6
  • Latest
They won't give him a ticket.. they won't even keep him in the party.. Shivaram Hebbar is no longer a BJP member!

ಟಿಕೆಟು ಕೊಡಲ್ಲ.. ಪಕ್ಷದಲ್ಲಿಯೂ ಇಟ್ಟುಕೊಳ್ಳಲ್ಲ.. ಶಿವರಾಮ ಹೆಬ್ಬಾರ್ ಇನ್ಮುಂದೆ ಬಿಜೆಪಿಗರಲ್ಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಟಿಕೆಟು ಕೊಡಲ್ಲ.. ಪಕ್ಷದಲ್ಲಿಯೂ ಇಟ್ಟುಕೊಳ್ಳಲ್ಲ.. ಶಿವರಾಮ ಹೆಬ್ಬಾರ್ ಇನ್ಮುಂದೆ ಬಿಜೆಪಿಗರಲ್ಲ!

AchyutKumar by AchyutKumar
in ರಾಜಕೀಯ
They won't give him a ticket.. they won't even keep him in the party.. Shivaram Hebbar is no longer a BJP member!

ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿದೆ. ಶಿವರಾಮ ಹೆಬ್ಬಾರ್ ಅವರು ಬಿಜೆಪಿ ಪಕ್ಷದಿಂದ ಆಯ್ಕೆ ಆಗಿದ್ದರೂ ಈ ಉಚ್ಚಾಟನೆಯಿಂದ ಅವರ ಶಾಸಕ ಸ್ಥಾನಕ್ಕೆ ಯಾವುದೇ ಸಮಸ್ಯೆ ಇಲ್ಲ!

ADVERTISEMENT

ಶಿವರಾಮ ಹೆಬ್ಬಾರ್ ಅವರು ಈಗಾಗಲೇ ಬಿಜೆಪಿಯಿಂದ ದೂರ ಸರಿದಿದ್ದರು. ತಮ್ಮ ಮಗ ವಿವೇಕ ಹೆಬ್ಬಾರ್ ಅವರನ್ನು ಕಾಂಗ್ರೆಸ್ಸಿಗೆ ಕಳುಹಿಸಿ ಉನ್ನತ ಹುದ್ದೆಯನ್ನು ಕೊಡಿಸಿದ್ದರು. ಜೊತೆಗೆ ಸ್ಥಳೀಯ ಬಿಜೆಪಿ ನಾಯಕರಿಂದಲೂ ಶಿವರಾಮ ಹೆಬ್ಬಾರ್ ಅಂತರ ಕಾಯ್ದುಕೊಂಡಿದ್ದರು. ಬಿಜೆಪಿ ಸಂಘಟನೆಯಲ್ಲಿ ಸಹ ಶಿವರಾಮ ಹೆಬ್ಬಾರ್ ಸಕ್ರಿಯವಾಗಿರಲಿಲ್ಲ. ಪಕ್ಷದ ಯಾವ ಕಾರ್ಯಕ್ರಮದಲ್ಲಿಯೂ ಅವರು ಭಾಗವಹಿಸುತ್ತಿರಲಿಲ್ಲ. ಈ ಎಲ್ಲಾ ಹಿನ್ನಲೆ ಶಿವರಾಮ ಹೆಬ್ಬಾರ್ ವಿರುದ್ಧ ಬಿಜೆಪಿ ಶಿಸ್ತಿನ ಕ್ರಮ ಜರುಗಿಸಿದೆ.

ಶಿವರಾಮ ಹೆಬ್ಬಾರ್ ಅವರು ಬಿಜೆಪಿ ಚಿಹ್ನೆಯ ಅಡಿ ಶಾಸಕರಾಗಿ ಆಯ್ಕೆಯಾಗಿದ್ದರೂ ಪಕ್ಷದಿಂದ ಉಚ್ಚಾಟನೆ ಆದ ಮಾತ್ರಕ್ಕೆ ಅವರ ಅಧಿಕಾರಕ್ಕೆ ಯಾವುದೇ ತೊಂದರೆ ಇಲ್ಲ. ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಜೊತೆ ಕೂರುವ ಅವಕಾಶದಿಂದ ಮಾತ್ರ ಅವರು ವಂಚಿತರಾಗಲಿದ್ದಾರೆ. ವಿಧಾನಸಭೆಯಲ್ಲಿ ಶಿವರಾಮ ಹೆಬ್ಬಾರ್ ಅವರಿಗೆ ಪ್ರತ್ಯೇಕ ಖುರ್ಚಿ ಕೊಡಲಿದ್ದು, ಪಕ್ಷೇತರ ಶಾಸಕರ ರೀತಿ ಅವರು ಕೆಲಸ ನಿರ್ವಹಿಸಲಿದ್ದಾರೆ.

Advertisement. Scroll to continue reading.

`ಮುಂದಿನ ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಿದ ಬಗ್ಗೆ ವಾಟ್ಸಪ್ ಸಂದೇಶ ಬಂದಿದೆ. ನನಗೆ ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಿದರೂ ಉಚ್ಚಾಟನೆ ಮಾಡಿದ್ದರಿಂದ ಸಂದೇಹದ ಜೊತೆ ಸಂತೋಷವೂ ಆಗಿದೆ. ಈ ಮೊದಲೇ ಹೇಳಿದಂತೆ ಬಿಜೆಪಿ ಯಾವದೇ ಕ್ರಮ ಕೈಗೊಂಡರೂ ಅದನ್ನು ಸ್ವಾಗತಿಸುತ್ತೇನೆ’ ಎಂದು ಶಿವರಾಮ ಹೆಬ್ಬಾರ್ ಮಾಧ್ಯಮಗಳ ಎದುರು ಪ್ರತಿಕ್ರಿಯಿಸಿದ್ದಾರೆ.

Advertisement. Scroll to continue reading.

ಇನ್ನೂ ಶಿವರಾಮ ಹೆಬ್ಬಾರ್ ಅವರನ್ನು ಆರು ವರ್ಷಗಳ ಕಾಲ ಬಿಜೆಪಿ ಉಚ್ಚಾಟಿಸಿದ್ದರಿಂದ ಮುಂದಿನ ಚುನಾವಣೆಗೆ ಅವರಿಗೆ ಬಿಜೆಪಿಯ ಬಿ ಪಾರಂ ಸಿಗುವುದಿಲ್ಲ. ಹೀಗಾಗಿ ಹೊಸ ಅಭ್ಯರ್ಥಿಗಳಲ್ಲಿನ ಪೈಪೋಟಿ ಇನ್ನಷ್ಟು ಜೋರಾಗಲಿದೆ.

Previous Post

ಐಟಿ ಪಾರ್ಕ ಸ್ಥಾಪನೆ ವಿಷಯ: ಹೋರಾಟಗಾರರನ್ನು ಸ್ವರ್ಣವಲ್ಲಿ ಶ್ರೀಗಳ ಬಳಿ ಕಳುಹಿಸಿದ ಮಾಗೋಡು ಮಾರುತಿ!

Next Post

ರಾತ್ರಿ ಬರ್ತಾರೆ.. ಕಾರು ತರ್ತಾರೆ.. ಗೋವು ಕದಿತಾರೆ!

Next Post
They come at night.. they bring cars.. they steal cows!

ರಾತ್ರಿ ಬರ್ತಾರೆ.. ಕಾರು ತರ್ತಾರೆ.. ಗೋವು ಕದಿತಾರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ