6
  • Latest
accident-a-camera-from-a-police-officer-cracked-a-criminal-case

ಅಪಘಾತ: ಅಪರಾಧ ಪ್ರಕರಣ ಬೇಧಿಸಿದ ಕಿರವತ್ತಿಯ ಕ್ಯಾಮರಾ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪಘಾತ: ಅಪರಾಧ ಪ್ರಕರಣ ಬೇಧಿಸಿದ ಕಿರವತ್ತಿಯ ಕ್ಯಾಮರಾ!

AchyutKumar by AchyutKumar
in ಸ್ಥಳೀಯ
accident-a-camera-from-a-police-officer-cracked-a-criminal-case

ಈಚೆಗೆ ಕಿರವತ್ತಿಯಲ್ಲಿ ಅಳವಡಿಸಿದ್ದ ಹೊಸ ಕ್ಯಾಮರಾ ಅಪರಾಧ ಪ್ರಕರಣವೊಂದನ್ನು ಬೇಧಿಸಿದೆ. ಕ್ಯಾಮರಾ ನೀಡಿದ ಮಾಹಿತಿ ಅನ್ವಯ ಪೊಲೀಸರು ಅಪಘಾತವೊಂದರಲ್ಲಿ ಇಬ್ಬರನ್ನು ಕೊಂದು ಪರಾರಿಯಾಗಿದ್ದ ಲಾರಿ ಚಾಲಕನನ್ನು ಬಂಧಿಸಿದ್ದಾರೆ.

ADVERTISEMENT

ಜೂನ್ 8ರಂದು ಯಲ್ಲಾಪುರದ ಚಿಕ್ಕಮಾವಳ್ಳಿ ಬಳಿಯ ಇಂಡಿಯಾ ಗೇಟ್ ಹೊಟೇಲ್ ಎದುರು ಅಪರಿಚಿತ ವಾಹನ ಬೈಕಿಗೆ ಬಡಿದಿತ್ತು. ಅಪಘಾತ ನಡೆದ ನಂತರ ಅಪರಿಚಿತ ವಾಹನ ಚಾಲಕ ತನ್ನ ವಾಹನ ನಿಲ್ಲಿಸಿರಲಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿರಲಿಲ್ಲ. ಹೀಗಾಗಿ ಬೈಕಿನಲ್ಲಿದ್ದ ಕಲಘಟಗಿಯ ರಾಮು ಗುಜಲೂರು ಹಾಗೂ ವಿಷ್ಣು ಗುಜಲೂರು ಎಂಬಾತರು ಸಾವನಪ್ಪಿದ್ದರು.

ಅದರ ಮರುದಿನವೇ ಕಿರವತ್ತಿಯಲ್ಲಿ ಸಿಸಿ ಕ್ಯಾಮರಾ ಉದ್ಘಾಟನೆ ನಡೆದಿದ್ದು, ಅಪಘಾತದ ಹಿಂದಿನ ದಿನ ಸಿಸಿ ಕ್ಯಾಮರಾ ಅಳವಡಿಕೆಯ ಕಾರ್ಯ ನಡೆದಿತ್ತು. ಆ ವೇಳೆ ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನ ಹುಬ್ಬಳ್ಳಿ ಕಡೆ ಹೋಗಿರುವುದು ಕ್ಯಾಮರಾದಲ್ಲಿ ಸೆರೆಯಾಗಿತ್ತು. ಜೊತೆಗೆ ಅಪಘಾತ ಸ್ಥಳದಲ್ಲಿ ಸಿಕ್ಕ ಟೈಯರ್ ಅಚ್ಚು ನೋಡಿದ ಪೊಲೀಸರು ಅಪರಿಚಿತ ವಾಹನ ಲಾರಿ ಎಂದು ಪತ್ತೆ ಮಾಡಿದ್ದರು. ಹಳದಿ ಬಣ್ಣದ ಪೇಂಟ್ ಬಿದ್ದಿರುವುದನ್ನು ಗಮನಿಸಿ ಲಾರಿಯ ಬಣ್ಣವನ್ನು ಖಚಿತಪಡಿಸಿಕೊಂಡಿದ್ದರು. ಈ ನಡುವೆ ಪ್ರತ್ಯಕ್ಷದರ್ಶಿಯೊಬ್ಬರು ಟ್ಯಾಂಕರ್ ಗುದ್ದಿ ಆ ಇಬ್ಬರು ಸಾವನಪ್ಪಿರುವ ಬಗ್ಗೆ ಹೇಳಿದ್ದರು.

Advertisement. Scroll to continue reading.

ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಸ್ಥಳ ಭೇಟಿ ನಡೆಸಿ ಕುರುಹುಗಳನ್ನು ಸಂಗ್ರಹಿಸಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಗದೀಶ ಎಂ ಜೊತೆಗೆ ಪೊಲೀಸ್ ಉಪಅಧೀಕ್ಷಕಿ ಗೀತಾ ಪಾಟೀಲ್ ವಿವಿಧ ಆಯಾಮಗಳಲ್ಲಿ ಯೋಚಿಸಿದ್ದರು. ಪೊಲೀಸರಿಗೆ ಸಿಕ್ಕ ಸುಳಿವು ಹಾಗೂ ಸಿಸಿ ಕ್ಯಾಮರಾದಲ್ಲಿನ ದಾಖಲೆಗಳು ಹೊಂದಾಣಿಕೆಯಾಗುತ್ತಿದ್ದವು. ಹೀಗಾಗಿ ಯಲ್ಲಾಪುರ ಪಿಐ ರಮೇಶ ಹಾನಾಪುರ, ಪಿಎಸ್‌ಐ ಯಲ್ಲಾಲಿಂಗ ಕನ್ನೂರು, ಸಿದ್ದಪ್ಪ ಗುಡಿ ಆ ಟ್ಯಾಂಕರ್ ಬೆನ್ನತ್ತಿ ಹೊರಟರು.

Advertisement. Scroll to continue reading.

ಪೊಲೀಸ್ ಸಿಬ್ಬಂದಿ ಮಹಮದ್ ಶಫೀ, ಧರ್ಮಾ ನಾಯ್ಕ, ಗಿರೀಶ ಲಮಾಣಿ, ಶೋಭಾ ನಾಯ್ಕ ಹಾಗೂ ಶಿಲ್ಪಾ ಗೌಡ ಸೇರಿ ಹುಬ್ಬಳ್ಳಿಯಲ್ಲಿ ಅಡಗಿದ್ದ ಶೀತಲಪ್ರಸಾದ ಬಿಂದ ಎಂಬಾತನನ್ನು ಬಂಧಿಸಿದರು. ಉತ್ತರ ಪ್ರದೇಶದ ಲಾರಿ ಚಾಲಕನಾಗಿದ್ದ ಶೀತಲಪ್ರಸಾದ್ ಆ ದಿನ ಅಪಘಾತ ಮಾಡಿದನ್ನು ಒಪ್ಪಿಕೊಂಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

Previous Post

ಬೈಕಿನಿಂದ ಬಿದ್ದವ ಜಾಗದಲ್ಲಿಯೇ ಕಲಾಸು!

Next Post

ಹೊಲನಗದ್ದೆ ಗ್ರಾ ಪಂ: ಲೋಕಾಯುಕ್ತರ ವಿರುದ್ಧವೇ ಮೇಲಧಿಕಾರಿಗೆ ದೂರು!

Next Post
Holanagadde Gram Panchayat Complaint to superior against Lokayukta!

ಹೊಲನಗದ್ದೆ ಗ್ರಾ ಪಂ: ಲೋಕಾಯುಕ್ತರ ವಿರುದ್ಧವೇ ಮೇಲಧಿಕಾರಿಗೆ ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ