6
  • Latest
ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

ಮೊದಲ ಅಧ್ಯಾಯ ಪೂರ್ಣ ಕಂಠಪಾಠ ಮಾಡಿ ಬೆರಗುಗೊಳಿಸಿದ ಪುಟಾಣಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ವಿಡಿಯೋ, ಸ್ಥಳೀಯ
ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌

ADVERTISEMENT

ಮನೆಯಲ್ಲಿ ತಾಯಿಯಿಂದ ಕೇಳಿ ಕೇಳಿಯೇ ಭಗವದ್ಗೀತೆಯ ಒಂದು ಅಧ್ಯಾಯವನ್ನೇ ಕಂಠಪಾಠ ಮಾಡಿ ಹೇಳುವ ಪುಟಾಣಿ ಪ್ರತಿಭೆ ಇದಕ್ಕೊಂದು ಉತ್ತಮ‌ ನಿದರ್ಶನ. ಅವಳ ಹೆಸರು ಮೇದಿನಿ ಹೆಬ್ಬಾರ್. ವಯಸ್ಸು ಕೇವಲ ನಾಲ್ಕು ವರ್ಷ. ಇನ್ನೂ ಓದಲು, ಬರೆಯಲು ಬಾರದು. ಇದನ್ನೆಲ್ಲ ಬಲ್ಲವರೂ ಮಾಡದ ಸಾಧನೆಯನ್ನು ಈ ವಯಸ್ಸಿನಲ್ಲೇ ಮೇದಿನಿ ಮಾಡಿದ್ದಾಳೆ.

ಹಳವಳ್ಳಿಯ ಕೃಷ್ಣಮೂರ್ತಿ ಹೆಬ್ಬಾರ ಹಾಗೂ ವಿದ್ಯಾ ಹೆಬ್ಬಾರ ದಂಪತಿಯ ಪುತ್ರಿಯಾಗಿರುವ ಮೇದಿನಿ, ಭಗವದ್ಗೀತೆಯ ಮೊದಲ‌ ಅಧ್ಯಾಯವನ್ನು ಸಂಪೂರ್ಣವಾಗಿ ಕಂಠಪಾಠ ಮಾಡಿದ್ದಾಳೆ. ತಾಯಿ ವಿದ್ಯಾ ಹೆಬ್ಬಾರ ಅವರು ಹೇಳುವುದನ್ನು ಕೇಳಿ ಕೇಳಿಯೇ ಇಡೀ ಅಧ್ಯಾಯವನ್ನು ಕಂಠಪಾಠ ಮಾಡಿರುವುದು ವಿಶೇಷ.

Advertisement. Scroll to continue reading.

ಮೇದಿನಿ ಭಗವದ್ಗೀತೆಯ ಶ್ಲೋಕಗಳನ್ನು ಹೇಳುವ ವಿಡಿಯೊ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ನಾಡಿನಾದ್ಯಂತ ಭಗವದ್ಗೀತಾ ಅಭಿಯಾನದ ಮೂಲಕ ಗೀತೆಯ ಮಹತ್ವ ಸಾರುತ್ತಿರುವ ಸ್ವರ್ಣವಲ್ಲಿಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳ ಸಮ್ಮುಖದಲ್ಲಿಯೂ ಮೇದಿನಿ ಗೀತೆಯ ಶ್ಲೋಕಗಳನ್ನು ಪ್ರಸ್ತುತಪಡಿಸಿದ್ದಾಳೆ. ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿ, ಭವಿಷ್ಯ ಉಜ್ವಲವಾಗಲೆಂದು ಆಶೀರ್ವದಿಸಿದ್ದಾರೆ.

Advertisement. Scroll to continue reading.
Previous Post

ಬಸ್ ಹಾಗೂ ಲಾರಿ ನಡುವೆ ಅಪಘಾತ: ಘಟನಾ ಸ್ಥಳಕ್ಕೆ ಎಸ್.ಪಿ ಭೇಟಿ

Next Post

ಹಳಿಯಾಳದ ಮಹಿಳೆಗೆ ಯಮನಾದ ಯಲ್ಲಾಪುರದ ಬಸ್

Next Post
ಹಳಿಯಾಳದ ಮಹಿಳೆಗೆ ಯಮನಾದ ಯಲ್ಲಾಪುರದ ಬಸ್

ಹಳಿಯಾಳದ ಮಹಿಳೆಗೆ ಯಮನಾದ ಯಲ್ಲಾಪುರದ ಬಸ್

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ