6
  • Latest
Warning of violent struggle Highway company bows to threats!

ಉಗ್ರ ಹೋರಾಟದ ಎಚ್ಚರಿಕೆ: ಬೆದರಿಕೆಗೆ ಬಗ್ಗಿದ ಹೆದ್ದಾರಿ ಕಂಪನಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಗ್ರ ಹೋರಾಟದ ಎಚ್ಚರಿಕೆ: ಬೆದರಿಕೆಗೆ ಬಗ್ಗಿದ ಹೆದ್ದಾರಿ ಕಂಪನಿ!

AchyutKumar by AchyutKumar
in ಸ್ಥಳೀಯ
Warning of violent struggle Highway company bows to threats!

ಶಿರಸಿ-ಕುಮಟಾ ರಸ್ತೆಯ ನಿಲೇಕಣಿ ಬಳಿ ಬಿದ್ದಿರುವ ಹೊಂಡಗಳನ್ನು ಮೂರು ದಿನದ ಒಳಗೆ ಮುಚ್ಚದೇ ಇದ್ದರೆ ಹೈಕೋರ್ಟ ಮೊರೆ ಹೋಗುವುದಾಗಿ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಶನಿವಾರ ಎಚ್ಚರಿಕೆ ನೀಡಿದ್ದು, ಭಾನುವಾರ ಬೆಳಗ್ಗೆಯಿಂದಲೇ ಹೆದ್ದಾರಿ ನಿರ್ವಹಣೆಯ ಗುತ್ತಿಗೆಪಡೆದ ಕಂಪನಿ ಹೊಂಡ ಮುಚ್ಚುವ ಕೆಲಸ ಶುರು ಮಾಡಿದೆ!

ADVERTISEMENT

ಆರ್ ಎನ್ ಎಸ್ ಕಂಪನಿಯೂ ಶಿರಸಿ-ಕುಮಟಾ ಹೆದ್ದಾರಿ ಅಭಿವೃದ್ಧಿ ಹಾಗೂ ನಿರ್ವಹಣೆಯ ಹೊಣೆ ಹೊತ್ತಿದೆ. ಶಿರಸಿ ಪ್ರವೇಶದ್ವಾರದಂತಿರುವ ನಿಲೇಕಣಿ ಬಳಿ ರಸ್ತೆ ತುಂಬ ಗುಂಡಿ ಬಿದ್ದಿರುವುದು ಅರಿವಿದ್ದರೂ ಕಂಪನಿ ತಲೆಕೆಡಿಸಿಕೊಂಡಿರಲಿಲ್ಲ. ಇದರಿಂದ ಜನ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದು, ಶಾಸಕ-ಸಚಿವರ ಬಳಿ ಸಹ ದೂರು ನೀಡಿದ್ದರು. ಆದರೆ, ಅದರಿಂದ ಯಾವ ಪ್ರಯೋಜನವೂ ಆಗಿರಲಿಲ್ಲ.

ಶಿರಸಿ-ಕುಮಟಾ ರಸ್ತೆ ಗುಂಡಿ ನೋಡಿದ ಅನಂತಮೂರ್ತಿ ಹೆಗಡೆ ಸಿಟ್ಟಾದರು. ನಿರ್ವಹಣೆ ಹೊಣೆ ಹೊತ್ತ ಕಂಪನಿಯಿoದ ಗುಂಡಿ ಮುಚ್ಚುವ ಕೆಲಸ ಆಗದೇ ಇದ್ದರೆ, ತಾವೇ ಗುಂಡಿ ಮುಚ್ಚುವುದಾಗಿ ಹೇಳಿಕೆ ನೀಡಿದರು. ಅದರೊಂದಿಗೆ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸುವ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಎಚ್ಚರಿಕೆ ನೀಡಿದರು. ಇದಾದ ನಂತರ ಸಂಸದ ವಿಶ್ವೇಶ್ವರ ಹೆಗಡೆ ಅವರು ಕಂಪನಿ ಅಧಿಕಾರಿಗಳಿಗೆ ಫೋನ್ ಮಾಡಿ ಜಾಡಿಸಿದರು.

Advertisement. Scroll to continue reading.

ಇದರಿಂದ ಬೆದರಿದ ಕಂಪನಿ ಭಾನುವಾರ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೇ ಗುಂಡಿ ಮುಚ್ಚುವ ಕೆಲಸ ಶುರು ಮಾಡಿತು. ಸದ್ಯ ಕಲ್ಲು-ಸಿಮೆಂಟಿನ ಮಿಶ್ರಣವನ್ನು ಆ ರಸ್ತೆ ಮೇಲೆ ಸುರಿಯಲಾಗುತ್ತಿದೆ. ಗುಂಡಿಗಳನ್ನು ತುಂಬಿ ರಸ್ತೆ ಸರಿಪಡಿಸುವ ಕೆಲಸ ನಡೆಯುತ್ತಿದೆ.

Advertisement. Scroll to continue reading.
Previous Post

ಮಂಗನ ಕಾಟ: ಮಣಿಪಾಲಿಗೆ ಹೋದರೂ ಬದುಕದ ನಾಣಿ ಗೌಡ!

Next Post

ಡೀಸಿ ಹೆಸರಿನಲ್ಲಿಯೇ ಡುಪ್ಲಿಕೇಟ್ ಖಾತೆ!

Next Post
Duplicate account in the name of Daisy!

ಡೀಸಿ ಹೆಸರಿನಲ್ಲಿಯೇ ಡುಪ್ಲಿಕೇಟ್ ಖಾತೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ