6
  • Latest
ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

ಉತ್ತಮ ಸಂಘಟನೆಯ ಮೂಲಕ ಜಿಲ್ಲೆಯ ಗಮನ ಸೆಳೆದಿರುವ ಯಲ್ಲಾಪುರದ ಶ್ರಾವಣ ಯಕ್ಷ ಸಂಭ್ರಮಕ್ಕೆ ಈ ಬಾರಿ ದಶಮಾನೋತ್ಸವದ ಸಂಭ್ರಮ. ಅಪರೂಪದ ಸಂಯೋಜನೆಯೊಂದಿಗೆ ದಶಮ ಶ್ರಾವಣ ಯಕ್ಷ ಸಂಭ್ರಮ ಕಾರ್ಯಕ್ರಮ ಬರುವ ಆಗಸ್ಟ್ 23 ರಂದು ಕಾರ್ಮಿಕ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಪೋಸ್ಟರನ್ನು ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಿಡುಗಡೆಗೊಳಿಸಲಾಯಿತು.

ADVERTISEMENT

ಸಂಕಲ್ಪದ ರೂವಾರಿ, ಸಾಂಸ್ಕೃತಿಕ ರಾಯಭಾರಿ ಪ್ರಮೋದ ಹೆಗಡೆ ಪೋಸ್ಟರ್ ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಪ್ರಮೋದ ಹೆಗಡೆ, ಯುವಕರು ಯಕ್ಷಗಾನ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದು ಉತ್ತಮ‌ ಬೆಳವಣಿಗೆ. ಶ್ರಾವಣ ಯಕ್ಷ ಸಂಭ್ರಮ ಕೇವಲ ಒಂದು ಕಾರ್ಯಕ್ರಮವಲ್ಲ, ಯಲ್ಲಾಪುರದ ಹಬ್ಬ. ಈ ಹಬ್ಬ ನಿರಂತರವಾಗಿ ಯಶಸ್ಸು ಗಳಿಸುತ್ತ ಮುನ್ನಡೆಯಲಿ ಎಂದು ಹಾರೈಸಿದರು.

 

Advertisement. Scroll to continue reading.

ಸಂಘಟನೆಯ ರೂವಾರಿಗಳಾದ ಸುಬ್ಬಣ್ಣ ಕಂಚಗಲ್, ರಾಘವೇಂದ್ರ ಬೆಳಸೂರು ಮಾತನಾಡಿ, ಆಗಸ್ಟ್ 23 ರ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ನಿರಂತರವಾಗಿ 12 ತಾಸುಗಳ ಕಾಲ ಯಕ್ಷಗಾನ ಪ್ರದರ್ಶನ ನಡೆಯಲಿದೆ. ದಶಮಾನೋತ್ಸವದ ಪ್ರಯುಕ್ತ ವಿಶೇಷ ಸಂಯೋಜನೆ ಮಾಡಲಾಗಿದ್ದು, ರತ್ನಾವತಿ ಕಲ್ಯಾಣ, ಊರ್ವಶಿ ಶಾಪ, ಮಾರುತಿ ಪ್ರತಾಪ, ಮಾರಣಾಧ್ವರ ಯಕ್ಷಗಾನ ಪ್ರಸಂಗಗಳು ಪ್ರದರ್ಶನಗೊಳ್ಳಲಿವೆ. ದಕ್ಷಿಣೋತ್ತರಕನ್ನಡ ಜಿಲ್ಲೆಯ 40 ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಲಿದ್ದಾರೆ. ತೆಂಕು-ಬಡಗು ಕಲಾವಿದರ ಕೂಡುವಿಕೆಯ ಒಂದು ಪ್ರಸಂಗ ಇರುವುದು ವಿಶೇಷ. ತೆಂಕು-ಬಡಗುಗಳೆರಡರಲ್ಲೂ ಭಾಗವತಿಕೆಯಲ್ಲಿ ಪರಿಣಿತರಾಗಿರುವ ದಿನೇಶ ಭಟ್ಟ ಯಲ್ಲಾಪುರ ಅವರನ್ನು ಸನ್ಮಾನಿಸಲಾಗುವುದು ಎಂದು ವಿವರಿಸಿದರು.

Advertisement. Scroll to continue reading.

ಸಂಘಟನೆಯ ಸದಸ್ಯ ಎಂ.ಆರ್.ವಡ್ರಮನೆ ಮಾತನಾಡಿ, ಅಪರೂಪದ ಪ್ರಸಂಗಗಳು, ನುರಿತ ಕಲಾವಿದರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರೋತ್ಸಾಹಿಸುವಂತೆ ವಿನಂತಿಸಿದರು. ಸಂಘಟನೆಯ ಸದಸ್ಯರಾದ ನರಸಿಂಹ ಭಟ್ಟ, ಶ್ಯಾಮ ಆಚಾರಿ ಉಪಸ್ಥಿತರಿದ್ದರು.

Previous Post

ದೇಹಳ್ಳಿ ಪಂಚಾಯಿತಿಯಲ್ಲಿ ಎಸ್.ಸಿ, ಎಸ್.ಟಿ ಅನುದಾನ ದುರ್ಬಳಕೆ: ನಾಗರಾಜ ಭಟ್ಟ ಚಾಪೆತೋಟ ಆರೋಪ

Next Post

ಸಿದ್ದಿ ಸಮುದಾಯಕ್ಕೆ ಉನ್ನತ ಹುದ್ದೆ ನೀಡಲು ಆಗ್ರಹ

Next Post
ಸಿದ್ದಿ ಸಮುದಾಯಕ್ಕೆ ಉನ್ನತ ಹುದ್ದೆ ನೀಡಲು ಆಗ್ರಹ

ಸಿದ್ದಿ ಸಮುದಾಯಕ್ಕೆ ಉನ್ನತ ಹುದ್ದೆ ನೀಡಲು ಆಗ್ರಹ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ