6
  • Latest
ಸಾವಿಗೂ ಮುನ್ನವೇ ನರಕ ಅನುಭವಿಸಿದ್ದ ಕಲಾವಿದ!

ಸಾವಿಗೂ ಮುನ್ನವೇ ನರಕ ಅನುಭವಿಸಿದ್ದ ಕಲಾವಿದ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾವಿಗೂ ಮುನ್ನವೇ ನರಕ ಅನುಭವಿಸಿದ್ದ ಕಲಾವಿದ!

ಹಲವು ಪ್ರಶ್ನೆಗಳನ್ನು ಮೂಡಿಸಿದ ಥಳಿಸುವ ವಿಡಿಯೊ

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 10, 2025
in ಸ್ಥಳೀಯ
advt advt advt
ADVERTISEMENT

ಇತ್ತೀಚೆಗೆ ನೇಣು ಹಾಕಿಕೊಂಡು ಸಾವನ್ನಪ್ಪಿದ ಕಾಮಿಡಿ ಕಿಲಾಡಿ ಖ್ಯಾತಿಯ ಚಂದ್ರಶೇಖರ ಸಿದ್ದಿ ಅವರಿಗೆ ಕುಟುಂಬದವರೇ ಥಳಿಸಿದ ವಿಡಿಯೊ ಹೊರಬಿದ್ದಿದ್ದು, ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚಂದ್ರಶೇಖರ್ ಸತ್ತು 10 ದಿನಗಳು ಕಳೆದ ನಂತರ, ಮೂರು ತಿಂಗಳಿನಷ್ಟು ಹಳೆಯದ್ದು ಎನ್ನಲಾದ ಈ ವಿಡಿಯೊ ಹರಿಯ ಬಿಡಲಾಗಿದೆ. ವಿಡಿಯೊ ಹಳೆಯದೇ ಆದರೂ ಸಾವಿನ ಹಿಂದೆ ಇಂತಹ ಘಟನೆಗಳು ಪರಿಣಾಮ ಬೀರಿರಬಹುದೇ ಎಂಬ ಅನುಮಾನ ಮೂಡಿಸುತ್ತಿದೆ.

ADVERTISEMENT
ADVERTISEMENT

ವಿಡಿಯೋದಲ್ಲಿ ಪತ್ನಿ ವನಜಾಕ್ಷಿ ಸಿದ್ದಿ ಅವರು ಬಡಿಗೆ ಹಿಡಿದು ಚಂದ್ರಶೇಖರ ಅವರನ್ನು ಥಳಿಸಿದ್ದಾರೆ. ಅಲ್ಲಿದ್ದ ಮತ್ತಿಬ್ಬರು ಸಹ ಚಂದ್ರಶೇಖರ ಸಿದ್ದಿ ಅವರಿಗೆ ಹೊಡೆದಿದ್ದು, ಇನ್ನೊಬ್ಬ ವ್ಯಕ್ತಿ `ಹೊಡೆಯಬೇಡಿ’ ಎನ್ನುತ್ತಿರುವ ಮಾತುಗಳು ಸೆರೆಯಾಗಿದೆ. ಸೋಫಾ ಮೇಲೆ ಚಂದ್ರಶೇಖರ ಸಿದ್ದಿ ಅವರು ಕುಳಿತಿದ್ದಾಗ ಎಲ್ಲರೂ ಸೇರಿ ಒಮ್ಮೆಲೆ ಮುಗಿ ಬಿದ್ದಿದ್ದಾರೆ.

ತೇಲಂಗಾರಿನವರಾದ ಚಂದ್ರಶೇಖರ ಸಿದ್ದಿ ಅವರು ಕಾಮಿಡಿ ಕಿಲಾಡಿ ಶೋದಲ್ಲಿ ಭಾಗವಹಿಸಿ ಪ್ರಸಿದ್ಧಿ ಪಡೆದಿದ್ದರು. ನಂತರ ಧಾರಾವಾಹಿಯಲ್ಲೂ ನಟಿಸಿದ್ದರು. ಕೆಲ ತಿಂಗಳುಗಳಿಂದ ಕಟ್ಟಿಗೆ ಗ್ರಾಮದ ಕೋಟೆಮನೆಯ ರೈತರೊಬ್ಬರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರ ಜೊತೆ ಅವರ ಪತ್ನಿ ವನಜಾಕ್ಷಿ ಸಿದ್ದಿ ಹಾಗೂ ಮೂರು ವರ್ಷದ ಮಗ ಸಹ ಅಲ್ಲಿಯೇ ಉಳಿದಿದ್ದರು. ಜುಲೈ 31ರಂದು ಚಂದ್ರಶೇಖರ ಸಿದ್ದಿ ಅವರು ಅಂಗನವಾಡಿಗೆ ಹೋಗಿದ್ದ ಮಗನನ್ನು ಮನೆಗೆ ಕರೆತಂದಿದ್ದರು. ನಂತರ ಬೆಟ್ಟಕ್ಕೆ ಹೋಗಿದ್ದ ಅವರು ಅಲ್ಲಿಯೇ ನೇಣು ಹಾಕಿಕೊಂಡಿದ್ದರು.

Advertisement. Scroll to continue reading.
Advertisement. Scroll to continue reading.

ಚಂದ್ರಶೇಖರ ಸಿದ್ದಿ ಅವರ ಸಾವಿನ ಬಗ್ಗೆ ಅವರ ತಾಯಿ ಲಕ್ಷ್ಮೀ ಸಿದ್ದಿ ಅವರು ಸಂಶಯವ್ಯಕ್ತಪಡಿಸಿದ್ದರು. 2020ರಲ್ಲಿ ಚಂದ್ರಶೇಖರ ಸಿದ್ದಿ ಅವರ ತಂದೆ ನಾಗಪ್ಪ ಸಿದ್ದಿ ಅವರೂ ಆತ್ಮ*ಹತ್ಯೆಗೆ ಶರಣಾಗಿದ್ದರು. ಮಗ ಸಹ ಅದೇ ದಾರಿ ತುಳಿದ ಬಗ್ಗೆ ಲಕ್ಷ್ಮೀ ಸಿದ್ದಿ ನೋವು ತೋಡಿಕೊಂಡಿದ್ದರು. ಧಾರಾವಾಹಿಯಲ್ಲಿ ಪಾತ್ರ ಮಾಡಿ ಮನೆಗೆ ಬಂದಿದ್ದ ಮಗ ಕೋಟೆಮನೆಯಲ್ಲಿ ಕೆಲಸ ಸಿಕ್ಕಿದ್ದರಿಂದ ಅಲ್ಲಿ ವಾಸವಾಗಿದ್ದ. ಆದರೆ, ಆತ ಮತ್ತೆ ಮನೆಗೆ ಮರಳಲೇ ಇಲ್ಲ’ ಎಂದು ಕಣ್ಣೀರು ಹಾಕಿದ್ದರು.

`ಚಂದ್ರಶೇಖರ ಸಿದ್ದಿ ಮದ್ಯಪಾನ ಮಾಡಿದಾಗಲೆಲ್ಲ ನನಗೆ ಹೊಡೆಯುತ್ತಿದ್ದ. ನನ್ನ ಮೇಲೆ ಅನಗತ್ಯ ಅನುಮಾನ ಪಡುತ್ತಿದ್ದ. ಆರು ತಿಂಗಳ ಹಿಂದೆ ಈ ಬಗ್ಗೆ ಪೊಲೀಸರಿಗೆ ದೂರಿದಾಗ ರಾಜಿ-ಸಂಧಾನ ನಡೆದಿತ್ತು. ನಂತರ ನಾವು ಒಂದಾಗಿ ಸಂಸಾರ ನಡೆಸುತ್ತಿದ್ದೆವು. ನನಗೂ ನಾಟಕ ತರಬೇತಿ ನೀಡುವುದಾಗಿ ಚಂದ್ರಶೇಖರ್ ಸಿದ್ದಿ ಹೇಳಿದ್ದರು. ನಮ್ಮ ನಡುವೆ ಸದ್ಯ ಯಾವುದೇ ಸಮಸ್ಯೆ ಇರಲಿಲ್ಲ’ ಎಂದು ಚಂದ್ರಶೇಖರ ಸಿದ್ದಿ ಅವರ ಪತ್ನಿ ವನಜಾಕ್ಷಿ ಸಿದ್ದಿ ಹೇಳಿದ್ದಾರೆ.
ಆದರೆ ಇದೀಗ ವೈರಲ್ ಆಗಿರುವ ಈ ವಿಡಿಯೊ ಬೇರೆಯದೇ ಕಥೆ ಹೇಳುತ್ತಿದೆ.

ShareSendTweetShare
ADVERTISEMENT
Previous Post

ಮತಗಳ್ಳತನ ಆರೋಪ: ಕಾಂಗ್ರೆಸ್ ವಿರುದ್ಧವೂ ತನಿಖೆಯಾಗಲಿ: ರಾಮು ನಾಯ್ಕ ಆಗ್ರಹ

Next Post

ಕಸವಾದ ಕಸದ ತೊಟ್ಟಿ

Next Post
ಕಸವಾದ ಕಸದ ತೊಟ್ಟಿ

ಕಸವಾದ ಕಸದ ತೊಟ್ಟಿ

ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ಹಳ್ಳದಲ್ಲಿ ಮುಳುಗಿದ ಸಹೋದರರು: ಬೆಳಗ್ಗೆ ಮುಂದುವರಿಯಲಿದೆ ಶೋಧ ಕಾರ್ಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.