6
  • Latest
Zoida This taluk is completely organic Agriculture Minister makes announcement after ploughing

ಜೊಯಿಡಾ | ಈ ತಾಲೂಕು ಸಂಪೂರ್ಣ ಸಾವಯವ: ಉಳುಮೆ ಮಾಡಿ ಘೋಷಣೆ ಹೊರಡಿಸಿದ ಕೃಷಿ ಸಚಿವ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಜೊಯಿಡಾ | ಈ ತಾಲೂಕು ಸಂಪೂರ್ಣ ಸಾವಯವ: ಉಳುಮೆ ಮಾಡಿ ಘೋಷಣೆ ಹೊರಡಿಸಿದ ಕೃಷಿ ಸಚಿವ

AchyutKumar by AchyutKumar
June 17, 2025
in ರಾಜ್ಯ
Zoida This taluk is completely organic Agriculture Minister makes announcement after ploughing
advt advt advt
ADVERTISEMENT

`ಜೊಯಿಡಾದಲ್ಲಿನ ಕೃಷಿಭೂಮಿಯಲ್ಲಿ ರಾಸಾಯನಿಕ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಊರನ್ನು ದೇಶದ ಮೊದಲ ಸಾವಯವ ಕೃಷಿ ತಾಲೂಕನ್ನಾಗಿ ಪರಿವರ್ತಿಸಲಾಗುತ್ತದೆ’ ಎಂದು ಕೃಷಿ ಸಚಿವ ಎನ್ ಚಲವರಾಯ ಸ್ವಾಮಿ ಘೋಷಿಸಿದ್ದಾರೆ.

ಮಂಗಳವಾರ ಜೊಯಿಡಾದಲ್ಲಿ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ವಿ ದೇಶಪಾಂಡೆ ಅವರ ಜೊತೆಗೂಡಿ ಕೃಷಿ ಸಚಿವ ಎನ್ ಚಲವರಾಯ ಸ್ವಾಮಿ ಅವರು ಉಳುಮೆ ಮಾಡಿದರು. ಅದಾದ ನಂತರ ಜೋಯಿಡಾ ತಾಲೂಕನ್ನು ಸಾವಯವ ತಾಲೂಕಾಗಿ ಪರಿವರ್ತಿಸುವ ಸಮಾರಂಭಕ್ಕೆ ಚಾಲನೆ ನೀಡಿದರು. `ಜೋಯಿಡಾ ತಾಲೂಕು ಶೇ 70ರಷ್ಟು ಅರಣ್ಯದಿಂದ ಕೂಡಿದ್ದು ಇಲ್ಲಿನ ವಾತಾವರಣ ಬೇರೆ ಕಡೆ ಎಲ್ಲೂ ನೋಡಲು ಸಾಧ್ಯವಿಲ್ಲ. ನೈಸರ್ಗಿಕವಾದ ಭೂಮಿ, ಅರಣ್ಯ ಪ್ರದೇಶ, ಪರಿಸರ ನೈಸರ್ಗಿಕ ಸಂಪತ್ತಿನಿoದ ಕೂಡಿದ ಈ ಊರಿನ ಜನ ರಾಸಾಯನಿಕವಲ್ಲದ ಕೃಷಿ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.

Advertisement. Scroll to continue reading.
ADVERTISEMENT
ADVERTISEMENT

`ಈ ಹಿಂದೆ ಸಾವಯವ ಗೊಬ್ಬರಗಳನ್ನು ಬಳಸಿಕೊಂಡು ಕೃಷಿ ಬೆಳೆಗಳನ್ನು ಬೆಳೆಯಲಾಗುತ್ತಿತ್ತು. ನಂತರ ರಸಾಯನಿಕ ಗೊಬ್ಬರಗಳಿಗೆ ಜನ ಒತ್ತು ನೀಡಿದ್ದು, ಇದರ ದುಷ್ಪರಿಣಾಮದ ಬಗ್ಗೆ ಸಾಕಷ್ಟು ಬಾರಿ ಕೃಷಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ರೈತರು ರಾಸಾಯನಿಕ ಗೊಬ್ಬರ ಬಳಸುವುದನ್ನು ನಿಲ್ಲಿಸಿ, ಸಾವಯವ ಕೃಷಿ, ನೈಸರ್ಗಿಕ ಕೃಷಿ, ಸಿರಿಧ್ಯಾನದ ಬೆಳೆಗಳನ್ನು ಬೆಳೆಯುವ ಮೂಲಕ ರಾಸಾಯನಿಕದಿಂದ ಹೊರಬರಬೇಕು’ ಎಂದರು. `ರಸಾಯನಿಕ ಗೊಬ್ಬರ ಮತ್ತು ಔಷಧಿಗಳನ್ನು ಉಪಯೋಗಿಸುವುದರಿಂದ ಮಣ್ಣಿನ ಫಲವತ್ತತೆ, ಕಡಿಮೆ ಇಳುವರಿ, ಬೆಳೆ ನಾಶ ಮತ್ತು ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಇದನ್ನು ತಪ್ಪಿಸಲು ಕೃಷಿ ಪದ್ದತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಸಾವಯವ ಬದಲಾವಣೆ ಮಾಡಿಕೊಳ್ಳುವ ಅಗತ್ಯವಾಗಿದೆ’ ಎಂದರು. `ರಾಜ್ಯದಲ್ಲಿ 224 ವಿಧಾನಸಭಾ ಕ್ಷೇತ್ರದಲ್ಲೂ ಕೃಷಿ ಹೊಂಡ ನಿರ್ಮಿಸಲು ತೀರ್ಮಾನಿಸಲಾಗಿದೆ. ಈಗಾಗಲೇ 24000 ಕೃಷಿ ಹೊಂಡ ಮಾಡಲಾಗಿದೆ. ಇನ್ನೂ ಮುಂದೆ ಹೆಚ್ಚಿನ ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು. ಕಬ್ಬು ಬೆಳೆಗಾರರಿಗೆ ಕಬ್ಬು ಕಟ್ಟಾವು ಮಾಡಲು ಯಂತ್ರೋಪಕರಣಕ್ಕೆ ಖರೀದಿಸಲು 50 ಲಕ್ಷ ರೂವರೆಗೂ ಸಬ್ಸಿಡಿ ನೀಡಲಾಗುತ್ತಿದೆ’ ಎಂಬ ವಿಷಯ ತಿಳಿಸಿದರು.

Advertisement. Scroll to continue reading.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಆರ್ ವಿ ದೇಶಪಾಂಡೆ ಮಾತನಾಡಿ `ಜೊಯಿಡಾ
ತಾಲೂಕಿನಲ್ಲಿ 2779 ಕೃಷಿ ಜಮೀನಿನ ಪೈಕಿ ಎರಡು ಸಾವಿರ ಹೆಕ್ಟೇರ್ ಅಲ್ಲಿ ಭತ್ತ, 60 ಹೆಕ್ಟೇರ್ ಅಲ್ಲಿ ಕಬ್ಬು ಬೆಳೆಯುತ್ತಿದ್ದಾರೆ. ವರ್ಷಕ್ಕೆ ಆರು ಸಾವಿರ ಕೆ ಜಿ ಜೇನು ಉತ್ಪಾದನೆ ಆಗುತ್ತಿದೆ. ತಾಲೂಕಿನಲ್ಲಿ ಕೇವಲ ಶೇ 6.7ಅಷ್ಟೇ ರಾಸಾಯನಿಕ ಬಳಕೆ ಆಗುತ್ತಿದೆ. ಅದೂ ಕಡಿಮೆ ಮಾಡಬೇಕು ಎಲ್ಲರೂ ಸಾವಯವ ತಾಲೂಕು ಮಾಡಲು ಸಿದ್ಧರಾಗಬೇಕು’ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಆಯುಕ್ತ ವೈ ಎಸ್ ಪಾಟೀಲ್, ಕೃಷಿ ಇಲಾಖೆ ನಿರ್ದೇಶಕ ಜಿ ಟಿ ಪುತ್ರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಜೋಯಿಡಾ ಗ್ರಾಮ ಪಂಚಾಯತಿ ಅಧ್ಯಕ್ಷೆ ಚಂದ್ರಿಮಾ ತುಕಾರಾಮ ಮಿರಾಶಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್, ಜಿಎಸ್‌ಸ್ ಸಂಸ್ಥೆಯ ನಮೃತಾ ಮತ್ತಿತರರು ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

ಸಿಗಡಿ ಮೀನು ಮಾರಲು ಹೋದವ ಕೋಟಿ ರೂ ಕಳೆದುಕೊಂಡ!

Next Post

ಹೊಟೇಲ್ ಒಳಗೆ ಮಾರಾಮಾರಿ | ರಿಯಲ್ ಎಸ್ಟೆಟ್ ಉದ್ಯಮಿ ಮೇಲೆ ದಾಳಿ: ಬಿರಿಯಾನಿ ತಿನ್ನಲು ಬಿಡದ ದುಷ್ಟರು!

Next Post
Movie song at Devi Utsav: Stabbed with a knife because the song stopped!

ಹೊಟೇಲ್ ಒಳಗೆ ಮಾರಾಮಾರಿ | ರಿಯಲ್ ಎಸ್ಟೆಟ್ ಉದ್ಯಮಿ ಮೇಲೆ ದಾಳಿ: ಬಿರಿಯಾನಿ ತಿನ್ನಲು ಬಿಡದ ದುಷ್ಟರು!

A man who fell off his bike filed a complaint against the person who shouted at him!

ಬೈಕಿನಿಂದ ಬಿದ್ದವ ಗುರಾಯಿಸಿದವನ ವಿರುದ್ಧ ದೂರು ನೀಡಿದ!

Vijay Mallya Airlines scam: Naval Commandant's account also affected!

ಅತಿ ಆಸೆ ಗತಿ ಗೇಡು: ಆ ಉದ್ಯೋಗಿಗೆ ಕಾಸು ಕಳೆದ ಮೇಲೆ ಬುದ್ದಿ ಬಂತು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.