6
  • Latest
Expulsion is a game of politics!

ರಾಜಕೀಯ ಆಟದಲ್ಲಿ ಉಚ್ಚಾಟನೆ ಪರ್ವ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ರಾಜಕೀಯ ಆಟದಲ್ಲಿ ಉಚ್ಚಾಟನೆ ಪರ್ವ!

AchyutKumar by AchyutKumar
in ರಾಜಕೀಯ
Expulsion is a game of politics!

ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಬಿಜೆಪಿ ಉಚ್ಚಾಟಿಸಿದೆ. ಅದರ ಬೆನ್ನಲ್ಲೆ ಕಾಂಗ್ರೆಸ್ಸಿಗರು ಸಹ ಶ್ರೀನಿವಾಸ ಭಟ್ಟ ಧಾತ್ರಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ!

ADVERTISEMENT

ರಿಯಲ್ ಎಸ್ಟೇಟ್ ಉದ್ಯಮಿ ಆಗಿರುವ ಶ್ರೀನಿವಾಸ ಭಟ್ಟ ಧಾತ್ರಿ ಅವರು ದಿಢೀರ್ ಆಗಿ ರಾಜಕೀಯ ಪ್ರವೇಶಿಸಿದರು. ಬಿಜೆಪಿ ಸೇರಿದ ಆರೇ ತಿಂಗಳಿನಲ್ಲಿ ಅವರು ಕಾಂಗ್ರೆಸ್ಸಿಗೆ ಹಾರಿದರು. ವಿಧಾನಸಭಾ ಚುನಾವಣೆ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಅವರಿಗೆ ಬಿಜೆಪಿ ಟಿಕೆಟ್ ಕೊಡಲಿಲ್ಲ. ಬಿಜೆಪಿ ಶಿವರಾಮ ಹೆಬ್ಬಾರ್ ಅವರಿಗೆ ಬಿ ಪಾರಂ ನೀಡಿದನ್ನು ಸಹಿಸಿಕೊಳ್ಳದ ಶ್ರೀನಿವಾಸ ಭಟ್ಟ ಧಾತ್ರಿ ಅವರು ಮಾಜಿ ಶಾಸಕ ವಿ ಎಸ್ ಪಾಟೀಲ್ ಅವರ ಜೊತೆ ಸೇರಿ ಕಾಂಗ್ರೆಸ್ಸಿಗೆ ಹಾರಿದರು.

ಹಿರಿಯ ಶಾಸಕ ಆರ್ ವಿ ದೇಶಪಾಂಡೆ ಅವರ ಮೂಲಕ ಕಾಂಗ್ರೆಸ್ಸಿನ ಟಿಕೆಟ್‌ಪಡೆಯಲು ಪೈಪೋಟಿ ನಡೆಸಿದರು. ಕಾಂಗ್ರೆಸ್ ವಿ ಎಸ್ ಪಾಟೀಲ್ ಅವರಿಗೆ ಟಿಕೆಟ್ ನೀಡಿದ ಕಾರಣ ಅಲ್ಲಿಯೂ ನಿರಾಸೆಗೊಂಡರು. ಶ್ರೀನಿವಾಸ ಭಟ್ಟ ಧಾತ್ರಿ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದರೂ ಕಾಂಗ್ರೆಸ್ ಕಾರ್ಯಕರ್ತರಿಗೆ ಅವರು ಎಂದಿಗೂ ಹತ್ತಿರವಾಗಲಿಲ್ಲ. ಹಳೆಯ ಬಿಜೆಪಿಗರ ನಂಟನ್ನು ಅವರು ಬಿಡಲಿಲ್ಲ.

Advertisement. Scroll to continue reading.

ಬಿಜೆಪಿ ಸೇರಿದ ಆರೇ ತಿಂಗಳಿನಲ್ಲಿ ಆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದ ಶ್ರೀನಿವಾಸ ಭಟ್ಟ ಧಾತ್ರಿ ಅವರು ಇದೀಗ ಕಾಂಗ್ರೆಸ್ಸಿನಲ್ಲಿ ಏನೂ ಅಲ್ಲ. ಕಾಂಗ್ರೆಸ್ಸಿನಲ್ಲಿ ಮೂರು ವರ್ಷ ಕಳೆದರೂ ಅವರಿಗೆ ಆ ಪಕ್ಷ ಯಾವುದೇ ಅಧಿಕೃತ ಹುದ್ದೆ ನೀಡಿಲ್ಲ. ಬಿಜೆಪಿ ಸೇರಿದ ಶುರುವಿನಲ್ಲಿ ಶ್ರೀನಿವಾಸ ಭಟ್ಟ ಧಾತ್ರಿ ಅವರು ಕೆಲ ಶಾಲೆಗಳಿಗೆ ನೆರವು ನೀಡಿದ್ದರು. ಕಬ್ಬಡ್ಡಿ-ವಾಲಿಬಾಲ್ ಕ್ರೀಡಾಕೂಟಗಳಿಗೆ ಹಣ ಸಹಾಯ ಮಾಡಿದ್ದರು. ಶಾಲೆಯೊಂದಕ್ಕೆ ಆರ್ಥಿಕ ಸಹಾಯ ಮಾಡುವುದಾಗಿ ಹೇಳಿ ಮಾತು ತಪ್ಪಿದ್ದರು. ಬಿಜೆಪಿ ಟಿಕೆಟ್ ವಂಚಿತರಾದ ನಂತರ ಅವರು ಕಾಂಗ್ರೆಸ್ ಸೇರಿದ್ದು, ಆ ವೇಳೆಯಲ್ಲಿಯೂ ಕೆಲವರಿಗೆ ಸಹಾಯ ಮಾಡಿದ್ದರು. ಆದರೆ, ವಿಧಾನಸಭಾ ಚುನಾವಣೆ ಮುಗಿದ ನಂತರ ಅವರು ಕ್ಷೇತ್ರದಲ್ಲಿ ಸಕ್ರಿಯವಾಗಿರಲಿಲ್ಲ. ಆರ್ ವಿ ದೇಶಪಾಂಡೆ ಅವರೇ ಯಲ್ಲಾಪುರ ಕ್ಷೇತ್ರಕ್ಕೆ ಆಗಮಿಸಿದರೂ ಶ್ರೀನಿವಾಸ ಭಟ್ಟ ಧಾತ್ರಿ ಅವರು ಅವರ ಜೊತೆ ಕಾಣಿಸಿಕೊಳ್ಳುತ್ತಿಲ್ಲ.

Advertisement. Scroll to continue reading.

ಅದಾಗಿಯೂ ಕಾಂಗ್ರೆಸ್ ಮುಖಂಡ ಎಂದು ಗುರುತಿಸಿಕೊಂಡಿರುವ ಶ್ರೀನಿವಾಸ ಭಟ್ಟ ಧಾತ್ರಿ ಅವರು ಇದೀಗ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಜೊತೆ ತಿರುಗಾಡುತ್ತಾರೆ. ಉಸ್ತುವಾರಿ ಸಚಿವರ ಜೊತೆ ಅತ್ಯಂತ ಆಪ್ತರಾಗಿರುವಂತೆ ತೋರಿಸಿಕೊಳ್ಳುತ್ತಾರೆ. ಆದರೆ, ಕಾಂಗ್ರೆಸ್ ಕಾರ್ಯಕರ್ತರ ಯಾವ ಕೆಲಸವನ್ನು ಅವರು ಮಾಡಿಸಿದ ಉದಾಹರಣೆಗಳಿಲ್ಲ. ಬದಲಾಗಿ, ಬಿಜೆಪಿಯ ಅನೇಕರು ಧಾತ್ರಿ ಭಟ್ಟರನ್ನು ಹಿಡಿದು ತಮ್ಮ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ!

ಶ್ರೀನಿವಾಸ ಭಟ್ಟ ಧಾತ್ರಿ ಅವರು ಮೂಲತಃ ಯಲ್ಲಾಪುರದವರೇ ಆಗಿದ್ದರೂ ಯಲ್ಲಾಪುರದ ಜನರ ಜೊತೆ ನೇರವಾಗಿ ಸಂಪರ್ಕದಲ್ಲಿಲ್ಲ. ಮುಂಡಗೋಡು-ಬನವಾಸಿ ಭಾಗದ ಅನೇಕರಿಗೆ ಶ್ರೀನಿವಾಸ ಭಟ್ಟ ಧಾತ್ರಿ ಅವರ ಪರಿಚಯವೇ ಇಲ್ಲ. ಯಲ್ಲಾಪುರ-ಮುಂಡಗೋಡು-ಬನವಾಸಿ ಭಾಗದ ಕಾಂಗ್ರೆಸ್ ಪದಾಧಿಕಾರಿಗಳಿಗೂ ಶ್ರೀನಿವಾಸ ಭಟ್ಟ ಧಾತ್ರಿ ಅವರು ಆಪ್ತರಲ್ಲ. ಹಾಗಂತ, ಶ್ರೀನಿವಾಸ ಭಟ್ಟ ಧಾತ್ರಿ ಹಾಗೂ ಈಗಿನ ಪದಾಧಿಕಾರಿಗಳ ನಡುವೆ ವೈರತ್ವವೂ ಇಲ್ಲ.

ಕಾಂಗ್ರೆಸ್ ಸೇರಿದ್ದ ಶ್ರೀನಿವಾಸ ಭಟ್ಟ ಧಾತ್ರಿ ಅವರು ಕಾಂಗ್ರೆಸ್ ವಿರುದ್ಧವೇ ಕೆಲಸ ಮಾಡುತ್ತಿದ್ದಾರೆ ಎಂಬುದು ಅವರ ಮೇಲಿನ ದೊಡ್ಡ ಆರೋಪ. ಉಸ್ತುವಾರಿ ಸಚಿವರನ್ನು ಮುಂದಿರಿಸಿಕೊAಡು ಉಳಿದ ಪದಾಧಿಕಾರಿಗಳ ಕೆಲಸಕ್ಕೆ ಅಡ್ಡಿ ಮಾಡುತ್ತಿದ್ದಾರೆ ಎಂಬುದು ಅವರ ಉಚ್ಚಾಟನೆ ಆಗ್ರಹಕ್ಕೆ ಒಂದು ನೆಪ.

ಸದ್ಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಶ್ರೀನಿವಾಸ ಭಟ್ಟ ದಾತ್ರಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ರಾಜ್ಯ ನಾಯಕರಿಗೆ ಪತ್ರ ಬರೆದಿದ್ದಾರೆ. ಹೊರಗಡೆಯಿಂದ ಕಾಂಗ್ರೆಸ್ಸು, ಒಳಮನಸ್ಸು ಬಿಜೆಪಿ ಎನ್ನುತ್ತಿರುವ ಶ್ರೀನಿವಾಸ ಭಟ್ಟ ಧಾತ್ರಿ ಅವರು ಚುನಾವಣೆ ಸಮೀಪ ಬಂದಾಗ ಬಿಜೆಪಿ ಸೇರುವ ಸಾಧ್ಯತೆ ಹೆಚ್ಚಿದ್ದು, ಸದ್ಯ ಈ ಉಚ್ಚಾಟನೆಗಾಗಿಯೇ ಕಾಯುತ್ತಿದ್ದಾರೆ.

Previous Post

ಆಮೆ ಬಂತು ಆಮೆ: ಅಂಗವಿಕಲ ಆಮೆ!

Next Post

ಐಟಿ ಪಾರ್ಕ ನಿರ್ಮಾಣ: ಉದ್ಯೋಗ ಸೃಷ್ಠಿಯ ಹೋರಾಟಕ್ಕೆ ಸ್ವರ್ಣವಲ್ಲಿ ಶ್ರೀಗಳ ಸಹಕಾರ

Next Post
IT Park Construction Swarnavalli Sri's cooperation in the fight for job creation

ಐಟಿ ಪಾರ್ಕ ನಿರ್ಮಾಣ: ಉದ್ಯೋಗ ಸೃಷ್ಠಿಯ ಹೋರಾಟಕ್ಕೆ ಸ್ವರ್ಣವಲ್ಲಿ ಶ್ರೀಗಳ ಸಹಕಾರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ