6
  • Latest
Government relief received in old age Rs 10 crore in the account of Seabird victims!

ಮುದಿ ವಯಸ್ಸಿನಲ್ಲಿ ಸಿಕ್ಕಿತು ಸರ್ಕಾರಿ ಪರಿಹಾರ: ಸೀಬರ್ಡ ಸಂತ್ರಸ್ತರ ಖಾತೆಗೆ 10 ಕೋಟಿ ರೂ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಮುದಿ ವಯಸ್ಸಿನಲ್ಲಿ ಸಿಕ್ಕಿತು ಸರ್ಕಾರಿ ಪರಿಹಾರ: ಸೀಬರ್ಡ ಸಂತ್ರಸ್ತರ ಖಾತೆಗೆ 10 ಕೋಟಿ ರೂ!

AchyutKumar by AchyutKumar
in ದೇಶ - ವಿದೇಶ
Government relief received in old age Rs 10 crore in the account of Seabird victims!

ಕಾರವಾರದ ಸೀಬರ್ಡ್ ನೌಕಾನೆಲೆ ಯೋಜನೆಯಡಿ ಭೂಮಿ ಕಳೆದುಕೊಂಡಿದ್ದ 57 ಭೂ ಮಾಲೀಕರಿಗೆ 10 ಕೋಟಿ ರೂ ಹೆಚ್ಚುವರಿ ಪರಿಹಾರ ದೊರೆತಿದೆ. ಶನಿವಾರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಮಂಕಾಳು ವೈದ್ಯ ಹಾಗೂ ಶಾಸಕ ಸತೀಶ್ ಸೈಲ್ ಈ ಪರಿಹಾರದ ಹಣ ವಿತರಿಸಿದ್ದಾರೆ.

ADVERTISEMENT

ಜಿಲ್ಲಾಧಿಕಾರಿ ಕಚೇರಿ ಮೂಲಕ ಸಂತ್ರಸ್ತರ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಈ ಹಣ ವರ್ಗಾವಣೆ ನಡೆಯಿತು. `ಇನ್ನೂ 60 ಕೋಟಿ ರೂ ಪರಿಹಾರದ ಮೊತ್ತ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಬೇಕಿದ್ದು, ಆ ಬಗ್ಗೆಯೂ ಪ್ರಯತ್ನಿಸಲಾಗುವುದು’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸಚಿವ ಮಂಕಾಳು ವೈದ್ಯ ಈ ವೇಳೆ ಭರವಸೆ ನೀಡಿದರು. ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್ ವಿ ದೇಶಪಾಂಡೆ ಅವರು ಆನ್‌ಲೈನ್ ಮೂಲಕ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದು, `ಎಲ್ಲರೂ ಹಣವನ್ನು ಸರಿಯಾಗಿ ಬಳಸಿಕೊಳ್ಳಿ’ ಎಂದು ಸಲಹೆ ನೀಡಿದರು.

`ಜಿಲ್ಲೆಯ ಜನರ ತ್ಯಾಗದಿಂದ ಸೀಬರ್ಡ್ ಯೋಜನೆ ಬಂದಿದೆ. ಸಂತ್ರಸ್ಥರ ಹೆಚ್ಚುವರಿ ಪರಿಹಾರ ಮೊತ್ತ ಬಿಡುಗಡೆ ಕುರಿತಂತೆ ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಿ, ಪ್ರತ್ಯೇಕ ಅಧಿಕಾರಿಯನ್ನು ನಿಯೋಜಿಸಿದ ನಂತರ ಈ ಕೆಲಸಕ್ಕೆ ವೇಗ ದೊರೆತಿದೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. `ಬಾಕಿಯಿರುವ ಪರಿಹಾರ ಮಂಜೂರಿ ಮಾಡಿಸುವ ಕೆಲಸ ತಮ್ಮ ಜವಾಬ್ದಾರಿ’ ಎಂದು ಸಂಸದರು ಘೋಷಿಸಿದರು.

Advertisement. Scroll to continue reading.

ಶಾಸಕ ಸತೀಶ್ ಸೈಲ್ ಮಾತನಾಡಿ `ಸೀಬರ್ಡ್ ಪರಿಹಾರದ ಮೊತ್ತ ಪಾವತಿ ಪ್ರಕರಣದಲ್ಲಿ ವಿಳಂಬದ ಕಾರಣ ಹಲವು ಮಂದಿಗೆ ಪರಿಹಾರ ದೊರೆತಿಲ್ಲ. ಅವರಿಗೂ ಪರಿಹಾರದ ಮೊತ್ತ ದೊರೆಯುವ ರೀತಿಯಲ್ಲಿ ಕ್ರಮವಾಗಬೇಕು’ ಎಂದರು. ಇದೇ ಸಂದರ್ಭದಲ್ಲಿ ಪ್ರವಾಸೋದÀ್ಯಮ ಇಲಾಖೆಯಿಂದ ಜಿಲ್ಲೆಯ ಕಡಲ ತೀರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜೀವರಕ್ಷಕರಿಗೆ 17.55 ಲಕ್ಷ ರೂ ಮೊತ್ತದ ಜೀವ ರಕ್ಷಕ ಉಪಕರಣಗಳನ್ನು ವಿತರಿಸಲಾಯಿತು. ಅಂಕಿ ಅಂಶ ಇಲಾಖೆಯ 2023-24 ಸಾಲಿನ ಪುಸ್ತಕ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ ಲಕ್ಷಿö್ಮÃಪ್ರಿಯ, ಜಿ ಪಂ ಸಿಇಓ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಪ್ರೋಬೇಷನರಿ ಐಎಎಸ್ ಅಧಿಕಾರಿ ಝುಪಿಶಾನ್ ಹಕ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ನಾವಿ, ಜಿಲ್ಲಾ ಸಂಖ್ಯ ಸಂಗ್ರಹಣಾಧಿಕಾರಿ ಸೋಮಶೇಖರ್ ಮೇಸ್ತಾ ಇದ್ದರು.

Advertisement. Scroll to continue reading.
Previous Post

ಫ್ಯಾಮಿಲಿ ಫಾರ್ಮಹೌಸಿನಲ್ಲಿ ಪ್ರೇಂಡ್ಸ್ ಜೊತೆ ಜೂಜಾಟ!

Next Post

ಕಾರವಾರ | ಮಹಿಳೆಯರೇ ಮಾಡಿದ ಮನೆ ಊಟ: ಬಿಸಿ ಬಿಸಿ ಬಿರಿಯಾನಿ ಜೊತೆ ಬಗೆ ಬಗೆಯ ಖಾದ್ಯಕ್ಕಾಗಿ ಅಕ್ಕ ಕಫೆ!

Next Post
Karwar Home cooked meals by women Akka Cafe for a variety of dishes along with hot biryani!

ಕಾರವಾರ | ಮಹಿಳೆಯರೇ ಮಾಡಿದ ಮನೆ ಊಟ: ಬಿಸಿ ಬಿಸಿ ಬಿರಿಯಾನಿ ಜೊತೆ ಬಗೆ ಬಗೆಯ ಖಾದ್ಯಕ್ಕಾಗಿ ಅಕ್ಕ ಕಫೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ