6
  • Latest
Lawyers boycott proceedings Silence in court today!

ವಕೀಲರಿಂದ ಕಲಾಪ ಬಹಿಷ್ಕಾರ: ಕೋರ್ಟಿನಲ್ಲಿ ಈ ದಿನ ಮೌನ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವಕೀಲರಿಂದ ಕಲಾಪ ಬಹಿಷ್ಕಾರ: ಕೋರ್ಟಿನಲ್ಲಿ ಈ ದಿನ ಮೌನ!

AchyutKumar by AchyutKumar
in ರಾಜ್ಯ
Lawyers boycott proceedings Silence in court today!

ರಾಜ್ಯ ವಕೀಲರ ಪರಿಷತ್ ಸದಸ್ಯ ಸದಾಶಿವ ರೆಡ್ಡಿ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ರಾಜ್ಯದ ನ್ಯಾಯವಾದಿಗಳು ತೀವೃವಾಗಿ ಖಂಡಿಸಿದ್ದಾರೆ. ಸೋಮವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿದ ನ್ಯಾಯವಾದಿಗಳು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಪತ್ರ ರವಾನಿಸಿದರು.

ADVERTISEMENT

2025ರ ಏಪ್ರಿಲ್ 16ರಂದು ಸದಾಶಿವ ರೆಡ್ಡಿ ಅವರು ತಮ್ಮ ಬೆಂಗಳೂರಿನ ಕಚೇರಿಯಲ್ಲಿದ್ದರು. ತಮ್ಮ ಕಿರಿಯ ಸಹೋದ್ಯೋಗಿಗಳ ಜೊತೆ ಅವರು ಅಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆಗ, ಇಬ್ಬರು ಅಪರಿಚಿತರು ಕಚೇರಿಗೆ ಬಂದಿದ್ದು, ಏಕಾಏಕಿ ಸದಾಶಿವ ರೆಡ್ಡಿ ಅವರ ಮೇಲೆ ದಾಳಿ ಮಾಡಿದರು. ಫೈಬರ್ ಪೈಪುಗಳಿಂದ ಹೊಡೆದ ಪರಿಣಾಮ ಸದಾಶಿವ ರೆಡ್ಡಿ ಹಾಗೂ ಅವರ ತಾಯಿ ಸಹ ಗಾಯಗೊಂಡರು. ಮೂಳೆ ಮುರಿತಕ್ಕೆ ಒಳಗಾದ ವಕೀಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಏಪ್ರಿಲ್ 19ರಂದು ವಕೀಲರ ಸಂಘದವರು ಸಭೆ ನಡೆಸಿ ದುಷ್ಕರ್ಮಿಗಳ ದಾಳಿಯನ್ನು ಖಂಡಿಸಿದರು. ನ್ಯಾಯವಾದಿಗಳ ಮೇಲೆ ಹಲ್ಲೆ ಮಾಡಿದವರನ್ನು ಶಿಕ್ಷಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಅದರ ಮುಂದುವರೆದ ಭಾಗವಾಗಿ ಏಪ್ರಿಲ್ 21ರಂದು ರಾಜ್ಯದ ಎಲ್ಲಡೆ ಮೌನ ಪ್ರತಿಭಟನೆ ನಡೆಸಲು ನ್ಯಾಯವಾದಿಗಳು ನಿರ್ಧರಿಸಿದ್ದರು. ಒಟ್ಟು 199 ವಕೀಲ ಸಂಘಟನೆಗಳು ಈ ದಾಳಿಯನ್ನು ಖಂಡಿಸಿದ್ದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಈ ದಿನ ಶಾಂತಿಯುತ ಪ್ರತಿಭಟನೆ ನಡೆದಿದ್ದು, ನ್ಯಾಯವಾದಿಗಳಿಗೆ ರಕ್ಷಣೆ ಇಲ್ಲದಿರುವ ಬಗ್ಗೆ ಯಲ್ಲಾಪುರ ತಹಶೀಲ್ದಾರ್ ಕಚೇರಿ ಎದುರು ಇಲ್ಲಿನ ವಕೀಲರ ಸಂಘದ ಅಧ್ಯಕ್ಷೆ ಸರಸ್ವತಿ ಭಟ್ಟ ಕಳವಳವ್ಯಕ್ತಪಡಿಸಿದರು.

Advertisement. Scroll to continue reading.

ಕಲಾಪ ಬಹಿಷ್ಕರಿಸಿದ ನ್ಯಾಯವಾದಿಗಳು ಕೆಂಪು ಪಟ್ಟಿ ಧರಿಸಿ ಯಲ್ಲಾಪುರ ತಹಶೀಲ್ದಾರ್ ಕಚೇರಿ ಎದುರು ಜಮಾಯಿಸಿದರು `ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸಬೇಕು’ ಎಂದು ಯಲ್ಲಾಪುರ ವಕೀಲರ ಸಂಘದ ಕಾರ್ಯದರ್ಶಿ ಜಿ ಜಿ ಪಾಠಣಕರ್, ಖಜಾಂಜಿ ಎಂ ಕೆ ಹೆಗಡೆ, ಪ್ಯಾನಲ್ ವಕೀಲರಾದ ಬೀಬಿ ಅಮೀನಾ ಶೇಖ, ಎಂ ಬಿ. ನಾಗರಾಜ್, ವಕೀಲರಾದ ಎನ್ ಕೆ ಭಾಗ್ವತ್, ಆರ್ ಕೆ ಭಟ್, ವಿ ಟಿ ಭಟ್, ಪಿ ಜಿ. ಭಟ್, ಶುಭಾಶ ಭಟ್, ಮಹೇಶ್ ನಾಯ್ಕ ಆಗ್ರಹಿಸಿದರು.

Advertisement. Scroll to continue reading.
Previous Post

ರಸ್ತೆ ಕಬಳಿಸಿದ ಬೀದಿ ಅಂಗಡಿ: ಸಿಪಿಐ ಗರಂ!

Next Post

ಯಲ್ಲಾಪುರ | ಮುಂದಿನ ಚುನಾವಣೆಗೆ ಹೊಸಮುಖ: ಯುವ ಉದ್ಯಮಿಯ ರಾಜಕೀಯ ಪ್ರವೇಶಕ್ಕೆ ಮುಹೂರ್ತ!

Next Post
Yellapur A new face for the next election A good time for a young businessman to enter politics!

ಯಲ್ಲಾಪುರ | ಮುಂದಿನ ಚುನಾವಣೆಗೆ ಹೊಸಮುಖ: ಯುವ ಉದ್ಯಮಿಯ ರಾಜಕೀಯ ಪ್ರವೇಶಕ್ಕೆ ಮುಹೂರ್ತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ