6
  • Latest
Gram Panchayat Administration Paper applications don't cost a penny here!

ಗ್ರಾ ಪಂ ಆಡಳಿತ: ಕಾಗದ ಅರ್ಜಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗ್ರಾ ಪಂ ಆಡಳಿತ: ಕಾಗದ ಅರ್ಜಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ!

AchyutKumar by AchyutKumar
in ರಾಜ್ಯ
Gram Panchayat Administration Paper applications don't cost a penny here!

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಡಿಜಿಟಲ್ ವ್ಯವಸ್ಥೆ ಜಾರಿಗೆ ತರಲು ಜಿಲ್ಲಾ ಪಂಚಾಯತ ಆಸಕ್ತಿವಹಿಸಿದೆ. ಡಿಜಿಟಲ್ ವ್ಯವಸ್ಥೆ ಜಾರಿಯಾದ ನಂತರ ಗ್ರಾಮ ಪಂಚಾಯತದಲ್ಲಿನ ಕಾಗದ ಪತ್ರಗಳಿಗೆ ಕವಡೆ ಕಾಸಿನ ಕಿಮ್ಮತ್ತು ಇರುವುದಿಲ್ಲ!

ADVERTISEMENT

ಗ್ರಾಮ ಪಂಚಾಯತಗೆ ಸಲ್ಲಿಕೆಯಾಗುವ ಎಲ್ಲಾ ಕಾಗದಪತ್ರಗಳನ್ನು ಸ್ಕಾನ್ ಮಾಡಿ ದಾಖಲೀಕರಣ ಮಾಡಿಕೊಳ್ಳುವುದು ಇ-ಆಫೀಸ್ ವಿಧಾನದ ಮೊದಲ ಕೆಲಸ. ಕಂಪ್ಯುಟರ್ ಹಾಗೂ ಆನ್‌ಲೈನ್ ಮೂಲಕವೇ ಕಚೇರಿ ಕಡತ ವಿಲೇವಾರಿ ನಡೆಸುವುದು ಮುಂದಿನ ಕೆಲಸ. ಇ-ವಿಧಾನದಿಂದ ಕಚೇರಿಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬಹುದು ಎಂಬುದು ಸರ್ಕಾರದ ನಂಬಿಕೆ.

ಸಾರ್ವಜನಿಕರು ನೀಡುವ ಅರ್ಜಿಗಳಿಗೆ ಆನ್‌ಲೈನ್ ಮೂಲಕ ಒಂದು ಸಂಖ್ಯೆ ನೀಡಲಾಗುತ್ತದೆ. ಆ ಸಂಖ್ಯೆ ಆಧಾರದಲ್ಲಿ ಜನ ಕಡತಗಳ ಪರಿಶೀಲನೆ, ಕೆಲಸ ಯಾವ ಹಂತದಲ್ಲಿದೆ? ಎಂಬ ಬಗ್ಗೆ ಮಾಹಿತಿ ಪಡೆಯಲು ಇದು ಅನುಕೂಲವಾಗಲಿದೆ. ಗ್ರಾಮ ಪಂಚಾಯತದ ಕರ ವಸೂಲಿಗೆ ಆನ್‌ಲೈನ್ ವ್ಯವಸ್ಥೆ ಜಾರಿಯಲ್ಲಿದ್ದು, ಭವಿಷ್ಯದಲ್ಲಿ ಅದೇ ಮಾದರಿಯಲ್ಲಿ ಇತರೆ ಕೆಲಸಗಳು ನಡೆಯುವ ಸಾಧ್ಯತೆಗಳಿವೆ. ಜನನ-ಮರಣ ನೋಂದಣಿ, ನಿರಪೇಕ್ಷಣಾ ಪತ್ರ ಸೇರಿ ಎಲ್ಲಾ ಕಾಗದ ಪತ್ರಗಳು ಆನ್‌ಲೈನ್ ಆಗುವುದರಿಂದ ಜನರ ಅಲೆದಾಟ ಕಡಿಮೆಯಾಗುವ ಲಕ್ಷಣಗಳಿವೆ.

Advertisement. Scroll to continue reading.

ಕಂದಾಯ ಇಲಾಖೆಯ ಬಹುತೇಕ ಕಡೆ ಈಗಾಗಲೇ ಇ-ಆಫೀಸ್ ವ್ಯವಸ್ಥೆ ಜಾರಿಯಲ್ಲಿದೆ. ಅದೇ ಮಾದರಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ 125 ಗ್ರಾಮ ಪಂಚಾಯತಗಳು ಇ- ಆಫೀಸ್ ವ್ಯವಸ್ಥೆ ಅಳವಡಿಸಿಕೊಂಡು ಅರ್ಜಿ ವಿಲೇವಾರಿ ಶುರು ಮಾಡಿವೆ. ಕರ್ನಾಟಕ ಸರ್ಕಾರ ಆಡಳಿತ ಸುಧಾರಣೆಗಾಗಿ 2021ರಲ್ಲಿಯೇ ಇ-ಆಫೀಸ್ ವಿಧಾನಕ್ಕೆ ಒತ್ತು ನೀಡಿದ್ದು, ಹಂತ ಹಂತವಾಗಿ ಆ ವ್ಯವಸ್ಥೆ ರಾಜ್ಯದ ಎಲ್ಲಡೆ ಜಾರಿಯಾಗುತ್ತಿದೆ.

Advertisement. Scroll to continue reading.

ಕೆಳ ಹಂತದ ಕಚೇರಿಗಳಲ್ಲಿ ಹಂತ ಹಂತವಾಗಿ ಕಡತ ಪರಿಶೀಲನೆ ನಡೆಸುವುದು ಹಾಗೂ ಅವುಗಳನ್ನು ಆನ್‌ಲೈನ್ ವ್ಯವಸ್ಥೆಗೆ ತರುವ ಕೆಲಸ ನಡೆಯುತ್ತಿದೆ. ವಿವಿಧ ಇಲಾಖೆಯವರು ಪ್ರತ್ಯೇಕ ವೆಬ್‌ಪೋರ್ಟಲ್ ತೆರೆದಿದ್ದು, ತಹಶೀಲ್ದಾರ್ ಕಚೇರಿ ಹಾಗೂ ನಾಡ ಕಚೇರಿಯ ಕಡತಗಳು ಆನ್‌ಲೈನ್ ಆಗಿದೆ. ಅದರ ಮುಂದುವರೆದ ಭಾಗವಾಗಿ ರಾಜ್ಯದ ಎಲ್ಲ ಗ್ರಾಪಂಗಳಲ್ಲಿ ಮೇ 26ರಿಂದ ಸಂಪೂರ್ಣ ಇ-ಆಫೀಸ್ ವ್ಯವಸ್ಥೆ ಜಾರಿ ಮಾಡುವಂತೆ ಸರ್ಕಾರ ಸೂಚನೆ ಹೊರಡಿಸಿದೆ. ಸದ್ಯ ಉತ್ತರ ಕನ್ನಡ ಜಿಲ್ಲೆಯ 229 ಗ್ರಾಪಂಗಳ ಪೈಕಿ 125 ಗ್ರಾಪಂಗಳಲ್ಲಿ ಈ ಆಫೀಸ್ ವ್ಯವಸ್ಥೆ ಜಾರಿಗೆ ಬಂದಿದೆ. 19 ಕಡತಗಳನ್ನು ಈಗಾಗಲೇ ಇ-ಆಫೀಸ್ ವ್ಯವಸ್ಥೆಯಲ್ಲಿ ಅಳವಡಿಸಲಾಗಿದೆ.

Previous Post

ಬೇಡರ ವೇಷ ನೋಡಲು ಬಂದವರ ಮೇಲೆ ದಾಳಿ: ಹೋಳಿ ಹೊಡೆದಾಟದ ಆರೋಪಿಗೆ ಶಿಕ್ಷೆ!

Next Post

ಕೀಟನಾಶಕ ಸೇವಿಸಿದ ಕೂಲಿ ಕಾರ್ಮಿಕ: ಆತ ಇನ್ನಿಲ್ಲ!

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಕೀಟನಾಶಕ ಸೇವಿಸಿದ ಕೂಲಿ ಕಾರ್ಮಿಕ: ಆತ ಇನ್ನಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ