6
  • Latest
ಭ್ರಷ್ಟಾಚಾರದ ತನಿಖೆಗೆ ಬಂದ ಅಧಿಕಾರಿಯೂ ಭ್ರಷ್ಟ?: ಇನ್ನು ಲೋಕಾಯುಕ್ತರೇ ಗತಿ

ಭ್ರಷ್ಟಾಚಾರದ ತನಿಖೆಗೆ ಬಂದ ಅಧಿಕಾರಿಯೂ ಭ್ರಷ್ಟ?: ಇನ್ನು ಲೋಕಾಯುಕ್ತರೇ ಗತಿ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭ್ರಷ್ಟಾಚಾರದ ತನಿಖೆಗೆ ಬಂದ ಅಧಿಕಾರಿಯೂ ಭ್ರಷ್ಟ?: ಇನ್ನು ಲೋಕಾಯುಕ್ತರೇ ಗತಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ಕುರಿತು ತನಿಖೆ ಮಾಡಲು ಬಂದ ಅಧಿಕಾರಿಗಳ ವಿರುದ್ಧವೇ ಲೋಕಾಯುಕ್ತಕ್ಕೆ ದೂರು ನೀಡಲು ಸ್ಥಳೀಯರು ಮುಂದಾಗಿದ್ದಾರೆ.

ಈ ಕುರಿತು ಸಾಮಾಜಿಕ ಕಾರ್ಯಕರ್ತರಾದ ನಾಗರಾಜ ಚಾಪೆತೋಡ, ಧೀರಜ್ ತಿನೆಕರ್ ಹಾಗೂ ಗ್ರಾ.ಪಂ ಸದಸ್ಯ ವಿಶ್ವನಾಥ ಹಳೆಮನೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.‌

ದೇಹಳ್ಳಿಯ ಶಾಲಾ ಮೈದಾನ ಸಮತಟ್ಟು ಕಾಮಗಾರಿಗೆ 2021-22 ರಲ್ಲಿ ಸುಮಾರು 4 ಲಕ್ಷ ರೂ ಕ್ರಿಯಾಯೋಜನೆ ಮಾಡಲಾಗಿತ್ತು. ಆದರೆ ಸುಮಾರು 70 ಸಾವಿರ ರೂ ಖರ್ಚಾಗಿದೆ. ಕಾಮಗಾರಿ ನಡೆದು ಪೂರ್ಣ ಬಿಲ್ ಆಗಿದ್ದರೂ, ಕಾಮಗಾರಿ ನಡೆದೇ ಇಲ್ಲ ಎಂದು ಪಿಡಿಒ ಮಾಹಿತಿ ನೀಡಿದ್ದಾರೆ.‌ ಸರಿಯಾದ ಮಾಹಿತಿ ಕೊಡದೇ ಇದ್ದಾಗ ಈ ಬಗ್ಗೆ ಜಿಲ್ಲಾ ಒಂಬುಡ್ಸಮನ್ ಅವರಿಗೆ ದೂರಿದರೂ ಸರಿಯಾಗಿ ತನಿಖೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಂಬುಡ್ಸಮನ್ ಸಿ.ಟಿ.ನಾಯ್ಕ ಅವರು ತನಿಖೆಗೆ ಬಂದು ತಾ.ಪಂ ಕಚೇರಿಯಲ್ಲಿ ಸಭೆ ಕರೆದಾಗ ಪಿಡಿಒ ನಸ್ರೀನ ಭಾನು ಗೈರಾಗಿದ್ದರು. ಕಾಮಗಾರಿ ವಿಚಾರವಾಗಿ ಕೈಗೊಂಡ ಕ್ರಮದ ಬಗ್ಗೆ ಕೇಳಿದಾಗ ತಾ.ಪಂಗೆ ವರದಿ ನೀಡುವಂತೆ ನೋಟೀಸ್ ನೀಡಿದ್ದಾಗಿ ಹೇಳಿ ಜಾರಿಕೊಂಡರು.‌ ಕಳೆದ ಜುಲೈ 5 ರಂದು ಮತ್ತೊಮ್ಮೆ ವಿಚಾರಣೆಗಾಗಿ ಕರೆದಾಗಲೂ ಪಿಡಿಒ ಹಾಜರಾಗಿಲ್ಲ.

ಜುಲೈ 31 ರಂದು ಸ್ಥಳ ಪರಿಶೀಲನೆಗೆ ಬಂದ ಸಂದರ್ಭದಲ್ಲಿ ನಮ್ಮೊಂದಿಗೆ ಸಾಮಾಜಿಕ ಕಾರ್ಯಕರ್ತರ ಉಪಸ್ಥಿತಿಗೆ, ವಿಡಿಯೊ ಚಿತ್ರೀಕರಣಕ್ಕೆ ಅವಕಾಶ ನಿರಾಕರಿಸಿದ್ದರು. ಆದರೆ ಗ್ರಾ.ಪಂ ಅಧ್ಯಕ್ಷರೊಂದಿಗೆ ಸಾಮಾಜಿಕ ಕಾರ್ಯಕರ್ತರೆಂದು ಹೇಳಿಕೊಂಡು ಅನೇಕರು ಬಂದರೂ ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದರು. ಇದನ್ನು ಪ್ರಶ್ನಿಸಿದಾಗ ಅಧಿಕಾರಿಗಳು ನಮಗೇ ಗರಂ ಆಗಿದ್ದಾರೆಂದು ದೂರಿದರು.

ಗ್ರಾ.ಪಂ ಸದಸ್ಯ ವಿಶ್ವನಾಥ ಹಳೆಮನೆ ಮಾತನಾಡಿ, ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಕಂಡು ಬಂದಿದೆ. 25 ಕೂಲಿಗಳ ಹೆಸರು ಹಾಕಿ, ಬೇರೆ 12-13 ಜನರ ಖಾತೆಗಳಿಗೆ ಹಣ ಬಟವಡೆ ಮಾಡಲಾಗಿದೆ. ನಕಲಿ ಸಹಿ ಹಾಕಿರುವ ಅನುಮಾನವಿದೆ. ಕೆಲಸ ಮಾಡಿದ ಕೂಲಿಗಳೇ ಬೇರೆ, ಹಣ ಜಮಾ ಆಗಿರುವುದೇ ಬೇರೆಯವರ ಖಾತೆಗೆ. ಕಾಮಗಾರಿಯ ಮುಗಿದ ನಂತರ ಜಿಪಿಎಸ್ ಇಲ್ಲದ ಚಿತ್ರವನ್ನು ಅಂಟಿಸಿ ಬಿಲ್ ಮಾಡಲಾಗಿದೆ. ಈ ಬಗ್ಗೆ ಕೇಳಿದರೆ ಅಧಿಕಾರಿಗಳಿಂದ ಸರಿಯಾದ ಸ್ಪಂದನೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾರ್ವಜನಿಕ ಸೇವಾ ಕೇಂದ್ರದ ಮುಖ್ಯಸ್ಥ ಧೀರಜ ತಿನೆಕರ್ ಮಾತನಾಡಿ, ಈ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಜಿಲ್ಲಾ ಒಂಬುಡ್ಸಮನ್ ಸರಿಯಾದ ತನಿಖೆ ನಡೆಸಿಲ್ಲ. ಪಿಡಿಒ ಸರಿಯಾದ ಮಾಹಿತಿ ನೀಡಿಲ್ಲ. ತನಿಖೆ ನಡೆಸಲು ಬಂದ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ತೊಡಗಿರುವ ಶಂಕೆಯಿದೆ. ಇವರ ವಿರುದ್ಧ ತನಿಖೆಗೆ ಆಗ್ರಹಿಸಿ ಲೋಕಾಯುಕ್ತರಿಗೆ ದೂರು ನೀಡಲಾಗುವುದೆಂದರು.

ShareSendTweetShare
Previous Post

ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ರಾಜೀನಾಮೆ ನೀಡಲಿ: ರಾಮು ನಾಯ್ಕ ಆಗ್ರಹ

Next Post

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ವೆಚ್ಚ ಭರಿಸಿದ ಸೇನಾಧಿಕಾರಿ

Next Post
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ವೆಚ್ಚ ಭರಿಸಿದ ಸೇನಾಧಿಕಾರಿ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ವೆಚ್ಚ ಭರಿಸಿದ ಸೇನಾಧಿಕಾರಿ

ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫೊಟೊ ಆಹ್ವಾನ

ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫೊಟೊ ಆಹ್ವಾನ

ಜಮೀನು ವಿಷಯಕ್ಕೆ ದಂಪತಿ ಮೇಲೆ ಹಲ್ಲೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.