6
  • Latest
A stranger wearing shoes entered the temple Thief of Sai Mandir caught on CCTV camera!

ಭಯವೂ ಇಲ್ಲ.. ಭಕ್ತಿಯೂ ಇಲ್ಲ | ದೇಗುಲದ ಒಳಗೆ ಬೂಟು ಧರಿಸಿ ಬಂದ ಆಗಂತುಕ: ಸಿಸಿ ಕ್ಯಾಮರಾದಲ್ಲಿ ಸಿಕ್ಕಿಬಿದ್ದ ಸಾಯಿ ಮಂದಿರದ ಕಳ್ಳ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭಯವೂ ಇಲ್ಲ.. ಭಕ್ತಿಯೂ ಇಲ್ಲ | ದೇಗುಲದ ಒಳಗೆ ಬೂಟು ಧರಿಸಿ ಬಂದ ಆಗಂತುಕ: ಸಿಸಿ ಕ್ಯಾಮರಾದಲ್ಲಿ ಸಿಕ್ಕಿಬಿದ್ದ ಸಾಯಿ ಮಂದಿರದ ಕಳ್ಳ!

AchyutKumar by AchyutKumar
in ಸ್ಥಳೀಯ
A stranger wearing shoes entered the temple Thief of Sai Mandir caught on CCTV camera!

ಕಾರವಾರದ ಸಾಯಿ ಮಂದಿರದಲ್ಲಿ ಕಳ್ಳತನ ನಡೆದಿದೆ. ಮಂದಿರದ ಒಳಗೆ ನುಗ್ಗಿದ ಕಳ್ಳ ಅಲ್ಲಿದ್ದ ಬೆಳ್ಳಿ ಆಭರಣ ದೋಚಿ ಪರಾರಿಯಾಗಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ADVERTISEMENT

ಕಾರವಾರದ ಸಾಯಿಕಟ್ಟಾದಲ್ಲಿ ಸಾಯಿ ಮಂದಿರವಿದೆ. ಅಪಾರ ಪ್ರಮಾಣದ ಭಕ್ತರು ಇಲ್ಲಿ ನಡೆದುಕೊಳ್ಳುತ್ತಾರೆ. ವಿವಿಧ ಧಾರ್ಮಿಕ ಚಟುವಟಿಕೆಗಳ ಜೊತೆ ಸಾಯಿ ಮಂದಿರದಿoದ ಸಾಮಾಜಿಕ ಕಾರ್ಯಗಳು ನಡೆಯುತ್ತಿವೆ. ಸಾಯಿ ಮಂದಿರದ ದೇವರ ದರ್ಶನಕ್ಕೆ ನಿತ್ಯ ನೂರಾರು ಜನ ಬರುತ್ತಾರೆ. ಗುರುವಾರದ ದಿನ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗುತ್ತದೆ.

ಮಂಗಳವಾರ ನಸುಕಿನಲ್ಲಿ ಸಾಯಿ ಮಂದಿರದಲ್ಲಿ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಕಾಲಿಗೆ ಬೂಟು ಧರಿಸಿ ಬಂದ ಇಬ್ಬರು ಸಾಯಿ ಮಂದಿರದ ದೇವರ ಜಾಗವನ್ನು ಬೂಟುಗಾಲಿನಿಂದ ತುಳಿದಿದ್ದಾರೆ. ಸಾಯಿಮೂರ್ತಿಯಿದ್ದ ಆಸನದ ಮೇಲೆ ಕಾಲಿಟ್ಟು ಕಳ್ಳತನ ನಡೆಸಿದ್ದಾರೆ. ಆ ಇಬ್ಬರು ಆಗಂತುಕರು ಸಾಯಿ ಮಂದಿರ ಪೂರ್ತಿ ಓಡಾಟ ನಡೆಸಿ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Advertisement. Scroll to continue reading.

ಸೋಮವಾರ ಸಾಯಿ ಮಂದಿರದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಯೋಜಿಸಲಾಗಿತ್ತು. ರಾತ್ರಿ 2ಗಂಟೆಯವರೆಗೂ ಪಂದ್ಯಾವಳಿ ನಡೆದಿತ್ತು. ಅದರ ಮುಕ್ತಾಯದವರೆಗೂ ಕಾದ ಕಳ್ಳರು ಜನ ಕಡಿಮೆಯಾದ ನಂತರ ಮಂದಿರಕ್ಕೆ ನುಗ್ಗಿ ಕಳ್ಳತನ ನಡೆಸಿದ್ದಾರೆ. ಸಾಯಿ ಮಂದಿರದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಅಲ್ಲಿದ್ದ ಬೆಳ್ಳಿ ಸಾಮಗ್ರಿಗಳನ್ನು ದೋಚಿದ್ದಾರೆ.

Advertisement. Scroll to continue reading.

ಸಾಯಿಬಾಬಾ ವಿಗ್ರಹದ ಅಕ್ಕಪಕ್ಕದಲ್ಲಿದ್ದ ಬೆಳ್ಳಿಯ ಸಿಂಹವನ್ನು ಕದ್ದಿದ್ದಾರೆ. ಅಲ್ಲಿದ್ದ ಪಾದುಕೆ, ಛತ್ರಿಯನ್ನು ಸಹ ಬಿಟ್ಟಿಲ್ಲ. ಮಂಗಳವಾರ ಬೆಳಗ್ಗೆ ದೇವರ ಪೂಜೆಗೆ ಬಂದ ಅರ್ಚಕರಿಗೆ ಕಳ್ಳತನ ನಡೆದಿರುವುದು ಅರಿವಿಗೆ ಬಂದಿದೆ. ಅಂದಾಜು 12 ಕೆಜಿ ಬೆಳ್ಳಿ ಸಾಮಗ್ರಿಗಳು ಕಳ್ಳರ ಪಾಲಾಗಿದೆ. ಈ ಬಗ್ಗೆ ಅಲ್ಲಿನವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿ ಕ್ಯಾಮರಾ ದಾಖಲೆ ಪರಿಶೀಲನೆ ಆಧಾರದಲ್ಲಿ ಕಳ್ಳರ ಹುಡುಕಾಟ ನಡೆದಿದೆ.

Previous Post

ಅಪಘಾತ: ಆ ದಿನ ಗಾಯಗೊಂಡಿದ್ದ ವ್ಯಕ್ತಿ ಇನ್ನಿಲ್ಲ

Next Post

ಅಂಬೇಡ್ಕರ್ ಜಯಂತಿ: ಕರೆದರೂ ಕಾರ್ಯಕ್ರಮಕ್ಕೆ ಬಾರದ ಶಾಸಕ-ಸಚಿವ-ಸಂಸದ!

Next Post
Ambedkar Jayanti MLA-Minister-MP who didn't come even when called!

ಅಂಬೇಡ್ಕರ್ ಜಯಂತಿ: ಕರೆದರೂ ಕಾರ್ಯಕ್ರಮಕ್ಕೆ ಬಾರದ ಶಾಸಕ-ಸಚಿವ-ಸಂಸದ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ