6
  • Latest
A forest officer who came to stop illegal logging was hit with a shoe!

ಅಕ್ರಮ ತಡೆಗೆ ಬಂದ ಅರಣ್ಯಾಧಿಕಾರಿಗೆ ಚಪ್ಪಲಿ ಏಟು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ರಮ ತಡೆಗೆ ಬಂದ ಅರಣ್ಯಾಧಿಕಾರಿಗೆ ಚಪ್ಪಲಿ ಏಟು!

AchyutKumar by AchyutKumar
in ಸ್ಥಳೀಯ
A forest officer who came to stop illegal logging was hit with a shoe!

ಅರಣ್ಯ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ತಡೆಯಲು ಬಂದ ಅರಣ್ಯಾಧಿಕಾರಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಅದಾದ ನಂತರ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ADVERTISEMENT

ಸಿದ್ದಾಪುರ ತಾಲೂಕಿನ ಇಟಗಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿತ್ತು. ದಂಧೆಕೋರರು ಇಲ್ಲಿನ ಮರಳನ್ನು ಕದ್ದು ಕಾಳಸಂತೆಯಲ್ಲಿ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿಪಡೆದು ಅರಣ್ಯಾಧಿಕಾರಿ ಎಚ್ ಬಿ ಗೌಡರ್ ಸ್ಥಳ ಪರಿಶೀಲನೆ ನಡೆಸಿದರು.

ಆ ವೇಳೆ ರೊಚ್ಚಿಗೆದ್ದ ಕೇಶವ ಮಡಿವಾಳ ಅರಣ್ಯಾಧಿಕಾರಿಗಳನ್ನು ನಿಂದಿಸಿದರು. ಅಕ್ರಮ ಮರಳು ತಡೆಗೆ ಬಂದವರ ವಿರುದ್ಧ ಕಿಡಿಕಾರಿದರು. ಸ್ಥಳಕ್ಕೆ ಬಂದ ಕಾರಣ ಅರಣ್ಯಾಧಿಕಾರಿಯೇ ಕ್ಷಮೆ ಕೋರಬೇಕು ಎಂದು ಕೇಶವ ಮಡಿವಾಳ ಪಟ್ಟುಹಿಡಿದರು. ಈ ವೇಳೆ ಮಾತಿಗೆ ಮಾತು ಬೆಳೆದು, ಕೇಶವ ಮಡಿವಾಳ ಅವರು ಎಚ್ ಬಿ ಗೌಡರ್ ಮೇಲೆ ಹಲ್ಲೆ ನಡೆಸಿದರು. ಜೊತೆಗೆ ಕಾಲಿನಲ್ಲಿದ್ದ ಚಪ್ಪಲಿ ಬಿಚ್ಚಿ ಅಧಿಕಾರಿಯ ಕೆನ್ನೆಗೆ ಬಾರಿಸಿದರು.

Advertisement. Scroll to continue reading.

ಅಲ್ಲಿಯೇ ಇದ್ದ ವ್ಯಕ್ತಿಗಳಿಬ್ಬರು ಈ ಎಲ್ಲಾ ದೃಶ್ಯಾವಳಿಗಳನ್ನು ಚಿತ್ರಿಸುತ್ತಿದ್ದರು. ಆ ಚಿತ್ರಿಕರಣಕ್ಕೂ ಕೇಶವ ಮಡಿವಾಳ ತಡೆ ಒಡ್ಡಿದರು. ವಿಡಿಯೋ ಚಿತ್ರಿಕರಣ ಮಾಡುತ್ತಿದ್ದವರ ಮೇಲೆ ಎರಗಿ ಬಂದು, ಮೊಬೈಲ್ ಕಸಿಯುವ ಪ್ರಯತ್ನ ಮಾಡಿದರು. ಅರಣ್ಯ ಇಲಾಖೆಯವರು ಇನ್ನಷ್ಟು ಸಿಬ್ಬಂದಿ ಕರೆಯಿಸಿಕೊಳ್ಳುವುದಾಗಿ ಹೇಳಿದಾಗ ಕೇಶವ ಮಡಿವಾಳ ಕಲ್ಲು ತೂರಾಟ ನಡೆಸಿ ಪರಾರಿಯಾದರು.

Advertisement. Scroll to continue reading.

ಸಿದ್ದಾಪುರ ಸಿಪಿಐ ಸೀತಾರಾಮ ಬಿಜಿ ಆರೋಪಿಯ ಬೆನ್ನಟ್ಟಿದರು. ಆಗ ಕೇಶವ ಮಡಿವಾಳ ಸಿಕ್ಕಿಬಿದ್ದರು. ಸದ್ಯ ಕೇಶವ ಮಡಿವಾಳ ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ನ್ಯಾಯಾಲಯವೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Previous Post

ಹಲಸಿನ ಮರ ಏರಿದ ಹೆಣ್ಣು ಕರಡಿಗೆ ದೊಡ್ಡ ಆಘಾತ!

Next Post

ಸಿಲೆಂಟರ್ ಸ್ಪೋಟಕ್ಕೆ ಗುಜುರಿ ಗೋದಾಮು ನಾಶ!

Next Post
Gujuri warehouse destroyed by silent explosion!

ಸಿಲೆಂಟರ್ ಸ್ಪೋಟಕ್ಕೆ ಗುಜುರಿ ಗೋದಾಮು ನಾಶ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ