6
  • Latest
ಮಗಳನ್ನು ಕೊಂದ ತಂದೆಗೆ ಜೀವಾವಧಿ ಶಿಕ್ಷೆ

ಮಗಳನ್ನು ಕೊಂದ ತಂದೆಗೆ ಜೀವಾವಧಿ ಶಿಕ್ಷೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಗಳನ್ನು ಕೊಂದ ತಂದೆಗೆ ಜೀವಾವಧಿ ಶಿಕ್ಷೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಮಗಳನ್ನು ಕೊಂದ ತಂದೆಗೆ ಜೀವಾವಧಿ ಶಿಕ್ಷೆ

ಯಲ್ಲಾಪುರ: ತಾಲೂಕಿನ ಹೆಮ್ಮಾಡಿ ಕುಂಬ್ರಿಯಲ್ಲಿ ಮಗಳನ್ನೇ ಕೊಲೆ ಮಾಡಿದ್ದ ತಂದೆಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಪ್ರಕಟಿಸಿದೆ.
‌ ‌‌

ADVERTISEMENT

ಹೆಮ್ಮಾಡಿ ಕುಂಬ್ರಿಯ ನಾಗರಾಜ ನಾರಾಯಣ ಪೂಜಾರಿ ಕಳೆದ 2019 ರಲ್ಲಿ ತನ್ನ ಮಗಳಾದ ನಯನಾ (11)ಳನ್ನು ಕೊಲೆ ಮಾಡಿದ್ದ.

ಈತ ತನಗೆ ಮೂವರೂ ಹೆಣ್ಣುಮಕ್ಕಳೇ ಜನಿಸಿದ್ದು, ತನ್ನ ವಂಶ ಮುಂದೆ ಬೆಳೆಯುವುದಿಲ್ಲ ಎಂಬ ಕೊರಗಿನಲ್ಲಿ ದಿನವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಮಗಳಾದ ನಯನಾಳಿಗೆ ಹೃದಯ ಸಂಬಂಧೀ ಕಾಯಿಲೆ ಇದ್ದ ಕಾರಣ ಚಿಕಿತ್ಸೆಗಾಗಿ ಹಣ ಖರ್ಚಾದ ಬಗ್ಗೆಯೂ ಅವನಿಗೆ ಅಸಮಾಧಾನವಿತ್ತು.

Advertisement. Scroll to continue reading.

ಪ್ರತಿನಿತ್ಯ ಗಂಡನ ಗಲಾಟೆಯಿಂದ ಬೇಸತ್ತ ಪತ್ನಿ ಮಕ್ಕಳನ್ನೂ ಅವನೊಂದಿಗೇ ಬಿಟ್ಟು ಹೋಗಿದ್ದಳು. ಮಕ್ಕಳು ತಾಯಿ ಬೇಕೆಂದು ಹಠ ಮಾಡಿದ ಸಂದರ್ಭದಲ್ಲಿ ಸಿಟ್ಟಾದ ನಾಗರಾಜ, ಮಗಳ ಮೇಲೆ ಹಲ್ಲೆ ಮಾಡಿಯೋ ಅಥವಾ ಕ್ರಿಮಿನಾಶಕ ಕುಡಿಸಿಯೋ ಕೊಲೆ ಮಾಡಿದ್ದ. ಕಾರವಾರದ ಮಹಿಳಾ ಸಂಘದವರು ಮತ್ತೊಬ್ಬ ಮಗಳು ಸಹನಾಳ ಕೌನ್ಸಲಿಂಗ್ ಮಾಡಿದಾಗ ಈ ವಿಚಾರ ತಿಳಿದು ಬಂದಿತ್ತು.
ಸಂಬಂಧಿಕರ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿದ್ದ ಯಲ್ಲಾಪುರ ಸಿಪಿಐ ಡಾ.ಮಂಜುನಾಥ ನಾಯಕ, ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Advertisement. Scroll to continue reading.

ವಿಚಾರಣೆ ನಡೆಸಿದ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ ಕಿಣಿ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 17000 ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪುತ್ರಿ ಸಹನಾಳಿಗೆ 10000 ರೂ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಜಿಲ್ಲಾ ಉಚಿತ ಕಾನೂನು ಸೇವಾ ಪ್ರಾಧಿಕಾರದಿಂದಲೂ ಸಹನಾ ಪರಿಹಾರ ಪಡೆಯಬಹುದೆಂದು ತೀರ್ಪು ನೀಡಿದ್ದಾರೆ.

ಪ್ರಧಾನ ಸರ್ಕಾರಿ ಅಭಿಯೋಜಕ ರಾಜೇಶ ಮಳಗಿಕರ್ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು. ಯಲ್ಲಾಪುರ ಹಾಲಿ ಸಿಪಿಐ ರಮೇಶ ಹಾನಾಪುರ ಕೋರ್ಟ್ ಮಾನಿಟರಿಂಗ್ ಮಾಡಿದ್ದರು.

Previous Post

ವಜ್ರಳ್ಳಿಯಲ್ಲಿ ‘ಚಿಗುರು’ ಕಾರ್ಯಕ್ರಮ ನಾಳೆ

Next Post

ಶಾರದಾಗಲ್ಲಿಯ ಯುವಕ ನೇಣಿಗೆ ಶರಣು

Next Post

ಶಾರದಾಗಲ್ಲಿಯ ಯುವಕ ನೇಣಿಗೆ ಶರಣು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ