6
  • Latest
Gram Sabha People came but no officials came!

ಗ್ರಾಮಸಭೆ: ಜನ ಬಂದರೂ ಅಧಿಕಾರಿಗಳೇ ಬಂದಿಲ್ಲ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ರಾಮಸಭೆ: ಜನ ಬಂದರೂ ಅಧಿಕಾರಿಗಳೇ ಬಂದಿಲ್ಲ!

AchyutKumar by AchyutKumar
in ಸ್ಥಳೀಯ
Gram Sabha People came but no officials came!
advt advt advt
ADVERTISEMENT

ಯಲ್ಲಾಪುರದ ಮದನೂರಿನಲ್ಲಿ ನಡೆದ ಗ್ರಾಮಸಭೆಗೆ 300ಕ್ಕೂ ಅಧಿಕ ಜನ ಆಗಮಿಸಿದ್ದರು. ಆದರೆ, ಜನರ ಸಮಸ್ಯೆ ಆಲಿಸಲು ಬರಬೇಕಿದ್ದ ಅಧಿಕಾರಿಗಳೇ ಅಲ್ಲಿ ಕಾಣಿಸಲಿಲ್ಲ!

ಧಾರಾಕಾರ ಮಳೆಯಿದ್ದರೂ ಗ್ರಾಮೀಣ ಭಾಗದ ಜನ ತಮ್ಮ ಸಮಸ್ಯೆ ಹೇಳಿಕೊಳ್ಳಲು ಗ್ರಾಮಸಭೆಗೆ ಬಂದಿದ್ದರು. ವೃದ್ಧರು-ಮಹಿಳೆಯರು ಸಹ ಗ್ರಾಮಸಭೆಯಲ್ಲಿ ಹಾಜರಿದ್ದರು. ಆದರೆ, ಅಧಿಕಾರಿಗಳಿಗೆ ಸರ್ಕಾರ ಐಷಾರಾಮಿ ಕಾರು ನೀಡಿದರೂ ಜನರ ಕಷ್ಟ ಆಲಿಸಲು ಅವರು ಗ್ರಾಮಸಭೆಗೆ ಬರಲಿಲ್ಲ. ಅಧಿಕಾರಿಗಳ ಬಗ್ಗೆ ಅಸಮಧಾನವ್ಯಕ್ತಪಡಿಸಿದ ಮದನೂರು ಗ್ರಾ ಪಂ ಅಧ್ಯಕ್ಷ ವಿಠ್ಠು ಶಳಕೆ ಗ್ರಾಮಸಭೆಯನ್ನು ಜೂನ್ 30ಕ್ಕೆ ಮುಂದೂಡಿದರು.

ADVERTISEMENT
ADVERTISEMENT

ಜೂನ್ 17ರಂದು ಗ್ರಾಮಸಭೆ ನಡೆಸುವ ಬಗ್ಗೆ ಎಲ್ಲಾ ಇಲಾಖೆಯವರಿಗೂ ಮುಂಚಿತವಾಗಿ ಮಾಹಿತಿ ನೀಡಲಾಗಿತ್ತು. ಆದರೆ, ಗ್ರಾಮೀಣ ಭಾಗದ ಜನರ ಬಗ್ಗೆ ಅಸಡ್ಡೆಹೊಂದಿರುವ ಅಧಿಕಾರಿಗಳು ಮಾತ್ರ ಸಭೆಗೆ ಹೋಗಲಿಲ್ಲ. ಮೊದಲಾದರೆ, ಅಧಿಕಾರಿಗಳು ತಮ್ಮ ಕಚೇರಿಯ ಅಧೀನ ಸಿಬ್ಬಂದಿಯನ್ನು ಗ್ರಾಮಸಭೆಗೆ ಕಳುಹಿಸುತ್ತಿದ್ದರು. ಇದೀಗ ಆ ಕೆಲಸ ಮಾಡಲು ಸಹ ಅನೇಕ ಇಲಾಖೆಯವರು ಮರೆತುಬಿಟ್ಟರು.

Advertisement. Scroll to continue reading.

ಪದೇ ಪದೇ ವಿದ್ಯುತ್ ಕಡಿತದ ಬಗ್ಗೆ ತಿಳಿಸುವುದಕ್ಕಾಗಿ ವ್ಯಕ್ತಿಯೊಬ್ಬರು ಎದ್ದು ನಿಂತರು. ಆದರೆ, ಹೆಸ್ಕಾಂ ಅಧಿಕಾರಿಗಳು ಗ್ರಾಮಸಭೆಯಲ್ಲಿ ಕಾಣಲಿಲ್ಲ. ಸಾರ್ವಜನಿಕ ರಸ್ತೆ ಕುರಿತು ಮಾತನಾಡಲು ಮುಂದಾದಾಗ ಲೋಕೋಪಯೋಗಿ ಇಲಾಖೆಯವರು ಬಂದಿರಲಿಲ್ಲ. ಅಂಗನವಾಡಿ ಮಕ್ಕಳ ಪೌಷ್ಠಿಕ ಆಹಾರ ಸಮಸ್ಯೆ ಬಗ್ಗೆ ಚರ್ಚಿಸಲು ಶಿಶು ಅಭಿವೃದ್ಧಿ ಇಲಾಖೆಯವರು ಹಾಜರಿರಲಿಲ್ಲ. ಪಿಂಚಣಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಕಂದಾಯ ಅಧಿಕಾರಿಗಳು ಸಭೆಯಿಂದ ದೂರವಿದ್ದರು. ರೈತರ ಅನುಕೂಲಕ್ಕಾಗಿ ಬರಬೇಕಿದ್ದ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಹೈನುಗಾರಿಕೆಯ ಅಧಿಕಾರಿಗಳು ಸಭೆಯಲ್ಲಿರಲಿಲ್ಲ.

ಮದನೂರು ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇರುವುದಿಲ್ಲ ಎಂದು ವ್ಯಕ್ತಿಯೊಬ್ಬರು ಹೇಳಿದ್ದು, ಅದಕ್ಕೆ ಉತ್ತರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿರಲಿಲ್ಲ. ಕಾರ್ಮಿಕರ ಸಮಸ್ಯೆ ಆಲಿಸುವ ಕಾರ್ಮಿಕ ಅಧಿಕಾರಿ, ಸಾಮಾಜಿಕ ನ್ಯಾಯ ಕಾಪಾಡಬೇಕಿದ್ದ ಸಮಾಜ ಕಲ್ಯಾಣ ಅಧಿಕಾರಿ, ಚಿಕ್ಕ ನೀರಾವರಿ, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳ ಜೊತೆ ಪೊಲೀಸ್, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸಹ ಮದನೂರಿನ ಗ್ರಾಮಸಭೆಯ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

ಶಿಕ್ಷಣ ಇಲಾಖೆಯ ದೈಹಿಕ ಪರಿವೀಕ್ಷಕ ಪ್ರಕಾಶ ತಾರಿಕೊಪ್ಪ ಅವರು ಸಭೆಯ ಉಸ್ತುವಾರಿ ಅಧಿಕಾರಿಯಾಗಿದ್ದರು. ಹೀಗಾಗಿ ಅವರು ಅಲ್ಲಿ ಅನಿವಾರ್ಯವಾಗಿ ಹಾಜರಿದ್ದರು. ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಅಣ್ಣಪ್ಪ ವಡ್ಡರ್ ಅವರಿಗೂ ಸ್ವಾಗತದ ಜವಾಬ್ದಾರಿಯಿದ್ದು, ಅವರು ಸಭೆಯಲ್ಲಿದ್ದರು. ಉಳಿದ ಇಲಾಖೆ ಅಧಿಕಾರಿಗಳ ಅನುಪಸ್ಥಿತಿಯ ಬಗ್ಗೆ ಜನ ಆಕ್ರೋಶವ್ಯಕ್ತಪಡಿಸಿದರು.

Advertisement. Scroll to continue reading.

ಇದೇ ಸಭೆಯಲ್ಲಿ ಗೈರಾಗಿರುವ ಅಧಿಕಾರಿಗಳ ವಿರುದ್ಧ ಜಿಲ್ಲಾ ಪಂಚಾಯತ ಮುಖ್ಯಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡುವ ಬಗ್ಗೆ ನಿರ್ಣಯಿಸಲಾಯಿತು. ಜೂನ್ 30ರ ಸೋಮವಾರ ಬೆಳಗ್ಗೆ 11ಗಂಟೆಗೆ ಮದನೂರಿನ ವಿಠ್ಠಲ ರುಕ್ಮಯಿ ದೇವಸ್ಥಾನ ಸಭಾಭವನದಲ್ಲಿ ಮತ್ತೊಮ್ಮೆ ಗ್ರಾಮಸಭೆ ನಡೆಸಲು ನಿರ್ಧರಿಸಲಾಯಿತು.

 

ShareSendTweetShare
ADVERTISEMENT
Previous Post

ಅಂಗನವಾಡಿಗೆ ಅಕ್ರಮ ನೇಮಕ ಆರೋಪ: ಕಲಿಕಾ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ

Next Post

ಅನಂತಣ್ಣನ ಬೆಂಬಲಿಗರ ಹೊಡೆದಾಟ: ಸಿಂಗಾಪುರಕ್ಕೆ ಹಾರಿದ ಮಾಜಿ ಸಂಸದ

Next Post
Ananthanam's supporters clash Former MP flies to Singapore

ಅನಂತಣ್ಣನ ಬೆಂಬಲಿಗರ ಹೊಡೆದಾಟ: ಸಿಂಗಾಪುರಕ್ಕೆ ಹಾರಿದ ಮಾಜಿ ಸಂಸದ

Bulero punches boy Boy who went to school returns home dead!

ಬಾಲಕನಿಗೆ ಗುದ್ದಿದ ಬುಲೆರೋ: ಶಾಲೆಗೆ ಹೋಗಿದ್ದ ಹುಡುಗ ಮನೆಗೆ ಮರಳಿದ್ದು ಹೆಣವಾಗಿ!

Daisy got out of the car and rode in a rickshaw!

ಕಾರಿನಿಂದ ಇಳಿದು ರಿಕ್ಷಾದಲ್ಲಿ ಓಡಾಡಿದ ಡೀಸಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.