ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಪ.ಪಂ ಅಧ್ಯಕ್ಷೆ ನರ್ಮದಾ ನಾಯ್ಕ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಸದೃಢತೆ, ಮಾನಸಿಕ ನೆಮ್ಮದಿ ಸಿಗುತ್ತದೆ ಎಂದರು.
ಮದನೂರು ಗ್ರಾ.ಪಂ ಅಧ್ಯಕ್ಷ ವಿಠ್ಠು ಶೆಳಕೆ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಕ್ರೀಡಾಪಟುಗಳಿಗೆ ಎಲ್ಲ ರೀತಿಯಲ್ಲಿ ಪ್ರೋತ್ಸಾಹ, ಅವಕಾಶಗಳು ದೊರಕುತ್ತಿವೆ. ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು ಎಂದರು.
ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ ಅಧ್ಯಕ್ಷತೆ
ವಹಿಸಿ, ‘ಕ್ರೀಡಾ ಪ್ರತಿಭೆಗೆ ಅವಕಾಶ ಸಾಕಷ್ಟು ಇದ್ದು, ಅದನ್ನು ಬಳಸಿಕೊಳ್ಳಬೇಕು. ಗ್ರಾಮೀಣ ಪ್ರತಿಭೆಗಳನ್ನು ಬೆಳಕಿಗೆ ತರುವ ಕೆಲಸ ದಸರಾ ಕ್ರೀಡಾಕೂಟ ಮಾಡುತ್ತಿದೆ’ ಎಂದರು.
ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜೇಯ ನಾಯಕ, ದೈಹಿಕ ಶಿಕ್ಷಣ ಪರೀವೀಕ್ಷಕ ಪ್ರಕಾಶ ತಾರಿಕೊಪ್ಪ, ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಸದಾನಂದ ನಾಯಕ, ಶಿಕ್ಷಣ ಸಂಯೋಜಕ ಪ್ರಶಾಂತ ಜಿಎನ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ಎಸ್ ಭಟ್ಟ ಆನಗೋಡ, ಯುವ ಒಕ್ಕೂಟದ ಕಾರ್ಯದರ್ಶಿ ಶ್ರೀಧರ ಅಣಲಗಾರ ಭಾಗವಹಿಸಿದ್ದರು.
ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟು ಶ್ರೀದೇವಿ ಜಿ ನಾಯಕ ಅವರನ್ನು ಪುರಸ್ಕರಿಸಲಾಯಿತು. ತಾಲೂಕಾ ಯುವಜನ ಸೇವಾ ಕ್ರೀಡಾಧಿಕಾರಿ ನಾರಾಯಣ ನಾಯಕ, ಶಿಕ್ಷಕ
ವಿ ಪಿ ಭಟ್ಟ, ಪತ್ರಕರ್ತ ಸುಬ್ರಾಯ ಬಿದ್ರೆಮನೆ ನಿರ್ವಹಿಸಿದರು.







