6
  • Latest
Misuse of cooking cylinder strict action if caught!

ಅಡುಗೆ ಸಿಲೆಂಡರ್ ದುರ್ಬಳಕೆ: ಸಿಕ್ಕಿಬಿದ್ದರೆ ಕಠಿಣ ಕ್ರಮ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಡುಗೆ ಸಿಲೆಂಡರ್ ದುರ್ಬಳಕೆ: ಸಿಕ್ಕಿಬಿದ್ದರೆ ಕಠಿಣ ಕ್ರಮ!

AchyutKumar by AchyutKumar
May 6, 2025
in ರಾಜ್ಯ
Misuse of cooking cylinder strict action if caught!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆಯ ಉದ್ದೇಶಕ್ಕೆ ನೀಡಲಾಗುವ ಅಡುಗೆ ಅನಿಲದ ಸಿಲೆಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವವರ ಮೇಲೆ ಜಿಲ್ಲಾಡಳಿತ ನಿಗಾವಿರಿಸಿದೆ.

`ಗೃಹ ಬಳಕೆ ಸಿಲೆಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದ ರೀತಿಯಲ್ಲಿ ಹೆಚ್ಚಿನ ನಿಗಾವಹಿಸಿ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷಿö್ಮÃಪ್ರಿಯಾ ಅವರು ಅಧೀನ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದರೊಂದಿಗೆ `ವಾಣಿಜ್ಯ ಚಟುವಟಿಕೆಗಳು ನಡೆಯುವ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ’ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ADVERTISEMENT
ADVERTISEMENT

ವಾಣಿಜ್ಯ ಬಳಕೆಯ ಅನಿಲ ಸಿಲೆಂಡರ್‌ಗಳಿಗಿoತ ಕಡಿಮೆ ದರದಲ್ಲಿ ಗೃಹ ಬಳಕೆಯ ಉದ್ದೇಶಕ್ಕೆ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದೆ. ಹೀಗಾಗಿ ಈ ಸಿಲೆಂಡರ್‌ಗಳನ್ನು ಕೆಲವರು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಅನುಮಾನ ವ್ಯಕ್ತವಾಗಿದೆ. ಕೆಲವು ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು ಅಲ್ಲಿ ಸಿಲೆಂಡರ್ ದುರುಪಯೋಗ ಸಾಧ್ಯತೆ ಹೆಚ್ಚಿದೆ. ಹೀಗಾಗಿ `ಗ್ಯಾಸ್ ಏಜೆನ್ಸಿಗಳ ಅನಿಲ ವಿತರಣೆಯ ದಾಖಲೆ ಹಾಗೂ ವಾಣಿಜ್ಯ ಅನಿಲ ಬಳಕೆದಾರರ ಅನಿಲ ಬಳಕೆಯ ಮಾಹಿತಿ ದಾಖಲೆಗಳನ್ನು ಪರಿಶೀಲನೆ ನಡೆಸಿ’ ಎಂದು ಡೀಸಿ ಸೂಚಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಇನ್ನೂ `ಪಡಿತರ ಚೀಟಗಳಿಗೆ ಇ ಕೆವೈಸಿ ಮಾಡುವ ಕಾರ್ಯದಲ್ಲಿ ಜಿಲ್ಲೆಯಲ್ಲಿ ಇದುವರೆಗೆ 98.02 ಪ್ರಗತಿ ಸಾಧಿಸಿದೆ. ಈ ಕಾರ್ಯದಲ್ಲಿ ಶೇ 100 ರಷ್ಟು ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ’ ಎಂದವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಲ್ಲಿನ ಒಟ್ಟು 410 ನ್ಯಾಯಬೆಲೆ ಅಂಗಡಿಗಳಲ್ಲಿ 402 ಅಂಗÀಡಿಗಳಿಗೆ ಪಾಯಿಂಟ್ ಆಫ್ ಸೇಲ್ (ಪಿಓಎಸ್) ಯಂತ್ರಗಳನ್ನು ಅಳವಡಿಸಿದ್ದು, ಬಾಕಿ ಇರುವ ಅಂಗಡಿಗಳಿಗೆ ಇಂಟರ್ನೆಟ್ ಸೌಲಭ್ಯದ ಕೊರತೆಯಿಂದ ಈ ಯಂತ್ರಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಾಗಿಲ್ಲದರ ಬಗ್ಗೆ ಅವರು ಪ್ರಶ್ನಿಸಿದ್ದಾರೆ. `ಬಿ.ಎಸ್.ಎನ್.ಎಲ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಈ ಪ್ರದೇಶಗಳಿಗೆ ಶೀಘ್ರದಲ್ಲಿ ಇಂಟರ್ನೆಟ್ ಸೌಲಭ್ಯ ಪಡೆದು (ಪಿಓಎಸ್) ಯಂತ್ರಗಳನ್ನು ಅಳವಡಿಸುವ ಮೂಲಕ ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮೂಡಿಸಿ’ ಎಂದು ಹೇಳಿದ್ದಾರೆ.

`ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನೀಡುವ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಬೇಕು. ಗಡಿ ತಾಲೂಕುಗಳಲ್ಲಿ ಹೆಚ್ಚಿನ ತಪಾಸಣೆಯನ್ನು ಕೈಗೊಳ್ಳಬೇಕು’ ಎಂದವರು ಆದೇಶಿಸಿದ್ದಾರೆ. `ಆಹಾರ ಧಾನ್ಯಗಳನ್ನು ಸಗಟು ಗೋದಾಮುಗಳಲ್ಲಿ ದಾಸ್ತಾನು ಮಾಡುವಾಗ ವೈಜ್ಞಾನಿಕವಾಗಿ ಮತ್ತು ಕ್ರಮಬದ್ದವಾಗಿ ಜೋಡಿಸಿರಬೇಕು. ಯಾವುದೇ ಕಾರಣಕ್ಕೂ ಆಹಾರಧಾನ್ಯಗಳು ಹಾಳಾಗದಂತೆ ಅತ್ಯಂತ ಎಚ್ಚರ ವಹಿಸಬೇಕು’ ಎಂದು ಅವರು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ಮಂಜುನಾಥ ರೇವಕರ್ ಅವರಿಗೆ ಸೂಚಿಸಿದ್ದಾರೆ.

ShareSendTweetShare
ADVERTISEMENT
Previous Post

ಕಾಡಿನಲ್ಲಿ ಕಾನೂನುಬಾಹಿರ ಆಟ: ಸಿಕ್ಕಿಬಿದ್ದವರ ಬಳಿ ಸಿಕ್ಕಿತು 25 ಸಾವಿರ!

Next Post

ಬ್ಯಾಂಕಿನೊಳಗೆ ಭಾರೀ ಪ್ರಮಾಣದ ಬೆಂಕಿ!

Next Post
Massive fire inside the bank!

ಬ್ಯಾಂಕಿನೊಳಗೆ ಭಾರೀ ಪ್ರಮಾಣದ ಬೆಂಕಿ!

Fear of war Military drills in Karwar!

ಯುದ್ಧದ ಆತಂಕ: ಕಾರವಾರದಲ್ಲಿ ಸಮರಾಭ್ಯಾಸ!

A yoga teacher by name: What he did was intoxicating!

ಗಾಂಜಾ ಸೇದಿ ಸಿಕ್ಕಿ ಬಿದ್ದ ಗೋಕರ್ಣ ಗೌಡ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.