6
  • Latest
‘ಕಾಳಮ್ಮನಗರದಲ್ಲಿ ಕರೆಂಟ್ ಇಲ್ಲ’: ವಿಧಾನ ಪರಿಷತ್ತಿನ ಕಲಾಪದಲ್ಲಿ ಚರ್ಚೆಗೆ ಬಂದ ವಿಷಯ

‘ಕಾಳಮ್ಮನಗರದಲ್ಲಿ ಕರೆಂಟ್ ಇಲ್ಲ’: ವಿಧಾನ ಪರಿಷತ್ತಿನ ಕಲಾಪದಲ್ಲಿ ಚರ್ಚೆಗೆ ಬಂದ ವಿಷಯ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

‘ಕಾಳಮ್ಮನಗರದಲ್ಲಿ ಕರೆಂಟ್ ಇಲ್ಲ’: ವಿಧಾನ ಪರಿಷತ್ತಿನ ಕಲಾಪದಲ್ಲಿ ಚರ್ಚೆಗೆ ಬಂದ ವಿಷಯ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ಕಾಳಮ್ಮನಗರದಲ್ಲಿ ಪರಿಶಿಷ್ಟ ಪಂಗಡ, ಜಾತಿ ಹಾಗೂ ಇತರೆ ವರ್ಗದ ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದ ವಿಷಯ ವಿಧಾನ ಪರಿಷತ್ತಿನಲ್ಲಿ ಪ್ರತಿಧ್ವನಿಸಿತು. ಈ ವಿಚಾರವನ್ನು ಸೋಮವಾರ ಸದನದಲ್ಲಿ ಪ್ರಸ್ತಾಪಿಸಿದ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಸಮಸ್ಯೆಗೊಂದು ಪರಿಹಾರ ಒದಗಿಸುವಲ್ಲಿ ಕಾರಣರಾದರು.

ವಿಷಯ ಪ್ರಸ್ತಾಪಿಸಿದ ಶಾಂತಾರಾಮ ಸಿದ್ದಿ, ಯಲ್ಲಾಪುರದ ಕಾಳಮ್ಮನಗರದಲ್ಲಿ ಪರಿಶಿಷ್ಟ ಪಂಗಡದ 15, ಪ.ಜಾತಿಯ 9 ಹಾಗೂ ಇತರೆ ವರ್ಗದ 23 ಮನೆಗಳಿಗೆ ವಿದ್ಯುತ್ ಸಂಪರ್ಕವೇ ಇಲ್ಲ. ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರೂ ವಿದ್ಯುತ್ ಸಂಪರ್ಕ ಇಲ್ಲದೇ ಇರುವುದು ನಾಚಿಕೆಗೇಡಿನ ಸಂಗತಿ ಎಂದು ವಿವರಿಸಿದರು.

ADVERTISEMENT
ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಇಂಧನ ಸಚಿವ ಕೆ.ಜೆ.ಜಾರ್ಜ್, ವಿಷಯ ಸರ್ಕಾರದ ಗಮನಕ್ಕೆ ಬಂದಿದೆ. ಆದರೆ ತಾಂತ್ರಿಕವಾಗಿ ಸಮಸ್ಯೆಯಿದೆ. ಆ ಜನರೆಲ್ಲ ಖಾಸಗಿ ಜಾಗದಲ್ಲಿದ್ದು, ವಿದ್ಯುತ್ ಸಂಪರ್ಕ ಕಲ್ಪಿಸಲು ಜಾಗದ ಮಾಲೀಕನೆಂದು ಹೇಳಿಕೊಂಡವರ ತಕರಾರು ಇದೆ. ವಿದ್ಯುತ್ ನೀಡಲು ಪ.ಜಾತಿ, ಪಂಗಡದ ಜನರೆಲ್ಲ ಆ ಸ್ಥಳದಲ್ಲಿ ವಾಸ್ತವ್ಯ ಮಾಡುವ ಬಗ್ಗೆ ದಾಖಲಾತಿಯ ಅಗತ್ಯವಿದೆ. ಆ ಬಗ್ಗೆ ಸ್ಥಳೀಯ ಆಡಳಿತದಿಂದ ಧೃಢೀಕರಣ ಪತ್ರ ನೀಡಿದಲ್ಲಿ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದೆಂದರು.

Advertisement. Scroll to continue reading.
Advertisement. Scroll to continue reading.

ಇದಕ್ಕೆ ಮಧ್ಯಪ್ರವೇಶಿಸಿದ ಶಾಂತಾರಾಮ ಸಿದ್ದಿ, ಜಾಗದ ಮಾಲೀಕನೆಂದು ಹೇಳಿಕೊಂಡವರ ತಕರಾರು ಇಲ್ಲಿ ಪ್ರಸ್ತುತವಲ್ಲ. ಅದು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಬಡವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದಕ್ಕೂ, ಆ ವಿಷಯಕ್ಕೂ ಸಂಬಂಧವಿಲ್ಲ. ಕಾಳಮ್ಮನಗರದಲ್ಲಿ ವಾಸಿಸುತ್ತಿರುವ ಆ ಜನರು ಮನೆ, ಆಧಾರ್ ಕಾರ್ಡ್, ಪಡಿತರ ಚೀಟಿ, ನೀರಿನ ಸಂಪರ್ಕ ಹೊಂದಿದ್ದಾರೆ. ಇದೆಲ್ಲವೂ ಸರ್ಕಾರದ ವ್ಯವಸ್ಥೆಯೇ ಅಲ್ಲವೆ? ಈ ವ್ಯವಸ್ಥೆಗಳನ್ನು ಹೊಂದಿದ ಆಧಾರದ ಮೇಲೆ ವಿದ್ಯುತ್ ಸಂಪರ್ಕ ನೀಡುವುದಕ್ಕೇನು ಸಮಸ್ಯೆ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು, ಈ ಎಲ್ಲ ದಾಖಲೆಗಳನ್ನು ಹೊಂದಿರುವುದು ನನ್ನ ಗಮನಕ್ಕಿರಲಿಲ್ಲ. ಇದೇ ಆಧಾರದ ಮೇಲೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದರು.

ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಹೇಳಿಕೊಳ್ಳುವುದು ಯಾರಲ್ಲಿ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತಿದೆ. ಇಲಾಖೆಗೆ ಪ್ರತ್ಯೇಕ ಸಚಿವರಿಲ್ಲ. ಮುಖ್ಯಮಂತ್ರಿಗಳೇ ಖಾತೆಯನ್ನು ಹೊಂದಿದ್ದು, ನಮಗೆ ಬೇಕಾದಾಗ ಅವರನ್ನು ಭೇಟಿ ಮಾಡಿ ಸಮಸ್ಯೆ ಹೇಳಿಕೊಳ್ಳಲು ಆಗುವುದಿಲ್ಲ ಎಂದು ಶಾಂತಾರಾಮ ಸಿದ್ದಿ ಅಸಮಾಧಾನ ವ್ಯಕ್ತಪಡಿಸಿದರು.

ShareSendTweetShare
ADVERTISEMENT
Previous Post

ಹವ್ಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ವಿದ್ಯಾರ್ಥಿನಿಧಿ ವಿತರಣೆ

Next Post

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

Next Post
ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.