ಕಾರವಾರ: ಬಸವಣ್ಣನ ಸಮಕಾಲೀನರೂ, ಅವರ ಆಪ್ತರಾಗಿದ್ದ ಹಡಪದ ಹಪ್ಪಣ್ಣನವರು ಜಾತಿ ವ್ಯವಸ್ಥೆ , ಮೌಢ್ಯತೆ ಸಾಮಾಜಿಕ ನ್ಯೂನತೆಯನ್ನು ಹೋಗಲಾಡಿಸಲು ವಚನಗಳ ಮೂಲಕ ಮಾನವೀಯತೆಯನ್ನು ಜಾಗೃತಿ ಮೂಡಿಸಿ ಪ್ರಜಾಪ್ರಭುತ್ವದ ಬೇರನ್ನು ಗಟ್ಟಿಗೊಳಿಸಲು ಕಾರಣರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಎಂದು ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ಹಡಪದ ಅಪ್ಪಣ್ಣ ಜಯಂತಿಯನ್ನು ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಸೆಂಟ್ ಜೊಸೇಫ್ ಪ.ಪೂ ಮಹಾವಿದ್ಯಾಲಯದ ಉಪನ್ಯಾಸಕಿ ಜಯಶೀಲಾ ಹಡಪದ ಅಪ್ಪಣ್ಣ ಅವರು ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕನ್ನಡ ಸಂಸ್ಕೃತಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ವಿವಿಧ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ್ ಸ್ವಾಗತಿಸಿದರು. ಶಿಕ್ಷಕಿ ವನಿತಾ ಶೆಟ್ ನಿರೂಪಿಸಿ, ವಂದಿಸಿದರು. ರಾಯಚೂರಿನ ಮಹಾಲಕ್ಷ್ಮೀ ಕಲಾ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು.