6
  • Latest
Lawyers boycott proceedings Silence in court today!

ವಕೀಲರಿಂದ ಕಲಾಪ ಬಹಿಷ್ಕಾರ: ಕೋರ್ಟಿನಲ್ಲಿ ಈ ದಿನ ಮೌನ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವಕೀಲರಿಂದ ಕಲಾಪ ಬಹಿಷ್ಕಾರ: ಕೋರ್ಟಿನಲ್ಲಿ ಈ ದಿನ ಮೌನ!

AchyutKumar by AchyutKumar
in ರಾಜ್ಯ
Lawyers boycott proceedings Silence in court today!

ರಾಜ್ಯ ವಕೀಲರ ಪರಿಷತ್ ಸದಸ್ಯ ಸದಾಶಿವ ರೆಡ್ಡಿ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ರಾಜ್ಯದ ನ್ಯಾಯವಾದಿಗಳು ತೀವೃವಾಗಿ ಖಂಡಿಸಿದ್ದಾರೆ. ಸೋಮವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿದ ನ್ಯಾಯವಾದಿಗಳು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಪತ್ರ ರವಾನಿಸಿದರು.

2025ರ ಏಪ್ರಿಲ್ 16ರಂದು ಸದಾಶಿವ ರೆಡ್ಡಿ ಅವರು ತಮ್ಮ ಬೆಂಗಳೂರಿನ ಕಚೇರಿಯಲ್ಲಿದ್ದರು. ತಮ್ಮ ಕಿರಿಯ ಸಹೋದ್ಯೋಗಿಗಳ ಜೊತೆ ಅವರು ಅಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆಗ, ಇಬ್ಬರು ಅಪರಿಚಿತರು ಕಚೇರಿಗೆ ಬಂದಿದ್ದು, ಏಕಾಏಕಿ ಸದಾಶಿವ ರೆಡ್ಡಿ ಅವರ ಮೇಲೆ ದಾಳಿ ಮಾಡಿದರು. ಫೈಬರ್ ಪೈಪುಗಳಿಂದ ಹೊಡೆದ ಪರಿಣಾಮ ಸದಾಶಿವ ರೆಡ್ಡಿ ಹಾಗೂ ಅವರ ತಾಯಿ ಸಹ ಗಾಯಗೊಂಡರು. ಮೂಳೆ ಮುರಿತಕ್ಕೆ ಒಳಗಾದ ವಕೀಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಏಪ್ರಿಲ್ 19ರಂದು ವಕೀಲರ ಸಂಘದವರು ಸಭೆ ನಡೆಸಿ ದುಷ್ಕರ್ಮಿಗಳ ದಾಳಿಯನ್ನು ಖಂಡಿಸಿದರು. ನ್ಯಾಯವಾದಿಗಳ ಮೇಲೆ ಹಲ್ಲೆ ಮಾಡಿದವರನ್ನು ಶಿಕ್ಷಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಅದರ ಮುಂದುವರೆದ ಭಾಗವಾಗಿ ಏಪ್ರಿಲ್ 21ರಂದು ರಾಜ್ಯದ ಎಲ್ಲಡೆ ಮೌನ ಪ್ರತಿಭಟನೆ ನಡೆಸಲು ನ್ಯಾಯವಾದಿಗಳು ನಿರ್ಧರಿಸಿದ್ದರು. ಒಟ್ಟು 199 ವಕೀಲ ಸಂಘಟನೆಗಳು ಈ ದಾಳಿಯನ್ನು ಖಂಡಿಸಿದ್ದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಈ ದಿನ ಶಾಂತಿಯುತ ಪ್ರತಿಭಟನೆ ನಡೆದಿದ್ದು, ನ್ಯಾಯವಾದಿಗಳಿಗೆ ರಕ್ಷಣೆ ಇಲ್ಲದಿರುವ ಬಗ್ಗೆ ಯಲ್ಲಾಪುರ ತಹಶೀಲ್ದಾರ್ ಕಚೇರಿ ಎದುರು ಇಲ್ಲಿನ ವಕೀಲರ ಸಂಘದ ಅಧ್ಯಕ್ಷೆ ಸರಸ್ವತಿ ಭಟ್ಟ ಕಳವಳವ್ಯಕ್ತಪಡಿಸಿದರು.

ಕಲಾಪ ಬಹಿಷ್ಕರಿಸಿದ ನ್ಯಾಯವಾದಿಗಳು ಕೆಂಪು ಪಟ್ಟಿ ಧರಿಸಿ ಯಲ್ಲಾಪುರ ತಹಶೀಲ್ದಾರ್ ಕಚೇರಿ ಎದುರು ಜಮಾಯಿಸಿದರು `ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸಬೇಕು’ ಎಂದು ಯಲ್ಲಾಪುರ ವಕೀಲರ ಸಂಘದ ಕಾರ್ಯದರ್ಶಿ ಜಿ ಜಿ ಪಾಠಣಕರ್, ಖಜಾಂಜಿ ಎಂ ಕೆ ಹೆಗಡೆ, ಪ್ಯಾನಲ್ ವಕೀಲರಾದ ಬೀಬಿ ಅಮೀನಾ ಶೇಖ, ಎಂ ಬಿ. ನಾಗರಾಜ್, ವಕೀಲರಾದ ಎನ್ ಕೆ ಭಾಗ್ವತ್, ಆರ್ ಕೆ ಭಟ್, ವಿ ಟಿ ಭಟ್, ಪಿ ಜಿ. ಭಟ್, ಶುಭಾಶ ಭಟ್, ಮಹೇಶ್ ನಾಯ್ಕ ಆಗ್ರಹಿಸಿದರು.

ShareSendTweetShare
Previous Post

ರಸ್ತೆ ಕಬಳಿಸಿದ ಬೀದಿ ಅಂಗಡಿ: ಸಿಪಿಐ ಗರಂ!

Next Post

ಯಲ್ಲಾಪುರ | ಮುಂದಿನ ಚುನಾವಣೆಗೆ ಹೊಸಮುಖ: ಯುವ ಉದ್ಯಮಿಯ ರಾಜಕೀಯ ಪ್ರವೇಶಕ್ಕೆ ಮುಹೂರ್ತ!

Next Post
Yellapur A new face for the next election A good time for a young businessman to enter politics!

ಯಲ್ಲಾಪುರ | ಮುಂದಿನ ಚುನಾವಣೆಗೆ ಹೊಸಮುಖ: ಯುವ ಉದ್ಯಮಿಯ ರಾಜಕೀಯ ಪ್ರವೇಶಕ್ಕೆ ಮುಹೂರ್ತ!

Planting pit in the cultivation field A friendly meeting before the fight!

ಸಾಗುವಳಿ ಕ್ಷೇತ್ರದಲ್ಲಿ ಗಿಡ ನೆಡುವ ಗುಂಡಿ: ಹೋರಾಟಕ್ಕೂ ಮುನ್ನ ಸೌಹಾರ್ದ ಸಭೆ!

Chicken Anka: The miscreants escaped with the rooster!

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.