6
  • Latest
Objection against illegal hotel Demand to clear encroachment

ಅಕ್ರಮ ಹೊಟೇಲ್ ವಿರುದ್ಧ ಆಕ್ಷೇಪ: ಅತಿಕ್ರಮಣ ತೆರವಿಗೆ ಆಗ್ರಹ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ರಮ ಹೊಟೇಲ್ ವಿರುದ್ಧ ಆಕ್ಷೇಪ: ಅತಿಕ್ರಮಣ ತೆರವಿಗೆ ಆಗ್ರಹ

AchyutKumar by AchyutKumar
in ಸ್ಥಳೀಯ
Objection against illegal hotel Demand to clear encroachment

ಯಲ್ಲಾಪುರದ ಹಲವು ಕಡೆ ಸಾರ್ವಜನಿಕ ಆಸ್ತಿ ಕಬಳಿಸುವ ಕೆಲಸ ಜೋರಾಗಿ ನಡೆದಿದೆ. ಆನಗೋಡು-ಬಿಸಗೋಡು ರಸ್ತೆಯನ್ನು ಸಹ ಅತಿಕ್ರಮಿಸಿ ಹೊಟೇಲ್ ನಿರ್ಮಾಣ ನಡೆದಿದೆ. ಇದರಿಂದ ಸಾರ್ವಜನಿಕ ಓಡಾಟಕ್ಕೆ ತೊಂದರೆಯಾಗುತ್ತಿದೆ.

ಪ್ರಸಿದ್ಧ ಸಾತೋಡ್ಡಿ ಜಲಪಾತಕ್ಕೆ ತೆರಳುವ ರಸ್ತೆ ಅಂಚಿನಲ್ಲಿ ಈಚೆಗೆ ಇನ್ನೊಂದು ಹೊಟೇಲ್ ತಲೆಯೆತ್ತಿದೆ. ಅರಣ್ಯ ಜಾಗ ಅತಿಕ್ರಮಿಸಿ ಹೊಟೇಲ್ ನಿರ್ಮಿಸಿದರೂ ಈ ಬಗ್ಗೆ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊAಡು ಬಿಸಗೋಡು ಕ್ರಾಸಿನಲ್ಲಿ `ಪ್ಯಾರಡೈಸ್’ ಎಂಬ ಹೊಟೇಲ್ ನಿರ್ಮಾಣವಾಗಿರುವುದಕ್ಕೆ ಸಾರ್ವಜನಿಕರಿಂದಲೂ ಆಕ್ಷೇಪಗಳು ವ್ಯಕ್ತವಾಗಿದೆ. ಅನಧಿಕೃತ ಹೊಟೇಲ್ ತೆರವು ಮಾಡುವಂತೆ ಆಗ್ರಹಿಸಿ ಮೂವರು ಸರ್ಕಾರಕ್ಕೆ ಅಧಿಕೃತ ಪತ್ರ ರವಾನಿಸಿದ್ದಾರೆ.

ಯಲ್ಲಾಪುರದ ದೀಪಕ ನಾಯ್ಕ, ಗಣೇಶನಗರದ ಕೃಷ್ಣ ನಾಯ್ಕ ಹಾಗೂ ಶಯನ್ ನಾಯ್ಕ ಸಾರ್ವಜನಿಕರಿಗೆ ಆಗುವ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ದೂರು ನೀಡಿದ್ದಾರೆ. `ಯಲ್ಲಾಪುರದಿಂದ ಬಿಸಗೋಡು ಮಾರ್ಗವಾಗಿ ಸಂಚರಿಸುವವರಿಗೆ ಹಾಗೂ ಆನಗೋಡು ಕಡೆಯಿಂದ ಯಲ್ಲಾಪುರಕ್ಕೆ ಬರುವವರಿಗೆ ಈ ಹೋಟೆಲ್ ಅಡೆತಡೆ ನೀಡುತ್ತಿದೆ. ಸರ್ಕಾರಿ ಜಾಗ ಅತಿಕ್ರಮಿಸಿ ಅನಧಿಕೃತ ಹೊಟೇಲ್ ನಿರ್ಮಾಣದ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

`ಸಣ್ಣ ಪ್ರಮಾಣದಲ್ಲಿ ಹೊಟೇಲ್ ನಿರ್ಮಿಸಿ ಕಾಲಕ್ರಮೇಣ ದೊಡ್ಡ ಕಟ್ಟಡವಾಗುವ ಉದಾಹರಣೆಗಳು ಸಾಕಷ್ಟಿವೆ. ಇಲ್ಲಿ ಸಹ ಅದೇ ರೀತಿ ಆಗುವ ಸಾಧ್ಯತೆಯಿದ್ದು, ಆಗ ಅಪಘಾತಗಳ ಪ್ರಮಾಣ ಹೆಚ್ಚಾಗಲಿದೆ. ಈಗಾಗಲೇ ಈ ಭಾಗದಲ್ಲಿ ಹಲವು ಅಪಘಾತ ನಡೆಯುತ್ತಿದ್ದು, ಕಟ್ಟಡ ನಿರ್ಮಾಣದಿಂದ ಇನ್ನಷ್ಟು ಸಮಸ್ಯೆ ಎದುರಾಗಲಿದೆ.
ಹೀಗಾಗಿ ಕೂಡಲೇ ಅನಧಿಕೃತ ಕಟ್ಟಡ ತೆರವು ಮಾಡುವುದರೊಂದಿಗೆ ಸಾರ್ವಜನಿಕರ ಹಿತ ಕಾಪಾಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದಾರೆ.

ShareSendTweetShare
Previous Post

ಅಂಬೇಡ್ಕರ್ ಜಯಂತಿ: ಕರೆದರೂ ಕಾರ್ಯಕ್ರಮಕ್ಕೆ ಬಾರದ ಶಾಸಕ-ಸಚಿವ-ಸಂಸದ!

Next Post

ಉತ್ತರ ಕನ್ನಡ: ಪ್ರವಾಸೋದ್ಯಮ ನಕ್ಷೆಗೆ ಹೊಸ ದಿಕ್ಕು!

Next Post
Uttara Kannada A new direction for the tourism map!

ಉತ್ತರ ಕನ್ನಡ: ಪ್ರವಾಸೋದ್ಯಮ ನಕ್ಷೆಗೆ ಹೊಸ ದಿಕ್ಕು!

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

Lorry drivers' strike Huge support in Uttara Kannada!

ಲಾರಿ ಮಾಲಕ-ಚಾಲಕರ ಮುಷ್ಕರ: ಉತ್ತರ ಕನ್ನಡದಲ್ಲಿ ಭಾರೀ ಬೆಂಬಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.