6
  • Latest
Opposition to transfer of doctor couple People support BJP's protest

ವೈದ್ಯ ದಂಪತಿ ವರ್ಗಾವಣೆಗೆ ವಿರೋಧ: ಬಿಜೆಪಿ ಪ್ರತಿಭಟನೆಗೆ ಜನ ಬೆಂಬಲ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ವೈದ್ಯ ದಂಪತಿ ವರ್ಗಾವಣೆಗೆ ವಿರೋಧ: ಬಿಜೆಪಿ ಪ್ರತಿಭಟನೆಗೆ ಜನ ಬೆಂಬಲ

AchyutKumar by AchyutKumar
in ರಾಜಕೀಯ
Opposition to transfer of doctor couple People support BJP's protest

ಯಲ್ಲಾಪುರ ತಾಲೂಕು ಆಸ್ಪತ್ರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಡಾ ದೀಪಕ ಭಟ್ಟ ಹಾಗೂ ಡಾ ಸೌಮ್ಯಾ ಕೆ ವಿ ದಂಪತಿ ವರ್ಗಾವಣೆ ವಿರೋಧಿಸಿ ಬುಧವಾರ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆಗೆ ಅನೇಕರು ಬೆಂಬಲವ್ಯಕ್ತಪಡಿಸಿದ್ದು, ಗ್ರಾಮೀಣ ಭಾಗದ ಜನ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದ್ದಾರೆ.

ADVERTISEMENT

ಕಳೆದ 10 ವರ್ಷಗಳಿಂದ ಒಂದೇ ಕಡೆ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಸರ್ಕಾರ ವರ್ಗಾಯಿಸುತ್ತಿದೆ. ಈ ಹಿನ್ನಲೆ ಯಲ್ಲಾಪುರದ ಡಾ ದೀಪಕ ಭಟ್ಟ ಹಾಗೂ ಡಾ ಸೌಮ್ಯಾ ಕೆ ವಿ ಅವರ ವರ್ಗಾವಣೆಗೂ ಆದೇಶವಾಗಿದೆ. ಆದರೆ, ಯಲ್ಲಾಪುರದ ಜನ ಇದನ್ನು ವಿರೋಧಿಸಿದ್ದಾರೆ. `ಈ ವೈದ್ಯ ದಂಪತಿಯ ಸೇವೆ ಇಲ್ಲಿಯೇ ಮುಂದುವರೆಯಬೇಕು’ ಎಂದು ಒತ್ತಾಯಿಸಿದ್ದಾರೆ. ಜನಾಗ್ರಹಕ್ಕೆ ಮಣಿದ ಬಿಜೆಪಿ ವಿರೋಧ ಪಕ್ಷವಾಗಿ ಬುಧವಾರ ಪ್ರತಿಭಟನೆ ನಡೆಸಿದೆ. ಆ ಮೂಲಕ ವೈದ್ಯರನ್ನು ಇಲ್ಲಿಯೇ ಉಳಿಸಿಕೊಳ್ಳುವ ಬಗ್ಗೆ ಸರ್ಕಾರದ ಮೇಲೆ ಒತ್ತಡ ತರುವ ಕೆಲಸ ಮಾಡಿದೆ.

ಸರ್ಕಾರಿ ಆಸ್ಪತ್ರೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಮಳೆಯಲ್ಲಿಯೇ ಮೆರವಣಿಗೆ ನಡೆಸಿದರು. ತಹಶೀಲ್ದಾರ್ ಕಚೇರಿಯವರೆಗೆ ಬಂದು ಸರ್ಕಾರದ ನಡೆಯ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ರೇಖಾ ಹೆಗಡೆ, ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಪ್ರಮುಖರಾದ ಉಮೇಶ ಭಾಗ್ವತ, ರಾಘವೇಂದ್ರ ಭಟ್ಟ, ಚಂದ್ರಕಲಾ ಭಟ್ಟ, ಶ್ಯಾಮಿಲಿ ಪಾಟಣಕರ್, ರಾಮು ನಾಯ್ಕ, ದೋಂಡು ಪಾಟೀಲ ವೈದ್ಯರ ವರ್ಗಾವಣೆ ವಿರೋಧಿಸಿದರು. ಪ್ರಮುಖರಾದ ಸುಬ್ಬಣ್ಣ ಬೋಳ್ಮನೆ, ಶಿವಲಿಂಗಯ್ಯ ಅಲ್ಲಯ್ಯನವರಮಠ, ಶ್ರುತಿ ಹೆಗಡೆ, ಗಣಪತಿ ಬೋಳಗುಡ್ಡೆ, ನಾರಾಯಣ ನಾಯಕ, ರವಿ ಕೈಟ್ಕರ್, ಗಾಂಧಿ ಸೋಮಾಪುರಕರ್, ಸೋಮೇಶ್ವರ ನಾಯ್ಕ ಇತರರು `ವೈದ್ಯರ ವರ್ಗಾವಣೆಗೆ ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಾರಣ’ ಎಂದು ಮಾತನಾಡಿಕೊಂಡರು.

Advertisement. Scroll to continue reading.

`ಬಡವರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಮೂಲಕ ಯಲ್ಲಾಪುರ ಆಸ್ಪತ್ರೆ ರಾಜ್ಯಮಟ್ಟದಲ್ಲಿ ಒಳ್ಳೆಯ ಹೆಸರುಗಳಿಸಿದೆ. ಇದಕ್ಕೆ ಡಾ ದೀಪಕ ಭಟ್ಟ ಹಾಗೂ ಡಾ ಸೌಮ್ಯ ಕೆವಿ ಕಾರಣರಾಗಿದ್ದು, ಅವರ ವರ್ಗಾವಣೆ ರದ್ಧುಗೊಳಿಸಬೇಕು’ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಒತ್ತಾಯಿಸಿದರು. `ಕಡ್ಡಾಯ ವರ್ಗಾವಣೆಯ ಪಟ್ಟಿಯಲ್ಲಿದ್ದ ಬೇರೆ ಬೇರೆ ತಾಲೂಕಿನ ವೈದ್ಯರ ಹೆಸರು ಆ ಪಟ್ಟಿಯಿಂದ ರದ್ಧಾಗಿದೆ. ಅದರಂತೆ ಇಲ್ಲಿಯೂ ಆಗಬೇಕು’ ಎಂದು ಆಗ್ರಹಿಸಿದರು. ಬೇಡಿಕೆ ಈಡೇರದೇ ಇದ್ದರೆ ಇನ್ನಷ್ಟು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

Advertisement. Scroll to continue reading.
Previous Post

ಗೋವಾದಲ್ಲಿ ಕನ್ನಡ ಕಲರವ: ಭರತನಾಟ್ಯ ಪ್ರದರ್ಶಿಸಿದ ಕಾರವಾರ ಪ್ರತಿಭೆ

Next Post

ಜನಸಾಮಾನ್ಯರ ದೂರು: ಸರ್ಕಾರಿ ಆಸ್ಪತ್ರೆಗೆ ವೈದ್ಯರಿಲ್ಲದಿರುವುದೇ ರೋಗ!

Next Post
Common people's complaint The disease is the lack of doctors in government hospitals!

ಜನಸಾಮಾನ್ಯರ ದೂರು: ಸರ್ಕಾರಿ ಆಸ್ಪತ್ರೆಗೆ ವೈದ್ಯರಿಲ್ಲದಿರುವುದೇ ರೋಗ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ