6
  • Latest
United fight against terrorism BL Santosh questions when will the crooked leaders come to their senses

ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ: ಡೊಂಕು ಬಾಲದ ನಾಯಕರಿಗೆ ಬುದ್ದಿ ಬರುವುದು ಯಾವಾಗ ಎಂದು ಪ್ರಶ್ನಿಸಿದ ಬಿ ಎಲ್ ಸಂತೋಷ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ: ಡೊಂಕು ಬಾಲದ ನಾಯಕರಿಗೆ ಬುದ್ದಿ ಬರುವುದು ಯಾವಾಗ ಎಂದು ಪ್ರಶ್ನಿಸಿದ ಬಿ ಎಲ್ ಸಂತೋಷ್

AchyutKumar by AchyutKumar
in ರಾಜಕೀಯ
United fight against terrorism BL Santosh questions when will the crooked leaders come to their senses

`ಜಮ್ಮು ಕಾಶ್ಮೀರದಲ್ಲಿ ಏಕತೆ ಮತ್ತು ಏಕಾತ್ಮತೆಯ ಭಾವ ಗಟ್ಟಿಗೊಳ್ಳುತ್ತಿರುವ ವೇಳೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಹಿಂದುಗಳನ್ನು ಗುರಿಯಾಗಿರಿಸಿಕೊಂಡು ದಾಳಿ ಮಾಡಿದರು. ಅದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ ಹೇಳಿದ್ದಾರೆ.

ಅಂಕೋಲಾದಲ್ಲಿ ‘ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ’ ಸಂವಾದ ಕಾರ್ಯಕ್ರಮದ ಮುಖ್ಯ ವಕ್ತಾರರಾಗಿ ಮಾತನಾಡಿದ ಅವರು ಪಾಕಿಸ್ತಾನ ಪ್ರಚೋದಿತ ಉಗ್ರಗಾಮಿಗಳು ನಡೆಸಿದ ಅಮಾನವೀಯ ಕೃತ್ಯವನ್ನು ಮಟ್ಟ ಹಾಕಲು ರೂಪಿಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಯಶಸ್ಸಿಗೆ ಕಾಂಗ್ರೆಸ್ ಪಕ್ಷದ ನಾಯಕರು ಕೂಡಾ ತಲೆದೂಗಿದ್ದಾರೆ. ಭಾರತ ದೇಶಕ್ಕೆ ಅಪಾಯ ತಂದೊಡ್ಡಿದ್ದ ಅಂತರಾಷ್ಟ್ರೀಯ ಮಟ್ಟದ 36 ಭಯೋತ್ಪಾದಕರು ಅಜ್ಞಾತ ವ್ಯಕ್ತಿಗಳು ಕಳೆದ ಎರಡು ವರ್ಷಗಳಲ್ಲಿ ಗುಂಡಿಗೆ ಬಲಿಯಾಗಿದ್ದಾರೆ. ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ವಾಯು ನೆಲೆಗಳನ್ನೂ, ಭಯೋತ್ಪಾದಕರ ಅಡಗುದಾಣಗಳನ್ನು ಧ್ವಂಸಗೊಳಿಸುವುದರೊAದಿಗೆ ದೇಶದ ತಾಕತ್ತನ್ನು ಪ್ರದರ್ಶಿಸಿದಂತಾಗಿದೆ’ ಎಂದು ಹೇಳಿದರು.

`ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದ 86 ಸಾವಿರ ಸ್ಥಳಗಳಲ್ಲಿ ಅದ್ಧೂರಿಯಿಂದ ನಡೆದ ತಿರಂಗಾ ಯಾತ್ರೆ ಬದಲಾಗುತ್ತಿರುವ ಭಾರತಕ್ಕೆ ಸಾಕ್ಷಿಯಾಗಿದೆ. ಆದರೆ, ರಾಜ್ಯದ ಕೆಲವು ಬಚ್ಚಲುಬಾಯಿಯ ಸಚಿವರು ಸಾಮಾಜಿಕ ಜಾಲತಾಣಗಳ ಮೂಲಕ ಲೇವಡಿಯ ಮಾತುಗಳನ್ನಾಡುವ ಮೂಲಕ ತಮ್ಮ ಡೊಂಕು ಬಾಲದ ಬುದ್ದಿಯನ್ನು ಪ್ರದರ್ಶಿಸಿದ್ದಾರೆ. ವಿಕಸಿತ ಭಾರತದ ಅಭಿವೃದ್ಧಿಯನ್ನು ಸಹಿಸಲಾಗದ ಇವರು ಜನರಲ್ಲಿ ಭಯದ ವಾತಾವರಣದೊಂದಿಗೆ ಅಸುರಕ್ಷತೆಯನ್ನು ಸೃಷ್ಟಿಯಲು ಹೊರಟಿರುವವರ ವಿರುದ್ಧ ಭಾರತೀಯರೆಲ್ಲರೂ ಒಗ್ಗಟ್ಟಾಗಿ ದೇಶದ ಅಖಂಡತೆಯನ್ನು ಕಾಪಾಡಬೇಕಿದೆ’ ಎಂದು ಅವರು ಕರೆ ನೀಡಿದರು.

ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ನಾಗರಾಜ ನಾಯಕ, ನಿವೃತ್ತ ಯೋಧ ದಾಮುದ್ಲೇಕರ ಮಾತನಾಡಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ, ಕುಮಟಾ ಶಾಸಕ ದಿನಕರ ಶೆಟ್ಟಿ, ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕರಾದ ಸುನೀಲ ಹೆಗಡೆ, ಸುನೀಲ ನಾಯ್ಕ, ಜಿಲ್ಲಾ ವಕ್ತಾರ ನಾಗರಾಜ ವಿ. ನಾಯಕ, ಭಾಸ್ಕರ ನಾರ್ವೇಕರ, ಜಗದೀಶ ನಾಯಕ ಮೊಗಟಾ, ಗಜಾನನ ಗುನಗಾ ಹಳಕಾರ, ನಂದು ಗಾಂವ್ಕರ, ವಿಠ್ಠಲ ಗಾಂವ್ಕರ, ಗಣಪತಿ ನಾಯಕ ಕಾರ್ಯಕ್ರಮದಲ್ಲಿದ್ದರು.

ಮಹೇಶ ಮಹಾಲೆ ಒಂದೇ ಮಾತರಂ ಗೀತೆ ಪ್ರಸ್ತುತ ಪಡಿಸಿದರು. ರಾಷ್ಟ್ರ ರಕ್ಷಣಾ ವೇದಿಕೆಯ ಅಧ್ಯಕ್ಷ ಎನ್ ಎಸ್ ಹೆಗಡೆ ಸ್ವಾಗತಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ ನಿರೂಪಿಸಿದರು. ಶಿವಾಜಿ ನರಸಾನಿ ವಂದಿಸಿದರು. ಸಂವಾದದಲ್ಲಿ ಲೇಖಕ ಮಹಾಂತೇಶ ರೇವಡಿ, ನಿವೃತ್ತ ಶಿಕ್ಷಕ ಬಾಲಚಂದ್ರ ನಾಯಕ ಭಾವಿಕೇರಿ, ಪ್ರವೀಣ ನಾಯ್ಕ ಸಿದ್ದಾಪುರ ಪಾಲ್ಗೊಂಡಿದ್ದರು.

ShareSendTweetShare
Previous Post

ಮೀನುಗಾರರ ನಡುವೆ ಮಾರಾಮಾರಿ: ತಡೆಯಲು ಬಂದ ಪೊಲೀಸರ ಮೇಲೆಯೂ ದಾಳಿ!

Next Post

ಹವ್ಯಕ ಸಭಾ: ಕಳಚೆಗೆ ಬಂದ ಪರಿಹಾರ ಯಾರ ಖಾತೆ ಸೇರಿತು?

Next Post
ಹವ್ಯಕ ಸಭಾ: ಕಳಚೆಗೆ ಬಂದ ಪರಿಹಾರ ಯಾರ ಖಾತೆ ಸೇರಿತು?

ಹವ್ಯಕ ಸಭಾ: ಕಳಚೆಗೆ ಬಂದ ಪರಿಹಾರ ಯಾರ ಖಾತೆ ಸೇರಿತು?

ಹೈಟೆಕ್ ಆಸ್ಪತ್ರೆಗೆ ಹೋದವ ಅಲ್ಲಿಯೇ ಗೊಟಕ್!

ಹೈಟೆಕ್ ಆಸ್ಪತ್ರೆಗೆ ಹೋದವ ಅಲ್ಲಿಯೇ ಗೊಟಕ್!

Facebook account Admin who leaked video gets jail time!

ಫೇಸ್ಬುಕ್ ಖಾತೆ: ವಿಡಿಯೋ ಹರಿಬಿಟ್ಟ ಅಡ್ಮೀನ್'ಗೆ ಜೈಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.