6
  • Latest
Crop insurance Farmers' apathy towards paying premiums!

ಬೆಳೆ ವಿಮೆ: ಕಂತು ಪಾವತಿಗೆ ರೈತರ ನಿರಾಸಕ್ತಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬೆಳೆ ವಿಮೆ: ಕಂತು ಪಾವತಿಗೆ ರೈತರ ನಿರಾಸಕ್ತಿ!

AchyutKumar by AchyutKumar
in ರಾಜ್ಯ
Crop insurance Farmers' apathy towards paying premiums!

ನ್ಯಾಯಯುತ ಪರಿಹಾರ ಪಾವತಿಸದೇ ಅಡಿಕೆ ಬೆಳೆಗಾರರಿಗೆ ಅನ್ಯಾಯ ಮಾಡಿದ ಕ್ಷೇಮಾ ಇನ್ಸುರೆನ್ಸ ಕಂಪನಿಯ ಮೇಲೆ ಅಡಿಕೆ ಬೆಳೆಗಾರರು ಮುನಿಸಿಕೊಂಡಿದ್ದಾರೆ. ಕಂಪನಿ ಮೇಲೆ ನಂಬಿಕೆ ಕಳೆದುಕೊಂಡಿದ್ದರಿoದ 2025-26ನೇ ಸಾಲಿನ ಬೆಳೆ ವಿಮೆ ಕಂತು ಪಾವತಿಗೆ ಅಡಿಕೆ ಬೆಳೆಗಾರರು ಆಸಕ್ತಿವಹಿಸಿಲ್ಲ.

ADVERTISEMENT

ಕೇಂದ್ರ ಸರ್ಕಾರವೇ ಕ್ಷೇಮಾ ಕಂಪನಿಗೆ ಹಣ ಬಿಡುಗಡೆ ಮಾಡುವಂತೆ ಮೂರು ಬಾರಿ ಸೂಚನೆಯನ್ನು ನೀಡಿತ್ತು. ಅದೇ ಭರವಸೆಯಲ್ಲಿ `ಇನ್ನೂ ಏಳು ದಿನಗಳ ಒಳಗೆ ಅಡಿಕೆ ವಿಮಾ ಪರಿಹಾರ ಜಮಾ ಮಾಡಲಾಗುತ್ತದೆ’ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದರು. ಆದರೆ ಅದಾಗಿ ತಿಂಗಳು ಕಳೆದರೂ ಹಣ ಪಾವತಿ ಆಗಲಿಲ್ಲ. ಇದಕ್ಕೂ ಮುನ್ನ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ್ ರೈತರಿಗೆ ನ್ಯಾಯ ಕೊಡಿಸಲು ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದ್ದರು. ಅದು ಸಹ ಮುಂದುವರೆದಿಲ್ಲ. ಹೀಗಾಗಿ ವಿಮೆ ಹೆಸರಿನಲ್ಲಿ ಅಡಿಕೆ ಬೆಳೆಗಾರರ ಹಣಪಡೆದ ಕಂಪನಿ ಅದನ್ನು ಮರುಪಾವತಿ ಮಾಡಲಿಲ್ಲ.

ಕಳೆದ ಮಳೆಗಾಲದ ಅವಧಿಯಲ್ಲಿ ಜಿಲ್ಲೆಯಲ್ಲಿ ಅಧಿಕ ಪ್ರಮಾಣದಲ್ಲಿ ಕೃಷಿ ಬೆಳೆಗಳು ಹಾನಿಯಾಗಿದ್ದವು. ಹೀಗಾಗಿ ಹವಾಮಾನ ಆಧರಿತ ಬೆಳೆ ವಿಮೆಯ ಮೇಲೆ ರೈತರು ಹೆಚ್ಚಿನ ಭರವಸೆ ಇಟ್ಟುಕೊಂಡಿದ್ದರು. ಆದರೆ, ಆ ಭರವಸೆ ಹುಸಿಯಾಯಿತು. ಡಿಸೆಂಬರ್ ಅಂತ್ಯದೊಳಗೆ ರೈತರ ಖಾತೆಗೆ ಹಣ ಜಮಾ ಆಗಬೇಕಿತ್ತು. ಮಳೆ ಮಾಪನ ಸರಿಯಾಗಿಲ್ಲ ಎಂಬ ಸಬೂಬು ನೀಡಿ ವಿಮಾ ಕಂಪನಿ ರೈತರಿಗೆ ಪರಿಹಾರ ನೀಡುತ್ತಿಲ್ಲ. ಮಳೆ ಮಾಪನದ ಆಡಿಟ್ ನಡೆಸುವ ಹೊಣೆಯೂ ಕಂಪನಿ ಮೇಲಿದ್ದರೂ ಅದನ್ನು ಸೂಕ್ತವಾಗಿ ನಿರ್ವಹಿಸಿಲ್ಲ.

Advertisement. Scroll to continue reading.

ವಿಮಾ ಪರಿಹಾರಕ್ಕೆ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸಹಕಾರಿ ಪ್ರತಿನಿಧಿಗಳು ಸಭೆ ನಡೆಸಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮೇಲೆ ಸಾಕಷ್ಟು ಒತ್ತಡವನ್ನು ತಂದಿದ್ದಾರೆ. ಸ್ವತಃ ಕೇಂದ್ರ ಸರ್ಕಾರವೇ ಕಂಪನಿಗೆ ವಿಮೆ ಪಾವತಿಸುವಂತೆ ಆದೇಶಿಸಿದೆ. ಅದಾಗಿಯೂ ಕಂಪನಿ ತಲೆ ಕೆಡಿಸಿಕೊಂಡಿಲ್ಲ. ಹವಾಮಾನ ಆಧರಿತ ಬೆಳೆ ವಿಮೆ ಯೋಜನೆ ನಿರ್ವಹಣೆಗಾಗಿ ಕ್ಷೇಮಾ ಇನ್ಸುರೆನ್ಸ ಕಂಪನಿ 3 ವರ್ಷದ ಟೆಂಡರ್ ಪಡೆದಿದೆ. ಹವಾಮಾನ ವೈಪರಿತ್ಯದಿಂದ 2023ನೇ ಸಾಲಿನಲ್ಲಿ ರೈತರು ನಷ್ಟ ಅನುಭವಿಸಿದರೂ ಕಂಪನಿ ಪರಿಹಾರ ನೀಡಿಲ್ಲ. ಅದಾಗಿಯೂ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲು ಆಡಳಿತದಲ್ಲಿರುವವರು ಆಸಕ್ತಿವಹಿಸಿಲ್ಲ. ಹೀಗಾಗಿ 2024-25ರ ವಿಮಾ ಯೋಜನೆಯ ಬಗ್ಗೆ ರೈತರು ಆಸಕ್ತರಾಗಿಲ್ಲ.

Advertisement. Scroll to continue reading.

ಉತ್ತರ ಕನ್ನಡ ಜಿಲ್ಲೆಯಲ್ಲಿನ ಅಡಿಕೆ ಬೆಳೆಗಾರರಿಗೆ ಎರಡು ವರ್ಷದ ವಿಮಾ ಪರಿಹಾರ ಎಂದು ಅಂದಾಜು 2150 ಕೋಟಿ ರೂ ಹಣವನ್ನು ಕಂಪನಿ ಪಾವತಿಸಬೇಕು. ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದರೂ ಆ ಹಣ ಬಿಡುಗಡೆ ಮಾಡದ ಕಾರಣ ಜನರಿಗೆ ಕಂಪನಿ ಮೇಲಿನ ವಿಶ್ವಾಸ ಕಡಿಮೆಯಾಗಿದೆ. ಹೀಗಾಗಿ 2025-26ರ ವಿಮೆ ಕಂತು ಕಟ್ಟಿದರೆ ತಾವು ಭರಿಸಿದ ವಂತಿಗೆ ಹಣ ಸಹ ಸಿಗುವುದಿಲ್ಲ ಎಂದು ರೈತರು ಮಾತನಾಡುತ್ತಿದ್ದಾರೆ.

Previous Post

ಪರಿಸರ ಸೂಕ್ಷ್ಮ ವರದಿ ರೂವಾರಿ: ಕಸ್ತೂರಿ ರಂಗನ್ ಇನ್ನಿಲ್ಲ..

Next Post

ಜರ್ಮನ್ ತಂತ್ರಜ್ಞಾನಕ್ಕೆ ಸೆಡ್ಡು ಹೊಡೆದ ಯುವಕ: ಕಬ್ಬಿಣದ ಬದಲು ಮರದಲ್ಲಿ ಮೂಡಿದ ಆಧುನಿಕ ಯಂತ್ರ!

Next Post
A young man who is impressed by German technology A modern machine made of wood instead of iron!

ಜರ್ಮನ್ ತಂತ್ರಜ್ಞಾನಕ್ಕೆ ಸೆಡ್ಡು ಹೊಡೆದ ಯುವಕ: ಕಬ್ಬಿಣದ ಬದಲು ಮರದಲ್ಲಿ ಮೂಡಿದ ಆಧುನಿಕ ಯಂತ್ರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ