6
  • Latest
ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ‌ ಹೆಜ್ಜೆ

ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ‌ ಹೆಜ್ಜೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ‌ ಹೆಜ್ಜೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಲೇಖನ
advt advt advt
ADVERTISEMENT

ನಾವು ಜೀವನದಲ್ಲಿ ಏನನ್ನಾದರೂ ಸಾಧಿಸಲು ಬಯಸಿದರೆ ನಮ್ಮ ಮೊದಲ ಮತ್ತು ಅತಿ ಮುಖ್ಯವಾದ ಹೆಜ್ಜೆ ಗುರಿ ನಿಗದಿಪಡಿಸುವುದಾಗಿರಬೇಕು. ನಿರ್ದಿಷ್ಟ ಗುರಿಗಳಿಲ್ಲದ ಜೀವನವು ದಿಕ್ಸೂಚಿಯಿಲ್ಲದ ಹಡಗಿನಂತೆ ಆಗುತ್ತದೆ. ನಿಖರವಾದ ಗುರಿಗಳು ನಮ್ಮ ಪ್ರಯತ್ನಗಳಿಗೆ ಒಂದು ಸ್ಪಷ್ಟವಾದ ದಿಕ್ಕನ್ನು ನೀಡುತ್ತವೆ ಮತ್ತು ನಮ್ಮ ಶಕ್ತಿಯನ್ನು ಸರಿಯಾದ ಮಾರ್ಗದಲ್ಲಿ ವ್ಯಯಿಸಲು ಸಹಾಯ ಮಾಡುತ್ತವೆ.

ನಮ್ಮ ಗುರಿ ಏನೇ ಇರಲಿ ಅದು ವೈಯಕ್ತಿಕ ಬೆಳವಣಿಗೆಯಾಗಿರಲಿ, ವೃತ್ತಿಜೀವನದ ಸಾಧನೆಯಾಗಿರಲಿ ಅಥವಾ ಶೈಕ್ಷಣಿಕ ಉನ್ನತಿಯಾಗಿರಲಿ ಅದನ್ನು ನಿರ್ದಿಷ್ಟವಾಗಿ ವ್ಯವಸ್ಥಿತ ರೀತಿಯಲ್ಲಿ ರೂಪಿಸಿಕೊಳ್ಳಬೇಕು. ‘ನಾನು ಬದುಕಿನಲ್ಲಿ ಒಬ್ಬ ಯಶಸ್ವಿ ವ್ಯಕ್ತಿಯಾಗಬೇಕು’ ಎನ್ನುವುದರ ಜೊತೆಗೆ ‘ನಾನು ಪ್ರತಿದಿನ ಒಂದು ಗಂಟೆ ಓದಿ ಹೊಸ ವಿಷಯಗಳನ್ನು ಕಲಿಯಬೇಕು’ ಆ ಮೂಲಕ ‘ನನ್ನ ಬದುಕಿಗೆ ಹೊಸ ಅರ್ಥ ನೀಡಬೇಕು’ ಎಂದು ಹೇಳುವುದು ಹೆಚ್ಚು ಪರಿಣಾಮಕಾರಿಯಾಗುತ್ತದೆ. ನಾವು ಆಯ್ಕೆ ಮಾಡಿಕೊಂಡ ಗುರಿಗಳು ವಾಸ್ತವಿಕವಾಗಿರಬೇಕು, ಆದರೆ ಅದೇ ಸಮಯದಲ್ಲಿ ಆ ಗುರಿಗಳು ನಮ್ಮನ್ನು ಎಂತದೇ ಸವಾಲುಗಳಿಗೂ ಒಡ್ಡಿಕೊಳ್ಳುವಂತಿರಬೇಕು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಒಮ್ಮೆ ನಮ್ಮ ಗುರಿಯನ್ನು ನಿಗದಿಪಡಿಸಿದ ನಂತರ ನಾವು ಅದರತ್ತ ಸಂಪೂರ್ಣ ಗಮನ ಹರಿಸುವುದು ಬಹಳ ಮುಖ್ಯ. ನಮ್ಮ ಗಮನವನ್ನು ಬೇರೆಡೆಗೆ ಸೆಳೆಯುವ ನಕಾರಾತ್ಮಕ ಅಂಶಗಳಿಂದ ದೂರವಿರುವುದು ಅಷ್ಟೇ ಅವಶ್ಯಕವೂ ಹೌದು. ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಮತ್ತು ಅಧ್ಯಯನದ ಸ್ಥಳವನ್ನು ಅಡೆತಡೆಗಳಿಲ್ಲದಂತೆ ಅಳವಡಿಸಿಕೊಳ್ಳುವುದು ನಮ್ಮ ಮೊದಲ ಜವಾಬ್ದಾರಿಯಾಗಬೇಕು. ಪ್ರತಿ ದಿನವೂ ನಮ್ಮ ಗುರಿಗಾಗಿ ನಿರ್ದಿಷ್ಟ ಸಮಯವನ್ನು ಮೀಸಲಿಡುವುದು. ನಮ್ಮ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸುವುದು. ಬದುಕಿನಲ್ಲಿ ಸಣ್ಣ ಗುರಿಗಳನ್ನು ಸಾಧಿಸಿದಾಗ ನಮ್ಮನ್ನು ನಾವೇ ಮೊದಲು ಪ್ರೋತ್ಸಾಹಿಸಿಕೊಳ್ಳುವುದು ನಮಗೆ ವೈಯಕ್ತಿಕವಾಗಿ ಮತ್ತಷ್ಟು ಸ್ಫೂರ್ತಿ ನೀಡುತ್ತದೆ.
ಯಾವುದೇ ಸವಾಲುಗಳು ಎದುರಾದಾಗಲೋ ಅಥವಾ ಯಾವುದೋ ಕಾರಣಕ್ಕೆ ಜೀವನದಲ್ಲಿ ಹತಾಶೆಗೊಂಡಾಗ ನಮ್ಮ ಗುರಿಯನ್ನು ನೆನಪಿಸಿಕೊಳ್ಳುವುದು. ನಾನು ಈ ಗುರಿಯನ್ನು ಏಕೆ ಆರಿಸಿಕೊಂಡೆ, ಅದು ನನ್ನ ಜೀವನಕ್ಕೆ ಹೇಗೆ ಅರ್ಥ ನೀಡುತ್ತದೆ ಎಂಬುದನ್ನು ಮರುಪರಿಶೀಲಿಸಿಕೊಳ್ಳಬೇಕು.

ನಮ್ಮ ದೃಷ್ಟಿಯನ್ನು ನಮ್ಮ ಅಂತಿಮ ಗುರಿಯ ಮೇಲೆ ಇರಿಸುವುದರಿಂದ, ತಾತ್ಕಾಲಿಕ ಅಡೆತಡೆಗಳನ್ನು ಮೆಟ್ಟಿ ನಿಲ್ಲಲು ಸಾಧ್ಯವಾಗುತ್ತದೆ. ದೃಢ ಸಂಕಲ್ಪ ಮತ್ತು ನಿರಂತರ ಗುರಿಯೆಡೆಗೆ ಗಮನ ನಮ್ಮ ಗುರಿಗಳನ್ನು ತಲುಪಲು ಪ್ರಮುಖ ಅಸ್ತçಗಳಾಗಿವೆ. ಹೀಗೆ ನಾವು ಒಂದು ಗುರಿಯನ್ನು ನಿಗದಿಪಡಿಸಿದಾಗ ಮಾತ್ರ ಅದನ್ನು ತಲುಪುವ ಪ್ರಯಾಣ ಆರಂಭವಾಗುತ್ತದೆ.
– ರವಿ ಶೇಷಗಿರಿ
ಸಹಾಯಕ ಪ್ರಾಧ್ಯಾಪಕರು
ಸ.ಪ್ರ.ದ ಕಾಲೇಜು ಯಲ್ಲಾಪುರ

ShareSendTweetShare
ADVERTISEMENT
Previous Post

ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

Next Post

‘ಕಾಮಿಡಿ ಕಿಲಾಡಿ’ ಖ್ಯಾತಿಯ ಚಂದ್ರಶೇಖರ ಸಿದ್ದಿ ಇನ್ನಿಲ್ಲ

Next Post
‘ಕಾಮಿಡಿ ಕಿಲಾಡಿ’ ಖ್ಯಾತಿಯ ಚಂದ್ರಶೇಖರ ಸಿದ್ದಿ ಇನ್ನಿಲ್ಲ

'ಕಾಮಿಡಿ ಕಿಲಾಡಿ' ಖ್ಯಾತಿಯ ಚಂದ್ರಶೇಖರ ಸಿದ್ದಿ ಇನ್ನಿಲ್ಲ

ಮನೆಯ ಗೋಡೆ ಉರುಳಿಸಿದ ಲಾರಿ

ಮನೆಯ ಗೋಡೆ ಉರುಳಿಸಿದ ಲಾರಿ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.