6
  • Latest

ಅರಣ್ಯವಾಸಿಗಳ ಪ್ರಶ್ನೆಗಳಿಗೆ ಅಧಿಕಾರಿಗಳು ತತ್ತರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯವಾಸಿಗಳ ಪ್ರಶ್ನೆಗಳಿಗೆ ಅಧಿಕಾರಿಗಳು ತತ್ತರ!

ಪುರಾತನ ಅತಿಕ್ರಮಣದಾರರಿಗೆ ಅರಣ್ಯಾಧಿಕಾರಿಗಳ ಅಭಯ

AchyutKumar by AchyutKumar
June 25, 2024
in ರಾಜ್ಯ
advt advt advt
ADVERTISEMENT

ಶಿರಸಿ: ಅರಣ್ಯ ಅತಿಕ್ರಮಣದಾರರ ಪರ ಹೋರಾಡುತ್ತಿರುವ ರವೀಂದ್ರ ನಾಯ್ಕರ ಮುಂದಾಳತ್ವದಲ್ಲಿ ನಡೆದ `ಅರಣ್ಯ ಅತಿಕ್ರಮಣದಾರರ ಸಭೆ’ಯಲ್ಲಿ ಅನೇಕರು ಅಧಿಕಾರಿಗಳ ವಿರುದ್ಧ ತಿರುಗಿಬಿದ್ದರು.
ಅರಣ್ಯ ಇಲಾಖೆಯ ಕೆಳ ಹಂತದ ಸಿಬ್ಬಂದಿ `ಬಡವರಿಗೆ ಒಂದು ನ್ಯಾಯ. ಶ್ರೀಮಂತರಿಗೆ ಒಂದು ನ್ಯಾಯ’ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾನೂನಿಗೆ ವ್ಯಕ್ತಿರಿಕ್ತವಾಗಿ ಅರಣ್ಯವಾಸಿಗಳ ವಿರುದ್ಧ ದೌರ್ಜನ್ಯ ಎಸಗುತ್ತಿರುವುದನ್ನು ದಾಖಲೆಗಳಸಹಿತ ಪ್ರಸ್ತುತಪಡಿಸಿದರು.
ಪ್ರಾಣಿಗಳ ಅಕ್ರಮ ಪ್ರವೇಶ:
`ವನ್ಯ ಪ್ರಾಣಿಗಳಾದ ಆನೆ, ಮಂಗಾ, ಕರಡಿ ಸಾಗುವಳಿ ಕ್ಷೇತ್ರಕ್ಕೆ ಅಕ್ರಮ ಪ್ರವೇಶ ಮಾಡಿ ಬೆಳೆ ನಷ್ಟ ಮಾಡುತ್ತಿದೆ. ಅರಣ್ಯವಾಸಿಗಳ ಮೇಲೆ ಪ್ರಾಣಿಗಳಿಂದ ಮಾರಣಾಂತಿಕ ಹಲ್ಲೆ ನಡೆಯುತ್ತಿದೆ. ಅರಣ್ಯ ಇಲಾಖೆ ಇದನ್ನು ನಿಯಂತ್ರಿಸಿಲ್ಲ’ ಎಂದು ಕಿಡಿಕಾರಿದರು. ಅರಣ್ಯವಾಸಿಗಳ ಸಮಸ್ಯೆ ಆಲಿಸಿದ ಅಧಿಕಾರಿಗಳು `ಅರಣ್ಯವಾಸಿಗಳಿಗೆ ಅರಣ್ಯ ಇಲಾಖೆಯಿಂದ ಅನ್ಯಾಯ ಆಗುವುದಿಲ್ಲ’ ಎಂಬ ಭರವಸೆ ನೀಡಿದರು.
ಶಿರಸಿ ವಿಭಾಗದ ಉಪ ಸಂರಕ್ಷಣಾಧಿಕಾರಿ ಅಜ್ಜಯ್ಯ, ದಾಂಡೇಲಿ ಕಾಳಿ ಹುಲಿ ಯೋಜನೆ ಅಧಿಕಾರಿ ನಿಲೇಶ ಕುಮಾರ ಮತ್ತು ತನಿಖಾ ತಂಡದ ಉಪ ಸಂರಕ್ಷಣಾಧಿಕಾರಿ ಅಜೀಜ್ ಸಭೆಯಲ್ಲಿದ್ದು ಸಮಸ್ಯೆ ಆಲಿಸಿದರು. `ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿಸಲ್ಲಿಸಿದ ಜಿ.ಪಿ.ಎಸ್ ಮಾನದಂಡದ ಅಡಿಯಲ್ಲಿ ಸಾಗುವಳಿಗೆಗೆ ಆತಂಕ ಮಾಡುವುದಿಲ್ಲ. ಅರ್ಜಿ ಸಲ್ಲಿಸಿದವರ ಮೇಲೆ ವಿನಾಕಾರಣ ಭೂಕಬಳಿಕೆ ನಿಷೇಧ ಕಾಯ್ದೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದನ್ನ ನಿಯಂತ್ರಿಸಲಾಗುತ್ತದೆ. ಒಕ್ಕಲೇಬ್ಬಿಸುವ ಪ್ರಕ್ರಿಯೆ ಮೂಲಕ ನೋಟಿಸ್ ನೀಡುವುದನ್ನು ಪರೀಶಿಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ’ ಎಂಬ ಆಶ್ವಾಸನೆ ನೀಡಿದರು.
ಹೋರಾಟಗಾರರ ವೇದಿಕೆಯ ಪದಾಧಿಕಾರಿಗಳಾದ ಪ್ರಧಾನ ಸಂಚಾಲಕ ಜೆ.ಎಮ್ ಶೆಟ್ಟಿ ಅಚವೆ, ವಿವಿಧ ತಾಲೂಕು ಅಧ್ಯಕ್ಷರುಗಳಾದ ರಮಾನಂದ ನಾಯ್ಕ, ಭೀಮ್‌ಶಿ ವಾಲ್ಮೀಕಿ, ಶಿವಾನಂದ ಜೋಗಿ, ಮಂಜುನಾಥ ಮರಾಠಿ, ಹರಿಹರ ನಾಯ್ಕ, ಓಮಂಕಾರ, ಬಾಲಚಂದ್ರ ಶೆಟ್ಟಿ, ಸಂತೋಷ ಗಾವಡಾ, ಜಗದೀಶ ಶೆಟ್ಟಿ ಮುಂಡಗೋಡ್, ಮಂಜುನಾಥ ನಾಯ, ಮಹೇಶ ನಾಯ್ಕ ಸಾಲ್ಕೋಡ, ಟಿಪ್ಪು ನಾಯ್ಕ ಮೊದಲಾದವರು ಭಾಗವಹಿಸಿ ತಮ್ಮ ಭಾಗದ ಸಮಸ್ಯೆಗಳನ್ನು ಬಿಚ್ಚಿಟ್ಟರು.

Advertisement. Scroll to continue reading.

 

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಬೈಕ್ ಅಪಘಾತ: ಹೆಸ್ಕಾಂ ನೌಕರ ಸೇರಿ ಮೂವರಿಗೆ ಗಾಯ

Next Post

ಇದುವೇ ಶ್ರೀರಾಮನ ಶಕ್ತಿ: ಬಿಡುಗಡೆ ಮುನ್ನವೇ ಆರು ಸಾವಿರ ಭಕ್ತರನ್ನು ತಲುಪಿದ ಕೃತಿ

Next Post

ಇದುವೇ ಶ್ರೀರಾಮನ ಶಕ್ತಿ: ಬಿಡುಗಡೆ ಮುನ್ನವೇ ಆರು ಸಾವಿರ ಭಕ್ತರನ್ನು ತಲುಪಿದ ಕೃತಿ

ವನ್ಯಜೀವಿ ಹಾನಿ: ಅರಣ್ಯ ಇಲಾಖೆಯಿಂದ ಮೂರುಕಾಸಿನ ಪರಿಹಾರ!

ಕಾಂಗ್ರೆಸ್ ವಿರುದ್ಧ ಬಿಜೆಪಿಗರ ಪೋಸ್ಟರ್ ಅಭಿಯಾನ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.