6
  • Latest
Uttara Kannada There are 439 landslide centers in the district Get ready for the rainy season now!

ಉತ್ತರ ಕನ್ನಡ | ಜಿಲ್ಲೆಯಲ್ಲಿದೆ 439 ಗುಡ್ಡ ಕುಸಿತ ಕೇಂದ್ರ: ಮಳೆಗಾಲಕ್ಕೆ ಈಗಲೇ ಸಿದ್ಧರಾಗಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡ | ಜಿಲ್ಲೆಯಲ್ಲಿದೆ 439 ಗುಡ್ಡ ಕುಸಿತ ಕೇಂದ್ರ: ಮಳೆಗಾಲಕ್ಕೆ ಈಗಲೇ ಸಿದ್ಧರಾಗಿ!

AchyutKumar by AchyutKumar
in ರಾಜ್ಯ
Uttara Kannada There are 439 landslide centers in the district Get ready for the rainy season now!

ಉತ್ತರ ಕನ್ನಡ ಜಿಲ್ಲೆಯಲ್ಲಿ 439 ಗುಡ್ಡ ಕುಸಿತ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅಲ್ಲಿ ಅವಘಡ ನಡೆಯದಂತೆ ಮುನ್ನಚ್ಚರಿಕೆವಹಿಸಲು ಜಿಲ್ಲಾಡಳಿತ ಅಧೀನ ಅಧಿಕಾರಿಗಳಿಗೆ ಸೂಚಿಸಿದೆ.

ADVERTISEMENT

`ಮಳೆ ಅವಧಿಯಲ್ಲಿ ಅವಘಡ ನಡೆಯದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ ಅವರು ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು `ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಹೊಸದಾಗಿ ನಿರ್ಮಾಣ ಹಂತದಲ್ಲಿರುವ ಚರಂಡಿ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು. ಚರಂಡಿ ಹೂಳಿನ ಸಮಸ್ಯೆಯಿಂದ ನೆರೆ ಪರಿಸ್ಥಿತಿ ಉಂಟಾಗದoತೆ ಮುನ್ನೆಚ್ಚರಿಕೆವಹಿಸಬೇಕು’ ಎಂದು ಸೂಚಿಸಿದರು.

`ಗುಡ್ಡ ಕುಸಿತ ಕುರಿತಂತೆ ಮುನ್ನೆಚ್ಚರಿಕೆ ನೀಡಲು ಸ್ಪಾರ‍್ಸ್ ಗಳನ್ನು ನೇಮಿಸಲಾಗಿದ್ದು, ಇವರಿಗೆ ಈಗಾಗಲೇ ಜಿ.ಎಸ್.ಐ ಅಧಿಕಾರಿಗಳು ತರಬೇತಿಯನ್ನು ನೀಡಿದ್ದು, ಅವರಿಗೆ ಮೇ ಕೊನೆಯ ವಾರದಲ್ಲಿ ಮತ್ತೊಂದು ಸುತ್ತಿನ ತರಬೇತಿ ನೀಡಲಾಗುವುದು ಎಂದರು. `ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ವಿಪತ್ತು ನಿರ್ವಹಣಾ ಯೋಜನೆಯನ್ನು ತಯಾರಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಅಗತ್ಯವಿರುವ ಮಾನವ ಸಂಪನ್ಮೂಲ, ಸಂಪರ್ಕ ಸಂಖ್ಯೆಗಳು, ಯಂತ್ರೋಪಕರಣಗಳು, ಸುರಕ್ಷಿತ ಸ್ಥಳಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಸಿದ್ದವಾಗಿಟ್ಟುಕೊಂಡು ಯಾವುದೇ ಸಂದರ್ಭದಲ್ಲಿ ಯಾವುದೇ ರೀತಿಯ ವಿಪತ್ತು ಎದುರಾದಲ್ಲಿ ಅದನ್ನು ಎದುರಿಸಲು ಸಂಪೂರ್ಣ ಸನ್ನಧ್ದರಾಗಿರಬೇಕು’ ಎಂದರು.

Advertisement. Scroll to continue reading.

`ರಾಷ್ಟಿಯ ಹೆದ್ದಾರಿ ಬದಿಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳನ್ನು ತೆರವುಗೊಳಿಸುವ ಕುರಿತಂತೆ ಅವರಿಗೆ ಈಗಾಗಲೇ ಸಾಕಷ್ಟು ಕಾಲಾವಕಾಶವನ್ನು ನೀಡಿದ್ದು, ಇವುಗಳನ್ನು ಮಳೆಗಾಲ ಆರಂಭವಾಗುವುದರ ಒಳಗೆ ತೆರವುಗೊಳಿಸಬೇಕು’ ಎಂದು ವಿವಿಧ ತಹಶೀಲ್ದಾರರಿಗೆ ಸೂಚಿಸಿದರು. `ಶಾಲೆ, ಅಂಗನವಾಡಿ ಮತ್ತು ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ಗುರುತಿಸಿ ಅವುಗಳನ್ನು ಅಲ್ಲಿಂದ ತೆರವುಗೊಳಿಸಬೇಕು. ಮಾಲ್ಕಿ ಜಮೀನಿನಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಮೂಲಕ ಆ ಸ್ಥಳಗಳ ಮಾಲೀಕರಿಗೆ ಅನುಮತಿ ನೀಡಬೇಕು. ಸಿಡಿಲಿನಿಂದ ಆಕಸ್ಮಿಕ ಸಾವುಗಳಾಗುವುದನ್ನು ತಪ್ಪಿಸಲು ಜನರಲ್ಲಿ ಅರಿವು ಮೂಡಿಸಬೇಕು’ ಎಂದರು.

Advertisement. Scroll to continue reading.

`ಮಳೆಗಾಲದಲ್ಲಿ ನೇವಲ್ ಬೇಸ್ ವ್ಯಾಪ್ತಿಯ ಗ್ರಾಮಗಳಲ್ಲಿ ನೆರೆ ಉಂಟಾಗದoತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಇಲ್ಲಿನ ಚರಂಡಿ ಗಳಲ್ಲಿ ಡ್ರಜ್ಜಿಂಗ್ ಕಾರ್ಯ ಕೈಗೊಂಡು ಮಳೆ ನೀರು ಹರಿದು ಹೋಗುವಂತೆ ನೋಡಿಕೊಳ್ಳಿ’ ಎಂದು ಕಾರವಾರ ತಹಸೀಲ್ದಾರ್‌ಗೆ ಸೂಚಿಸಿದರು. ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪವಿಭಾಗಾಧಿಕಾರಿ ಕನಿಷ್ಕ, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಇತರರಿದ್ದರು.

Previous Post

ನನಗೂ ಪ್ರೀ.. ನಿನಗೂ ಪ್ರೀ: PDO ಮನಸ್ಸು ಮಾಡಿದರೆ ಸರ್ಕಾರಿ ಕಟ್ಟಡದಲ್ಲಿನ ವಾಣಿಜ್ಯ ಮಳಿಗೆಯೂ ಪ್ರೀ!

Next Post

ಬೈಕುಗಳ ನಡುವೆ ಮುಖಾಮುಖಿ: ಯುವಕನ ದುರ್ಮರಣ!

Next Post
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕುಗಳ ನಡುವೆ ಮುಖಾಮುಖಿ: ಯುವಕನ ದುರ್ಮರಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ