ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾ.ಪಂ ವ್ಯಾಪ್ತಿಯ ಬೀಗಾರ-ಬಾಗಿನಕಟ್ಟಾ ರಸ್ತೆಯ ಪಕ್ಕ ಮಂಗಳವಾರ ಸಂಜೆ ಭೂ ಕುಸಿತ ಉಂಟಾದ ಸ್ಥಳಕ್ಕೆ ತಹಸೀಲ್ದಾರ ಚಂದ್ರಶೇಖರ ಹೊಸಮನಿ ಭೇಟಿ ನೀಡಿದರು.
ಕಂದಾಯ ನಿರೀಕ್ಷಕರು, ಲೋಕೋಪಯೋಗಿ ಇಲಾಖೆಯ ಇಂಜನಿಯರ್, ಪೊಲೀಸ್ ಇಲಾಖೆಯ ಸಿಬ್ಬಂದಿ ಸಹ ಜೊತೆಗಿದ್ದರು. ಭೂಕುಸಿತದ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದರು.
ಈ ಹಿಂದಿನ ವರ್ಷಗಳಲ್ಲಿ ಭೂಕುಸಿತ ಉಂಟಾದ ಸ್ಥಳದ ಹತ್ತಿರದಲ್ಲೇ ಈ ಬಾರಿಯೂ ಭೂಮಿ ಕುಸಿದಿದೆ. ಮಳೆ ಮುಂದುವರಿದಲ್ಲಿ ಇನ್ನಷ್ಟು ಭೂಕುಸಿತ ಉಂಟಾಗುವ ಅಪಾಯವಿದೆ.
ಈ ಹಿನ್ನೆಲೆಯಲ್ಲಿ ಬೀಗಾರ-ಬಾಗಿನಕಟ್ಟಾ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರ ನಿಷೇಧಿಸಬೇಕು. ವಾಹನಗಳ ಸಂಚಾರ ನಿಷೇಧದ ಕುರಿತು ಮಾಹಿತಿಗಾಗಿ ಬ್ಯಾನರ್ ಅಳವಡಿಸಬೇಕು.
ಹೆಚ್ಚಿನ ಮಳೆ ಇದ್ದಾಗ ಎಲ್ಲಾ ವಾಹನಗಳೂ ಬಾಗಿನಕಟ್ಟಾ-ಚಿಮನಳ್ಳಿ-ತೇಲಂಗಾರ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಕ್ರಮ ಕೈಗೊಳ್ಳಲು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಹಸೀಲ್ದಾರ ಸೂಚಿಸಿದರು.







