6
  • Latest
Gram Panchayat officer given absolute power Government orders demolition of illegal houses!

ಗ್ರಾ ಪಂ ಅಧಿಕಾರಿಗೆ ಸರ್ವಾಧಿಕಾರ: ಅಕ್ರಮ ಮನೆ ನೆಲಸಮಕ್ಕೆ ಸರ್ಕಾರದ ಆದೇಶ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗ್ರಾ ಪಂ ಅಧಿಕಾರಿಗೆ ಸರ್ವಾಧಿಕಾರ: ಅಕ್ರಮ ಮನೆ ನೆಲಸಮಕ್ಕೆ ಸರ್ಕಾರದ ಆದೇಶ!

AchyutKumar by AchyutKumar
in ರಾಜ್ಯ
Gram Panchayat officer given absolute power Government orders demolition of illegal houses!

ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಎಲ್ಲಾ ಮನೆಗಳನ್ನು ಗುರುತಿಸಿ ಅದನ್ನು ನೆಲಸಮ ಮಾಡುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಗ್ರಾಮ ಪಂಚಾಯತ ಅಧಿಕಾರಿಗಳಿಗೆ ಈ ಕುರಿತು ಅಧಿಕಾರ ನೀಡಿದ್ದು, ಪಂಚಾಯತ ಸಿಬ್ಬಂದಿ ಮೂಲಕ ಅಕ್ರಮವಾಗಿ ನಿರ್ಮಿಸಿದ ಮನೆಗಳನ್ನು ಗುರುತಿಸುವಂತೆ ಸೂಚನೆ ನೀಡಿದೆ.

ADVERTISEMENT

2025ರ ಮೇ 13ರಂದು ಸರ್ಕಾರ ಈ ಸುತ್ತೋಲೆ ಹೊರಡಿಸಿದೆ. ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರ ಮೂಲಕ ಈ ಸುತ್ತೋಲೆ ಗ್ರಾಮ ಪಂಚಾಯತ ಆಡಳಿತಕ್ಕೆ ಬಂದಿದೆ. `ಕಟ್ಟಡ ನಿರ್ಮಾಣಕ್ಕೂ ಮುನ್ನ ಗ್ರಾಮ ಪಂಚಾಯತ ಪರವಾನಿಗೆ ಪಡೆಯಬೇಕು. ಮನೆಯ ನಕ್ಷೆಗೆ ಅನುಮೋದನೆ ಪಡೆಯಬೇಕು. ಸರ್ಕಾರದ ಎಲ್ಲಾ ಸೂಚನೆ ಪಾಲಿಸುವುದರ ಜೊತೆ ಮನೆ ಕೆಲಸ ಮುಗಿದ ನಂತರವೂ ಪ್ರಮಾಣ ಪತ್ರ ಪಡೆಯಬೇಕು’ ಎಂಬುದು ಸರ್ಕಾರಿ ನಿಯಮ. ನಕ್ಷೆಗೆ ವಿರುದ್ಧವಾಗಿ ಕಟ್ಟಡ ನಿರ್ಮಾಣ ನಡೆಯುತ್ತಿದ್ದರೆ ಅದನ್ನು ನಿಲ್ಲಿಸಿ ಸರಿಪಡಿಸಬೇಕು ಎಂದು ಸರ್ಕಾರ ಸುತ್ತೋಲೆ ಮೂಲಕ ಹೇಳಿದೆ.

ಇದರೊಂದಿಗೆ ಅಕ್ರಮವಾಗಿ ನಿರ್ಮಿಸಿದ ಮನೆಗೆ ವ್ಯಾಪಾರ-ವಾಣಿಜ್ಯ ವಹಿವಾಟು ನೀಡಲು ಅವಕಾಶ ಕೊಡಬಾರದು. ವಿದ್ಯುತ್ ಸೇರಿ ಯಾವುದೇ ಸೌಕರ್ಯ ಒದಗಿಸಬಾರದು ಎಂದು ಸಹ ಈ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದೆ. ಸುಪ್ರಿಂ ಕೋರ್ಟಿನ ಆದೇಶದ ಅನ್ವಯ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಬೇಕು ಎಂದು ಸರ್ಕಾರ ಹೇಳಿದ್ದು, ಈ ನಿಯಮ ಪಾಲಿಸದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸುವುದಾಗಿ ಎಚ್ಚರಿಸಿದೆ. ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಗ್ರಾ ಪಂ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Advertisement. Scroll to continue reading.

`ಕಟ್ಟಡ ನೆಲಸಮ ಮಾಡುವ ಮುನ್ನ ಎಲ್ಲಾ ದಾಖಲೆ ಪರಿಶೀಲಿಸಬೇಕು. ಅದಾದ ನಂತರ ನೋಟಿಸ್ ನೀಡಬೇಕು. ಸರ್ಕಾರ, ಸಾರ್ವಜನಿಕ ಸ್ವತ್ತಿನಲ್ಲಿರುವ ಅನಧಿಕೃತ ಕಟ್ಟಡ ತೆರವು ವೇಳೆ ಕಾನೂನು ದುರ್ಬಳಕೆ ಆಗಬರದು. ಜೊತೆಗೆ ಭ್ರಷ್ಟಾಚಾರಕ್ಕೆ ಸಹ ಈ ಸುತ್ತೋಲೆ ಅವಕಾಶಕೊಡಬಾರದು’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಅವರು ಮಾಧ್ಯಮಗಳ ಮುಂದೆ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.

Advertisement. Scroll to continue reading.

ಸರ್ಕಾರ ಹೊರಡಿಸಿದ ಸುತ್ತೋಲೆ ಇಲ್ಲಿ ಡೌನ್‌ಲೋಡ್ ಮಾಡಿಕೊಳ್ಳಿ: ಸರ್ಕಾರ ಹೊರಡಿಸಿದ ಸುತ್ತೋಲೆ

Previous Post

ಫೇಸ್‌ಬುಕ್ ಪ್ರೇಮಕ್ಕೆ ಮೂರೇ ವರ್ಷ ಆಯಸ್ಸು!

Next Post

ಜಾತಿ ರಾಜಕೀಯ | ಸುಳ್ಳು ಹೇಳಿದ ಸಚಿವರ ಮೇಲೆ ತನಿಖೆಯ ತೂಗುಕತ್ತಿ!

Next Post
Caste politics | Investigation looms over minister who lied!

ಜಾತಿ ರಾಜಕೀಯ | ಸುಳ್ಳು ಹೇಳಿದ ಸಚಿವರ ಮೇಲೆ ತನಿಖೆಯ ತೂಗುಕತ್ತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ