6
  • Latest
ಮಗುವಿನ ಮೇಲೆ ಅತ್ಯಾಚಾರ: ಅಸ್ಲಾಂ ವಿರುದ್ಧ ಸಿಡಿದೆದ್ದ ಸಾವಿರಾರು ಜನ!

ಮಗುವಿನ ಮೇಲೆ ಅತ್ಯಾಚಾರ: ಅಸ್ಲಾಂ ವಿರುದ್ಧ ಸಿಡಿದೆದ್ದ ಸಾವಿರಾರು ಜನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಗುವಿನ ಮೇಲೆ ಅತ್ಯಾಚಾರ: ಅಸ್ಲಾಂ ವಿರುದ್ಧ ಸಿಡಿದೆದ್ದ ಸಾವಿರಾರು ಜನ!

AchyutKumar by AchyutKumar
April 3, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಮೇಲಿನ ದೌರ್ಜನ್ಯ ಖಂಡಿಸಿ ಕಿರವತ್ತಿಯಲ್ಲಿ ಸಾವಿರಾರು ಜನ ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಅತ್ಯಾಚಾರಿ ಆರೋಪಿ ಅಸ್ಲಾಂ’ಗೆ ಮರಣ ದಂಡನೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟುಹಿಡಿದರು. ‘ಅಕ್ರಮ ಸರಾಯಿ ಹಾಗೂ ಗಾಂಜಾ ನಶೆಯಲ್ಲಿ ಹೇಯಕೃತ್ಯ ನಡೆದಿದ್ದು, ಅಕ್ರಮ ಚಟುವಟಿಕೆಯನ್ನು ಮೊದಲು ತಡೆಯಿರಿ’ ಎಂದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಒತ್ತಾಯಿಸಿದರು.

ಕಿರವತ್ತಿಯ ಪೊಲೀಸ್ ಹೊರಠಾಣೆ ಬಳಿ ಜಮಾಯಿಸಿದ ಜನ ತಮ್ಮೊಳಗಿನ ಆಕ್ರೋಶವನ್ನು ಹೊರ ಹಾಕಿದರು.‌ ‘ಪುಟ್ಟ ಬಾಲಕಿಯ ಬದುಕು ಹಾಳು ಮಾಡಿದ ಪಾಪಿಯನ್ನು ಗಲ್ಲಿಗೆ ಏರಿಸಬೇಕು’ ಎಂದು ಆಗ್ರಹಿಸಿದರು. ಸಂತ್ರಸ್ತ ಬಾಲಕಿ ಕುಟುಂಬದವರು ಸಹ ಆಗಮಿಸಿ ಕಣ್ಣೀರು ಹಾಕಿದರು.

ADVERTISEMENT
ADVERTISEMENT

‘ಮಕ್ಕಳ ಮೇಲಿನ ದೌರ್ಜನ್ಯ ತಡೆಯಿರಿ. ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಿ’ ಎಂದು ಪ್ರತಿಭಟನಾಕಾರರು ಆಕ್ರೋಶದಿಂದ ಆಗ್ರಹಿಸಿದರು. ‘ಸಂತ್ರಸ್ತ ಬಾಲಕಿ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಬೇಕು. ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು. ಬಾಲಕಿಯ ಆರೋಗ್ಯ ಸ್ಥಿತಿಯ ಬಗ್ಗೆ ದಿನಕ್ಕೆ ಎರಡು ಬಾರಿ ಊರಿನವರಿಗೆ ಮಾಹಿತಿ ಒದಗಿಸಬೇಕು’ ಎಂಬ ಬೇಡಿಕೆಗಳನ್ನು ಕಿರವತ್ತಿ ಗ್ರಾ ಪಂ ಸದಸ್ಯ ಸುನೀಲ ಕಾಂಬಳೆ ಮುಂದಿಟ್ಟರು. ನೆರೆದಿದ್ದ ಪ್ರತಿಭಟನಾಕಾರರು ಈ ಮಾತನ್ನು ಬೆಂಬಲಿಸಿದರು.

ಕಿರವತ್ತಿಯ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ ಅತ್ಯಾಚಾರ ಘಟನೆ ಖಂಡಿಸಿದರು.‌’ಸಂತ್ರಸ್ಥ‌ ಬಾಲಕಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು. ಉನ್ನತ ಗುಣಮಟ್ಟದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು’ ಎಂದು ಒತ್ತಾಯಿಸಿದರು.

ಮಹಿಳಾ ಸಂಘಟನೆಗಳಿಂದಲೂ ಮನವಿ:
ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ವಿವಿಧ ಮಹಿಳಾ ಸಂಘಟನೆಯವರು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಹತ್ತು-ಹಲವು ಸಂಘಟನೆಯವರು ಪ್ರತಿಭಟನೆಯಲ್ಲಿ ಭಾಗವಹಿಸಿ ‘ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಹಕ್ಕೊತ್ತಾಯ ಮಾಡಿದರು.

ಪ್ರತಿಭಟನೆಯಲ್ಲಿ ಭಾಷಣ ಮಾಡಿದ ಎಲ್ಲರೂ ನ್ಯಾಯಕ್ಕಾಗಿ ಒತ್ತಾಯಿಸಿದ್ದು, ಉಪತಹಶೀಲ್ದಾರ್ ಎಚ್ ಎನ್ ರಾಘವೇಂದ್ರ ಹಾಗೂ ನೆರೆದಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನ ಮಾಡಿದರು. ಕಾನೂನಿನ ಅಡಿ ಗರಿಷ್ಠ ಪ್ರಮಾಣದ ಶಿಕ್ಷೆ ವಿಧಿಸಲು ಪ್ರಯತ್ನಿಸುವುದಾಗಿ ಅಧಿಕಾರಿಗಳು ಹೇಳಿದರು. ಅದಾಗಿಯೂ, ‘ನಿಗದಿತ ಸಮಯದ ಒಳಗೆ ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಮತ್ತೆ ಪ್ರತಿಭಟಿಸುತ್ತೇವೆ’ ಎಂದು ಎಚ್ಚರಿಸಿದರು.

Advertisement. Scroll to continue reading.
Advertisement. Scroll to continue reading.

ಪೊಲೀಸರಿಗೆ ತಲೆಬಿಸಿ ತಂದ ಗಾಂಜಾ ಗುಂಗು!
‘ಕಿರವತ್ತಿ ಹಾಗೂ ಸುತ್ತಲಿನ ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಗಾಂಜಾ ಮಾರಾಟ ನಡೆದಿದೆ. ಅಕ್ರಮ ಸರಾಯಿ ಮಾರಾಟ‌ ಸಹ ಜೋರಾಗಿದೆ. ದೂರು ನೀಡಿದರೂ ಕ್ರಮವಾಗಿಲ್ಲ’ ಎಂದು ಪ್ರತಿಭಟನೆಯಲ್ಲಿದ್ದ ಮಹಿಳೆಯರು ದೂರಿದರು. ‘ನಶೆಯ ಗುಂಗಿನಲ್ಲಿಯೇ ಅತ್ಯಾಚಾರ ನಡೆದಿದೆ. ಮೊದಲು ಅಕ್ರಮ ತಡೆಯಿರಿ’ ಎಂದು ಪೊಲೀಸರ ಕಾರ್ಯವೈಖರಿ ವಿರುದ್ಧ ಅಸಮಧಾನ ಹೊರಹಾಕಿದರು.‌ ಈ ಹೇಳಿಕೆ ವಿಡಿಯೋ ಚಿತ್ರಿಕರಣ ನಡೆಸಿದ ಮಾಧ್ಯಮದವರ ಮೊಬೈಲನ್ನು ಪೊಲೀಸರು ಕಿತ್ತುಕೊಂಡಿದ್ದು, ನಂತರ ಮರಳಿಸಿದರು.

ಪ್ರಮುಖರಾದ ರಜತ್ ಖಾನಾಪುರ, ಬಾಬು ಸಿದ್ದಿ, ಬೇಬಿ ಅಮಿನಾ, ರಾಘು ಗೊಂದಿ, ಶಾಹಿನ್ ಮುಜಾವರ, ಬಾಬಾಜಾನ್ ಶೇಖ್, ಶಿವಲೀಲ ಹಣಸಗಿ, ಗಂಗಾಧರ ಲಮಾಣಿ, ಮಾರುತಿ ಕಳಸೂರಕರ್, ಮಹೇಶ ಪೂಜಾರ್, ಮಧುರಾ ಹೆಗಡೆ, ವಿಲ್ಸನ್‌ ಫರ್ನಾಂಡಿಸ್, ವಿಠಲ ಶಲಕೆ, ಅನ್ವರ್ ನಜೀರ ಅಹ್ಮದ್ ನದಾಫ, ಸಲೀಂ ಅಲ್ಲಾಭಕ್ಷ ವಂಟನಾಳ, ಪರಶುರಾಮ ಚಲವಾದಿ, ರವಿ ನಾಯ್ಕ, ರಿಯಾನ್ ಉಸ್ಮಾನ್ ಪಟೇಲ್ ಸೇರಿ ಸುತ್ತಲಿನ ಹಲವು ಹಳ್ಳಿಗಳ ಸಾವಿರಾರು ಜನ ಪ್ರತಿಭಟನಾ ಮೆರವಣಿಗೆಯಲ್ಲಿದ್ದರು.

ShareSendTweetShare
ADVERTISEMENT
Previous Post

ಮತ್ತೆ ಮೊಳಗಿದ ಗುಂಡಿನ ಸದ್ದು: ಕೋಟಿ ಕಾರಿನ ಕಳ್ಳರ ಕಾಲಿಗೆ ಶುಟೌಟು!

Next Post

ಶಿರಸಿಯಲ್ಲಿ ಸಂಚಾರಿ ಠಾಣೆ: ಶುರುವಾದ ಪೊಲೀಸ್ ಕಾರ್ಯಾಚರಣೆ!

Next Post
Traffic police station in Sirsi Police operation begins!

ಶಿರಸಿಯಲ್ಲಿ ಸಂಚಾರಿ ಠಾಣೆ: ಶುರುವಾದ ಪೊಲೀಸ್ ಕಾರ್ಯಾಚರಣೆ!

Uttara Kannada Increase in the number of child pregnancies Concern!

ಉತ್ತರ ಕನ್ನಡ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ: ಕಳವಳ!

The fire brigade saved Punyakoti's life!

ಪುಣ್ಯಕೋಟಿಯ ಪ್ರಾಣ ಕಾಪಾಡಿದ ಅಗ್ನಿಶಾಮಕ ದಳ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.