6
  • Latest
ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ: ಸುಮೇರು ಜ್ಯೋತಿರ್ವನದಲ್ಲಿ ವಿಶಿಷ್ಟ ಕಾರ್ಯಕ್ರಮ

ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ: ಸುಮೇರು ಜ್ಯೋತಿರ್ವನದಲ್ಲಿ ವಿಶಿಷ್ಟ ಕಾರ್ಯಕ್ರಮ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ: ಸುಮೇರು ಜ್ಯೋತಿರ್ವನದಲ್ಲಿ ವಿಶಿಷ್ಟ ಕಾರ್ಯಕ್ರಮ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ: ಸುಮೇರು ಜ್ಯೋತಿರ್ವನದಲ್ಲಿ ವಿಶಿಷ್ಟ ಕಾರ್ಯಕ್ರಮ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಸುಮೇರು ಜ್ಯೋತಿರ್ವಿಜ್ಞಾನ ಸಂಪ್ರತಿಷ್ಠಾನ, ಸಾತ್ವಿಕ ಫೌಂಡೇಶನ್ ಹಾಗೂ ಮಂಚೀಕೇರಿ ವಲಯ ಅರಣ್ಯ ಇಲಾಖೆಗಳ ಆಶ್ರಯದಲ್ಲಿ ಸುಮೇರು ಜ್ಯೋತಿರ್ವನದಲ್ಲಿ ‘ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ’ ಕಾರ್ಯಕ್ರಮ ನಡೆಯಿತು.

ADVERTISEMENT

ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಭಾನು ಜಿ.ಪಿ, ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ.ಬಿ.ಡಿ.ಬಿರಾದಾರ, ಕಾರ್ಯಕ್ರಮ ಸಂಯೋಜಕ ಡಾ.ಕೆ.ಸಿ.ನಾಗೇಶ ಭಟ್ಟ ಅವರು ಅ ಅಕ್ಷರದ ಶ್ರೀಗಂಧ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮ ಆರಂಭಗೊಂಡಿತು. 75 ಕ್ಕೂ ಹೆಚ್ಚು ಜನ 50 ಅಕ್ಷರಗಳಿಗೆ ಸಂಬಂಧಿಸಿದ ಗಿಡಗಳನ್ನು ನೆಟ್ಟರು.

ವೃಕ್ಷ ಸಂಸರ್ಗ, ಸೇವೆ ಯಿಂದ ಪರೋಪಕಾರ ಬುದ್ಧಿ ಬೆಳೆಯುತ್ತದೆ. ಅಕ್ಷರ ವೃಕ್ಷ ಸೇವೆಯಿಂದ ವಿದ್ಯಾ ಪ್ರಗತಿ, ಆರೋಗ್ಯ ವೃದ್ಧಿ ಸಾಧ್ಯ. ವೃಕ್ಷಗಳು ಮಾನವನಿಗಿಂತ ಮೂರು ಯುಗಗಳಷ್ಟು ಮೊದಲೇ ಸೃಷ್ಟಿಯಾಗಿವೆ. ವೃಕ್ಷ ಸೇವೆಯನ್ನು ಎಲ್ಲರೂ ಮಾಡುವಂತಾಗಬೇಕೆಂಬ ಆಶಯ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಲಾಯಿತು.

Advertisement. Scroll to continue reading.

ನಂತರ ನಡೆದ ಸಭೆಯಲ್ಲಿ ಮಾತನಾಡಿದ ಡಿಸಿಎಫ್ ಹರ್ಷ ಭಾನು, ಸನಾತನ ಧರ್ಮ, ಜಾನಪದ ನುಡಿಗಳನ್ನು ಅನುಸರಿಸಿ ಮುನ್ನಡೆದರೆ ಪ್ರಕೃತಿ ಸಂರಕ್ಷಣೆ ಸಾಧ್ಯ. ಈ ನಿಟ್ಟಿನಲ್ಲಿ ಸುಮೇರು ಜ್ಯೋತಿರ್ವನವು ಕೈಗೊಳ್ಳುತ್ತಿರುವ ಕಾರ್ಯಗಳು ಶ್ಲಾಘನೀಯ. ಎಲ್ಲರೂ ಇಂತಹ ಕಾರ್ಯಕ್ಕೆ ಸಹಕರಿಸಬೇಕು ಎಂದರು.

Advertisement. Scroll to continue reading.

ಡಾ.ಬಿ.ಡಿ.ಬಿರಾದಾರ ಮಾತನಾಡಿ, ಇಂತಹ ಮೌಲ್ಯಯುತ, ಧಾರ್ಮಿಕ, ವೈಜ್ಞಾನಿಕ ಕಾರ್ಯಗಳು ಸಮಾಜಕ್ಕೆ ಬೇಕು. ನಮ್ಮ ವಿಶ್ವವಿದ್ಯಾಲಯದಲ್ಲೂ ಅಮೃತವನವನ್ನು ನಿರ್ಮಿಸುವ ಪ್ರಯತ್ನ ಮಾಡುತ್ತೇವೆ ಎಂದರು.

ಪರಿಸರ ಬರಹಗಾರ ಶಿವಾನಂದ ಕಳವೆ, ವಿಜ್ಞಾನಿ ಡಾ.ಕೇಶವ ಹೆಗಡೆ ಕೊರ್ಸೆ, ತಜ್ಞರಾದ ಪ್ರಕಾಶ ಅಡೆಮನೆ, ಪ್ರಕಾಶ ಮಂಚಾಲೆ, ಉಮಾಪತಿ ಭಟ್ಟ ಶಿರಸಿ, ರಾಮಚಂದ್ರ ಹೆಗಡೆ, ಸಂಸ್ಥೆಯ ಅಧ್ಯಕ್ಷೆ ಡಾ.ನಿವೇದಿತಾ ಭಟ್ಟ ಇತರರಿದ್ದರು.

ಜ್ಯೋತಿರ್ವಿಜ್ಞಾನ ಗುರುಕುಲದ ವಿದ್ಯಾರ್ಥಿಗಳಾದ ಕಾರ್ತಿಕ್ ಸ್ವಾಗತಿಸಿದರು. ಅಮೋಘ ಶರ್ಮಾ ನಿರ್ವಹಿಸಿದರು. ಮಹೇಶ ಭಟ್ ವಂದಿಸಿದರು.

Previous Post

ಅಂತರ್ ಜಿಲ್ಲಾ ರೌಡಿ ಕಾಲಿಗೆ ಪೊಲೀಸರ ಗುಂಡೇಟು

Next Post

ಅರಬೈಲ್ ಶಾಲೆಯಲ್ಲಿ ಕವನ ಆಲಿಸಿ, ಭಾವಾರ್ಥ ಗೃಹಿಸಿದ ಮಕ್ಕಳು

Next Post
ಅರಬೈಲ್ ಶಾಲೆಯಲ್ಲಿ ಕವನ ಆಲಿಸಿ, ಭಾವಾರ್ಥ ಗೃಹಿಸಿದ ಮಕ್ಕಳು

ಅರಬೈಲ್ ಶಾಲೆಯಲ್ಲಿ ಕವನ ಆಲಿಸಿ, ಭಾವಾರ್ಥ ಗೃಹಿಸಿದ ಮಕ್ಕಳು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ