6
  • Latest
Night but fear the dark A dark shadow looms over the Kadamba festival!

ರಾತ್ರಿ ಆದರೆ ಕತ್ತಲ ಭಯ: ಕದಂಬ ಉತ್ಸವಕ್ಕೆ ಕರಾಳ ಛಾಯೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ರಾತ್ರಿ ಆದರೆ ಕತ್ತಲ ಭಯ: ಕದಂಬ ಉತ್ಸವಕ್ಕೆ ಕರಾಳ ಛಾಯೆ!

AchyutKumar by AchyutKumar
in ರಾಜ್ಯ
Night but fear the dark A dark shadow looms over the Kadamba festival!

ಬನವಾಸಿಯಲ್ಲಿ ಪದೇ ಪದೇ ವಿದ್ಯುತ್ ಕಡಿತವಾಗುತ್ತಿದೆ. ಇದರಿಂದ ದುಡಿದು ತಿನ್ನುವ ರೈತರ ಹೊಲ-ಗದ್ದೆಗಳಿಗೂ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಹೆಸ್ಕಾಂ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದ ರೈತರು ಕದಂಬ ಉತ್ಸವವನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ.

ADVERTISEMENT

ಶಿರಸಿ ತಾಲೂಕಿನ ಬನವಾಸಿಯಲ್ಲಿ ಏಪ್ರಿಲ್ 12 ಹಾಗೂ 13ಕ್ಕೆ ಕದಂಬ ಉತ್ಸವ ಆಚರಿಸಲು ಸಿದ್ಧತೆ ನಡೆದಿದೆ. ಆದರೆ, `ವಿದ್ಯುತ್ ಸಮಸ್ಯೆ ಬಗೆಹರಿಸದೇ ಉತ್ಸವ ಆಚರಿಸಲು ಬಿಡುವುದಿಲ್ಲ’ ಎಂದು ಆ ಭಾಗದ ರೈತರು ಹೇಳಿದ್ದಾರೆ. ಬುಧವಾರ ಬನವಾಸಿಯ ಪಂಪ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ಇದಕ್ಕೆ ಆ ಭಾಗದ ಅಂಗಡಿ ವ್ಯಾಪಾರಸ್ಥರು ಬೆಂಬಲ ನೀಡಿದರು. ವಾಣಿಜ್ಯ ಮಳಿಗೆಗಳನ್ನು ಬಂದ್ ಮಾಡಿ ವಿದ್ಯುತ್ ಕಡಿತದ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು.

`ಹೊಸ ಗ್ರಿಡ್ ಸ್ಥಾಪನೆಗೆ ಅರಣ್ಯ ಇಲಾಖೆ ಅಡ್ಡಗಾಲು ಹಾಕುತ್ತಿದೆ. ಹೀಗಾಗಿ ಹೆಸ್ಕಾಂ ಅಧಿಕಾರಿಗಳು ಅರಣ್ಯ ಇಲಾಖೆ ಕಚೇರಿಗೆ ವಿದ್ಯುತ್ ಸರಬರಾಜು ನಿಲ್ಲಿಸಬೇಕು. ಆಗ ಅವರಿಗೆ ವಿದ್ಯುತ್ ಕಡಿತದ ಸಮಸ್ಯೆ ಅರ್ಥವಾಗುತ್ತದೆ’ ಎಂದು ಪ್ರತಿಭಟನಾಕಾರರು ಹೇಳಿದರು. ಹೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಂದು ರಯತರನ್ನು ಸಮಾಧಾನ ಮಾಡಲು ಪ್ರಯತ್ನಿಸಿದರು. ಆದರೆ, ಪ್ರಯೋಜನವಾಗಲಿಲ್ಲ. ಕದಂಬ ಉತ್ಸವದ ಒಳಗೆ ವಿದ್ಯುತ್ ಸಮಸ್ಯೆ ಬಗೆಹರಿಸದೇ ಇದ್ದರೆ ಉತ್ಸವದ ದಿನವನ್ನು ಕರಾಳ ದಿನ ಎಂದು ಆಚರಿಸುವುದಾಗಿ ಎಚ್ಚರಿಸಿದರು. ಉತ್ಸವಕ್ಕೆ ಬರುವ ಗಣ್ಯರ ಮುಂದೆಯೂ ಪ್ರತಿಭಟಿಸುವುದಾಗಿ ಎಚ್ಚರಿಸಿದರು.

Advertisement. Scroll to continue reading.

`2008ರಿಂದಲೂ ವಿದ್ಯುತ್ ಸಮಸ್ಯೆ ಈಡೇರಿಸುವಂತೆ ಒತ್ತಾಯಿಸುತ್ತಿದ್ದೇವೆ. ಆದರೆ, ಈವರೆಗೂ ಸಮಸ್ಯೆ ಆಲಿಸಿದವರಿಲ್ಲ. ವಿದ್ಯುತ್ ಸಮಸ್ಯೆ ಬಗೆಹರಿಯದೇ ಉತ್ಸವ ಆಚರಿಸುವುದು ಬೇಡ. ನಮಗೆ ಸಮಸ್ಯೆ ಮೊದಲು ಬಗೆಹರಿಯಬೇಕು’ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದರು. ಸದ್ಯ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಮಾಡಿಕೊಡುವುದಾಗಿ ಹೆಸ್ಕಾಂ ಅಧಿಕಾರಿಗಳು ಭರವಸೆ ನೀಡಿದರು. ಅದಾಗಿಯೂ, `ಶಾಶ್ವತ ಪರಿಹಾರ ಕಲ್ಪಿಸಬೇಕು’ ಎಂದು ಎಂದು ಪಟ್ಟು ಹಿಡಿದರು. ಕೊನೆಗೆ ತಾಲೂಕಾಡಳಿತದ ಅಧಿಕಾರಿಗಳು ಆಗಮಿಸಿ ರೈತರ ಮನವೊಲೈಕೆ ಮಾಡಿದರು. ತಹಶೀಲ್ದಾರ್ ಶೈಲೇಶ ಪರಮಾನಂದ ಅವರ ಮಾತಿಗೆ ಬೆಲೆಕೊಟ್ಟು ರೈತರು ಪ್ರತಿಭಟನೆ ಹಿಂಪಡೆದರು.

Advertisement. Scroll to continue reading.
Previous Post

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

Next Post

ಕಿಡಿಗೇಡಿಗಳ ಕಾಟಕ್ಕೆ ಬೆಚ್ಚಿಬಿದ್ದ ಮಧುದುಂಬಿ: ಬೆಟ್ಟ ಬಿದ್ದು ಓಡಿದರೂ ಬಿಡದೇ ಬೆನ್ನಟ್ಟಿದ ಜೇನುಹುಳ!

Next Post
A swarm of bees attacked people walking in Dandeli city. The people, terrified by the swarm of bees, ran towards the hills, where the bees chased them and attacked three of them.

ಕಿಡಿಗೇಡಿಗಳ ಕಾಟಕ್ಕೆ ಬೆಚ್ಚಿಬಿದ್ದ ಮಧುದುಂಬಿ: ಬೆಟ್ಟ ಬಿದ್ದು ಓಡಿದರೂ ಬಿಡದೇ ಬೆನ್ನಟ್ಟಿದ ಜೇನುಹುಳ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ