಪತ್ರದಲ್ಲಿ ವಿವರಿಸಲಾಗಿದೆ.
`ಸುಪ್ರೀಂ ಕೋರ್ಟ ಹಿಂದಿನ ಆದೇಶದಲ್ಲಿ ನಿಗದಿಗೊಳಿಸಿದ ನಿಯಮಾವಳಿಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಪಾಲನೆ ಮಾಡಿಲ್ಲ. ಸುಪ್ರೀಂ ಕೋರ್ಟ ಅರಣ್ಯ ಭೂಮಿ ಮಂಜೂರಿಗೆ ನಿಗದಿಗೊಳಿಸಿದ ನಿಯಮಾವಳಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ’ ಎಂದು ಸಹ ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಉಪ-ಜಿಲ್ಲಾಸಮಿತಿ ಹಸ್ತಕ್ಷೇಪ:
`ಅರಣ್ಯ ಹಕ್ಕು ಮಂಜೂರಿ ಪ್ರಕ್ರಿಯೆಯಲ್ಲಿ ಗ್ರಾಮ ಸಭೆಯ ನಿರ್ಣಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ. ಉಪವಿಭಾಗ ಮತ್ತು ಜಿಲ್ಲಾಮಟ್ಟದ ಅರಣ್ಯ ಹಕ್ಕು ಸಮಿತಿಯಲ್ಲಿ ಅಧಿಕಾರದ ದುರುಪಯೋಗ ಮತ್ತು ಅನಿಯಂತ್ರಿತ ಹಸ್ತಕ್ಷೇಪ ಉಂಟುಮಾಡಿದೆ. ಇಂದರಿoದ ಹೆಚ್ಚಿನ ಅರಣ್ಯವಾಸಿಗಳು ಭೂಮಿ ಹಕ್ಕಿನಿಂದ ವಂಚಿತರಾಗಿದ್ದಾರೆ’ ಎಂದು ಪತ್ರದಲ್ಲಿ ಉಲ್ಲೇಖಿಸದ ಬಗ್ಗೆ ನ್ಯಾಯವಾದಿ ರವೀಂದ್ರ ನಾಯ್ಕ ತಿಳಿಸಿದ್ದಾರೆ.