6
  • Latest
Water Life Insult to MPs.. Honored by the opposition faction!

ಜಲ ಜೀವನ: ಸಂಸದರಿಗೆ ಅವಮಾನ.. ವಿರೋಧಿ ಬಣದಿಂದ ಸನ್ಮಾನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಜಲ ಜೀವನ: ಸಂಸದರಿಗೆ ಅವಮಾನ.. ವಿರೋಧಿ ಬಣದಿಂದ ಸನ್ಮಾನ!

AchyutKumar by AchyutKumar
in ರಾಜಕೀಯ
Water Life Insult to MPs.. Honored by the opposition faction!

ಮನೆ ಮನೆಗೂ ಕುಡಿಯುವ ನೀರು ಪೂರೈಸುವ ಜಲ ಜೀವನ ಯೋಜನೆಯನ್ನು ಕೇಂದ್ರ ಸರ್ಕಾರದ ಕೊಡುಗೆ ಇದ್ದರೂ ಅದರ ಉದ್ಘಾಟನೆ ಕಾರ್ಯಕ್ರಮಕ್ಕೆ ಸಂಸದರಿಗೆ ಆಮಂತ್ರಣವಿಲ್ಲ!

ADVERTISEMENT

ಸೋಮವಾರ ಯಲ್ಲಾಪುರ ತಾಲೂಕಿನ ಆನಗೋಡು ಗ್ರಾ ಪಂ ವ್ಯಾಪ್ತಿಯ ದೇವಸ ಹಾಗೂ ಕಣ್ಣಿಗೇರಿ ಗ್ರಾ ಪಂ ವ್ಯಾಪ್ತಿಯ ಹಿಟ್ಟಿನಬೈಲಿನಲ್ಲಿ ಜಲಜೀವನ ಯೋಜನೆಯ ಲೋಕಾರ್ಪಣೆ ನಡೆಯಿತು. ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದರೆ, ಕೇಂದ್ರದ ಕಾರ್ಯಕ್ರಮವಾಗಿದ್ದರೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬಂದಿರಲಿಲ್ಲ. ಕಾರಣ ಅವರಿಗೆ ಈ ವಿಷಯವೇ ಗೊತ್ತಿರಲಿಲ್ಲ!

ಜಲ ಜೀವನ ಯೋಜನೆಗೆ ಕೇಂದ್ರ ಸರ್ಕಾರ ಶೇ 60ರಷ್ಟು ಅನುದಾನ ನೀಡುತ್ತದೆ. ರಾಜ್ಯ ಸರ್ಕಾರ ಉಳಿದ ಶೇ 40ರಷ್ಟು ಹಣ ವಿನಿಯೋಗಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನವಾಗುವುದರಿಂದ ಸಂಸದರು ಹಾಗೂ ಶಾಸಕರನ್ನು ಉದ್ಘಾಟನೆಗೆ ಕರೆಯಿಸಬೇಕಾಗಿರುವುದು ಅಧಿಕಾರಿಗಳ ಕರ್ತವ್ಯ. ಆದರೆ, ಅಧಿಕಾರಿಗಳು ಈ ವಿಷಯದಲ್ಲಿ ಶಿಷ್ಟಾಚಾರ ಪಾಲಿಸದೇ ಕರ್ತವ್ಯಲೋಪ ಎಸಗಿದ್ದಾರೆ.

Advertisement. Scroll to continue reading.

ಜಲ ಜೀವನ ಯೋಜನೆಯ ಆಮಂತ್ರಣ ಪತ್ರಿಕೆಯಲ್ಲಿ ಅಧಿಕಾರಿಗಳು ವಿಶ್ವೇಶ್ವರ ಹೆಗಡೆ ಅವರ ಹೆಸರು ನಮೂದಿಸಿದ್ದಾರೆ. ಆದರೆ, ಆಮಂತ್ರಣವನ್ನು ಅವರಿಗೆ ತಲುಪಿಸಲಿಲ್ಲ. ಕಾರ್ಯಕ್ರಮಕ್ಕೆ ಆಗಮಿಸುವಂತೆ ಸೌಜನ್ಯಕ್ಕೂ ಕರೆದಿಲ್ಲ. ಹೀಗಾಗಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಮುದ್ರಿಸಿರುವ ಬಗ್ಗೆ ಕಾಗೇರಿ ಅವರಿಗೂ ಗೊತ್ತಾಗಿಲ್ಲ. `ನಿಮ್ಮ ಹೆಸರಿದ್ದರೂ ಏಕೆ ಬರಲಿಲ್ಲ?’ ಎಂದು ಕೆಲವರು ಸಂಸದರನ್ನು ಪ್ರಶ್ನಿಸಿದಾಗ `ಜಲ ಜೀವನ ಕಾರ್ಯಕ್ರಮ ಉದ್ಘಾಟನೆ ಮುಗಿದೋಯ್ತ?’ ಎಂದು ಅವರು ಪ್ರಶ್ನಿಸಿದ್ದಾರೆ. ಅದಾದ ನಂತರ ವಿಚಾರಣೆ ನಡೆಸಿದಾಗ ಸಂಸದರಾಗಿದ್ದರೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಆಮಂತ್ರಣವೇ ಇಲ್ಲದಿರುವುದು ಗೊತ್ತಾಗಿದೆ.

Advertisement. Scroll to continue reading.

`ಅಧಿಕಾರಿಗಳ ಈ ನಡೆ ಬೇಸರ ತಂದಿದೆ. ಶಿಷ್ಟಾಚಾರ ಪಾಲನೆ ಮಾಡದೇ ಸಂಸದರಿಗೆ ಅವಮಾನ ಮಾಡುತ್ತಿರುವುದು ಖಂಡನೀಯ’ ಎಂದು ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಹೇಳಿದ್ದಾರೆ. `ಅಧಿಕಾರಿಗಳ ಈ ನಡೆಯನ್ನು ವಿರೋಧಿಸುವೆ’ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಪ್ರತಿಕ್ರಿಯಿಸಿದ್ದಾರೆ.

ಜಲ ಜೀವನ: ವಿರೋಧಿ ಬಣದಿಂದ ಸನ್ಮಾನ!
ಜಲ ಜೀವನ ಯೋಜನೆ ಉದ್ಘಾಟನೆಗಾಗಿ ದೇವಸಕ್ಕೆ ಆಗಮಿಸಿದ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಗ್ರಾ ಪಂ ಸದಸ್ಯ ಕೆ ಟಿ ಹೆಗಡೆ ಸನ್ಮಾನಿಸಿದ್ದಾರೆ. ಕೆ ಟಿ ಹೆಗಡೆ ಅವರು ಬಿಜೆಪಿ ಬೆಂಬಲಿತರಾಗಿದ್ದು, ಕೆ ಟಿ ಹೆಗಡೆ ದೇವಸ ಪ್ರದೇಶವನ್ನು ಪ್ರತಿನಿಧಿಸುತ್ತಾರೆ. ಅವರು ಶಿವರಾಮ ಹೆಬ್ಬಾರ್ ಅವರ ವಿರುದ್ಧ ಮುನಿಸಿಕೊಂಡಿದ್ದರು. ಈ ದಿನ ಆ ಮುನಿಸು ಮರೆತು ನೀರು ಕೊಡುವ ಯೋಜನೆಯಲ್ಲಿ ಅವರಿಬ್ಬರು ಜೊತೆಯಾದರು.

Previous Post

ಸಿದ್ದಾಪುರ ಸಹೋದರಿ ಕುಟುಂಬಕ್ಕೆ ಶಾಸಕರ ಸಾಂತ್ವಾನ: ನಾವು ರಾಜಿನಾಮೇ ಕೇಳಿಲ್ಲ.. ನೀವು ಕೇಳಬೇಡಿ!

Next Post

ಹೊಟ್ಟೆ ಹಸಿವು: ಹಲ್ಲಿಲ್ಲದ ಹಾವು ಚಾಕು ನುಂಗಿತು!

Next Post
ಹೊಟ್ಟೆ ಹಸಿವು: ಹಲ್ಲಿಲ್ಲದ ಹಾವು ಚಾಕು ನುಂಗಿತು!

ಹೊಟ್ಟೆ ಹಸಿವು: ಹಲ್ಲಿಲ್ಲದ ಹಾವು ಚಾಕು ನುಂಗಿತು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ