6
  • Latest
Yellapur The police here will not stop bikes of those not wearing helmets!

ಯಲ್ಲಾಪುರ: ಇಲ್ಲಿನ ಪೊಲೀಸರು ಹೆಲ್ಮೆಟ್ ಧರಿಸದವರ ಬೈಕ್ ನಿಲ್ಲಿಸುವುದಿಲ್ಲ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರ: ಇಲ್ಲಿನ ಪೊಲೀಸರು ಹೆಲ್ಮೆಟ್ ಧರಿಸದವರ ಬೈಕ್ ನಿಲ್ಲಿಸುವುದಿಲ್ಲ!

AchyutKumar by AchyutKumar
in ಸ್ಥಳೀಯ
Yellapur The police here will not stop bikes of those not wearing helmets!

ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಈಚೆಗೆ ಹೊಸದಾಗಿ `ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್’ ಶುರು ಮಾಡಲಾಗಿದೆ. ಹೀಗಾಗಿ ಹೆಲ್ಮೆಟ್ ಧರಿಸಿದೇ ಬೈಕ್ ಓಡಿಸಿದರೂ ಪೊಲೀಸರು ಅಂಥವರ ಬೈಕ್ ತಡೆಯುವುದಿಲ್ಲ. ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್ ಮೂಲಕ ಸಂಚಾರಿ ನಿಯಮ ಉಲ್ಲಂಘಿಸಿದವರ ಮನೆಗೆ ಕೋರ್ಟ ನೋಟಿಸ್ ಬರಲಿದ್ದು, ಆಗ, ಶಾಸಕ-ಸಚಿವರು ಸೇರಿ ಯಾವ ಪ್ರಭಾವಿಗಳಿಂದ ಫೋನ್ ಮಾಡಿಸಿದರೂ ದಂಡ ಕಟ್ಟುವುದು ತಪ್ಪುವುದಿಲ್ಲ!

ADVERTISEMENT

ಯಲ್ಲಾಪುರದಲ್ಲಿ ಈಚೆಗೆ ರಸ್ತೆ ಅಪಘಾತಗಳ ಪ್ರಮಾಣ ಹೆಚ್ಚಾಗಿದೆ. ಸಂಚಾರಿ ನಿಯಮ ಉಲ್ಲಂಘನೆಯೇ ಇದಕ್ಕೆ ಮುಖ್ಯ ಕಾರಣವಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಬಿಸಿ ಮುಟ್ಟಿಸಲು ಪೊಲೀಸರು ಸಜ್ಜಾಗಿದ್ದಾರೆ. ಈ ಹಿನ್ನಲೆ ಪೊಲೀಸ್ ಠಾಣೆಯಲ್ಲಿ `ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್’ ಸ್ಥಾಪಿಸಲಾಗಿದೆ. ಪಟ್ಟಣದ ವಿವಿಧ ಕಡೆ 32 ಕ್ಯಾಮರಾ ಅಳವಡಿಸಲಾಗಿದ್ದು, ಹೆಲ್ಮೆಟ್ ಧರಿಸದವರ ಫೊಟೋ ಅದರಲ್ಲಿ ಸೆರೆಯಾಗಲಿದೆ. ಅದಾದ ನಂತರ ಮನೆ ಬಾಗಿಲಿಗೆ ನೋಟಿಸ್ ಬರಲಿದೆ.

ಹೆಲ್ಮೆಟ್ ಧರಿಸದೇ ಬೈಕ್ ಓಡಿಸುವವರಿಗೆ ಮಾತ್ರವಲ್ಲ. ಸೀಟ್ ಬೆಲ್ಟ್ ಧರಿಸದೇ ಕಾರು ಓಡಿಸುವವರಿಗೆ ಸಹ ಇದೇ ವ್ಯವಸ್ಥೆ ಆಧಾರದಲ್ಲಿ ನೋಟಿಸ್ ಬರಲಿದೆ. ಪದೇ ಪದೇ ನಿಯಮ ಉಲ್ಲಂಗಿಸುವವರ ವಿರುದ್ಧ ಇನ್ನಷ್ಟು ಕಾನೂನು ಕ್ರಮ ಜರುಗಿಸಲಾಗುತ್ತದೆ. ಪೊಲೀಸ್ ಠಾಣೆಯಲ್ಲಿರುವ ಸಿಬ್ಬಂದಿ ಕ್ಯಾಮರಾ ನೋಡುತ್ತಲಿದ್ದು, ಅದರ ಮೂಲಕ ವಾಹನ ಸವಾರರ ಮೇಲೆ ನಿಗಾವಹಿಸುತ್ತಾರೆ. ಮಹಿಳಾ ಸಿಬ್ಬಂದಿಯೊಬ್ಬರು ಇದೇ ಕೆಲಸಕ್ಕಾಗಿ ನಿಯೋಜನೆಗೊಂಡಿದ್ದಾರೆ.

Advertisement. Scroll to continue reading.

`ಕ್ಯಾಮರಾದಲ್ಲಿ ಸಿಕ್ಕಿ ಬಿದ್ದ ಎಲ್ಲರಿಗೂ ಮೊದಲ ಬಾರಿ ಎಚ್ಚರಿಕೆ ನೀಡಲಾಗುತ್ತದೆ. ಅದಾಗಿಯೂ ನಿಯಮ ಉಲ್ಲಂಘಿಸಿದರೆ ನೋಟಿಸ್ ನೀಡಿ ಕ್ರಮ ಜರುಗಿಸಲಾಗುತ್ತದೆ’ ಎಂದು ಯಲ್ಲಾಪುರ ಸಿಪಿಐ ರಮೇಶ ಹಾನಾಪುರ್ ಅವರು ಮಾಹಿತಿ ನೀಡಿದರು. `ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸದೇ ಸಹಕಾರ ನೀಡಬೇಕು. ಸುರಕ್ಷಿತವಾಗಿ ವಾಹನ ಚಲಾಯಿಸಬೇಕು’ ಎಂದು ಅವರು ಮನವಿ ಮಾಡಿದರು. PSI ಸಿದ್ದಪ್ಪ ಗುಡಿ ಅವರು ಹಾಜರಿದ್ದರು.

Advertisement. Scroll to continue reading.
Previous Post

ಸರ್ಕಾರಿ ಅಧಿಕಾರಿಗಳ ಜಾಣನಡೆ: ಕಡಿದ ಮರ ಮತ್ತೆ ನೆಟ್ಟು ಪರಿಸರ ದಿನ ಆಚರಣೆ!

Next Post

ಈ ಬಾಟಲಿ ನೀರು.. ಬರೀ ನೀರಲ್ಲ.. ವಿಷ!

Next Post
This bottle of water... isn't just water... it's poison!

ಈ ಬಾಟಲಿ ನೀರು.. ಬರೀ ನೀರಲ್ಲ.. ವಿಷ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ