6
  • Latest
ಕಾಣೆಯಾಗಿದ್ದ ಪಂಪ್ ಸೆಟ್ ಪ್ರತ್ಯಕ್ಷ!

ಕಾಣೆಯಾಗಿದ್ದ ಪಂಪ್ ಸೆಟ್ ಪ್ರತ್ಯಕ್ಷ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಣೆಯಾಗಿದ್ದ ಪಂಪ್ ಸೆಟ್ ಪ್ರತ್ಯಕ್ಷ!

ಜಾತ್ರೆ ಲೆಕ್ಕಾಚಾರದ ಪ್ರಸ್ತಾಪವೇ ಇಲ್ಲದ ಅಪರೂಪದ ಸಾಮಾನ್ಯ ಸಭೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಜಾತ್ರೆ ಲೆಕ್ಕಾಚಾರದ ವಿಷಯವೇ ಪ್ರಸ್ತಾಪವಾಗದೇ ದಾಖಲೆ ಸೃಷ್ಟಿಯಾಯಿತು. ಕಳೆದ 9 ಸಭೆಗಳಲ್ಲಿ ಹೆಚ್ಚಿನ ಸಮಯ ನುಂಗಿದ್ದ ಜಾತ್ರೆ ಲೆಕ್ಕಾಚಾರದ ವಿಷಯ ಈ ಬಾರಿ ಪ್ರಸ್ತಾವಾಗಲಿಲ್ಲ.

ಉದ್ಯಮನಗರ ವಾರ್ಡ್ ಸದಸ್ಯ ನಾಗರಾಜ ಅಂಕೋಲೆಕರ್ ಮಾತನಾಡಿ, ನನ್ನ ವಾರ್ಡಿನಲ್ಲಿ ನಾಪತ್ತೆಯಾಗಿದ್ದ ಪಂಪ್ ಸೆಟ್ ಈಗ ಸಿಕ್ಕಿದೆ. ಪಂಪ್ ನಾಪತ್ತೆಯಾದ ಬಗ್ಗೆ ಹಿಂದಿನ ಸಭೆಯಲ್ಲಿ ಪ್ರಸ್ತಾಪಿಸಿದ್ದೆ, ಆ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ, ಇದ್ದಕ್ಕಿದ್ದಂತೆ ಪಂಪ್ ಪ್ರತ್ಯಕ್ಷವಾಗಿದೆ ಎಂದರು.

ADVERTISEMENT
ADVERTISEMENT

ಪಟ್ಟಣ ಪಂಚಾಯಿತಿಯ ಆಂತರಿಕ ವಿಚಾರಗಳು ಸೋರಿಕೆಯಾಗುತ್ತಿವೆ. ಸಭೆ ನಡೆಯುತ್ತಿರುವಾಗಲೇ ಸಭೆಯಲ್ಲಿ ಚರ್ಚೆಯಾಗುತ್ತಿರುವ ವಿಚಾರಗಳನ್ನು ಹೊರಗಿನವರಿಗೆ ತಿಳಿಸಲಾಗುತ್ತಿದೆ. ಟೆಂಡರ್ ಪ್ರಕ್ರಿಯೆಯ ವಿಚಾರಗಳೂ ಹೀಗೆ ಆಗುತ್ತಿವೆ.‌ಇಂಜನಿಯರಿಂಗ್ ವಿಭಾಗದಿಂದ ಎಲ್ಲಾ ಮಾಹಿತಿಗಳು ಹೊರಹೋಗುತ್ತಿವೆ ಎಂದು ರಾಧಾಕೃಷ್ಣ ನಾಯ್ಕ ಹಾಗೂ ಸತೀಶ ನಾಯ್ಕ ಆರೋಪಿಸಿದರು. ಸ್ಥಾಯಿ ಸಮಿತಿ ಸಭೆಯಲ್ಲೂ ಈ ಅನುಭವ ಆಗಿದೆ ಎಂದು ಸಮಿತಿ ಅಧ್ಯಕ್ಷ ಮಹಮ್ಮದ್ ಅಲಿ ಧ್ವನಿಗೂಡಿಸಿದರು.

ಪ.ಪಂ ಕಚೇರಿಗೆ ತಮ್ಮ ಕಾರ್ಯಕ್ಕಾಗಿ ಬರುವ ಸಾರ್ವಜನಿಕರಿಗೆ ‘ಮುಖ್ಯಾಧಿಕಾರಿಗಳಿಲ್ಲ’ ಎಂಬ ಸಿದ್ಧ ಉತ್ತರ ಸಿಗುತ್ತದೆ. ಎಲ್ಲವನ್ನೂ ಮುಖ್ಯಾಧಿಕಾರಿಗಳೇ ಮಾಡಬೇಕಿಲ್ಲ. ಕೆಳ ಹಂತದ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿರುವುದೇಕೆ? ಎಂದು ರಾಧಾಕೃಷ್ಣ ಪ್ರಶ್ನಿಸಿದರು.

Advertisement. Scroll to continue reading.

ಸದ್ಯ ಪ್ರಭಾರಿ ಮುಖ್ಯಾಧಿಕಾರಿ ಇದ್ದಾರೆ. ಅವರು ಮೂರು ದಿನ ಇಲ್ಲಿ, ಮೂರು ದಿನ ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಸದಸ್ಯ ಸತೀಶ ನಾಯ್ಕ ಸಮಜಾಯಿಷಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸದಸ್ಯ ಕೈಸರ್ ಸೈಯ್ಯದ್ ಅಲಿ, ಸದಸ್ಯರ ಪ್ರಶ್ನೆಗೆ ಅಧ್ಯಕ್ಷರು ಉತ್ತರಿಸಲಿ, ಎಲ್ಲದಕ್ಕೂ ನೀವೇ ಏಕೆ ಉತ್ತರಿಸುತ್ತೀರಿ ಎಂದು ಪ್ರಶ್ನಿಸಿದರು. ಒಂದು ಸಭೆಯಲ್ಲಿ ಸತೀಶ ಅವರಿಗೆ ಅಧ್ಯಕ್ಷತೆಯ ಅವಕಾಶ ಕೊಡಿ ಎಂದು ಕಾಲೆಳೆದರು.

Advertisement. Scroll to continue reading.

ಯಲ್ಲಾಪುರ ಗ್ರಾಮ ಸ.ನಂ 29 ರ ಲೇ ಔಟ್ ನಲ್ಲಿ ಧರೆ ಕುಸಿದು ರಾಜಾಕಾಲುವೆಗೆ ಬಿದ್ದು, ಸಮೀಪದ ಕೃಷಿ ಜಮೀನಿಗೆ ಹಾನಿಯಾಗಿದೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ ಸೂಚಿಸಿದ ವಿಷಯ ಪ್ರಸ್ತಾಪಿಸಿದಾಗ, ಇದಕ್ಕೆ ಸದಸ್ಯರಿಂದ ವಿರೋಧ ವ್ಯಕ್ತವಾಯಿತು. ಲೇ ಔಟ್ ಗೆ ಅನುಮತಿ ನೀಡುವಾಗ ಸಭೆಯಲ್ಲಿ ಪ್ರಸ್ತಾಪ ಮಾಡಿಲ್ಲ, ಈಗ ಅದತ ಪ್ರಸ್ತಾಪವೇಕೆ ಎಂದು ರಾಧಾಕೃಷ್ಣ ನಾಯ್ಕ, ಸತೀಶ ನಾಯ್ಕ ಪ್ರಶ್ನಿಸಿದರು. ಲೇ ಔಟ್ ಗೆ ಅನುಮತಿ ನೀಡುವಾಗ ಇದ್ದ ಮುಖ್ಯಾಧಿಕಾರಿ ಹಾಗೂ ಇಂಜನಿಯರ್ ವೇತನದಿಂದ ಹಾನಿ ಭರಿಸಬೇಕು. ಪಟ್ಟಣ ಪಂಚಾಯಿತಿಯಿಂದ ಹಾನಿ ಭರಿಸಬಾರದು ಎಂದು ಆಗ್ರಹಿಸಿದರು.

ಕಾಳಮ್ಮನಗರದಲ್ಲಿ ವಾಸಿಸುತ್ತಿರುವ ಪ.ಜಾತಿ, ಪ.ಪಂಗಡದ 30 ಕ್ಕೂ ಹೆಚ್ಚು ನಿವಾಸಿಗಳಿಗೆ ಮೂಲ ಸೌಕರ್ಯ ಒದಗಿಸುವ ಕುರಿತು ಸಮಾಜ ಕಲ್ಯಾಣ ಇಲಾಖೆಯಿಂದ ಬಂದ ಮನವಿ ಕುರಿತು ಚರ್ಚೆ ನಡೆಯಿತು.‌ ಸರಿಯಾದ ದಾಖಲೆಗಳಿಲ್ಲದ ಕಾರಣ ನಿಯಮದಂತೆ ಎನ್.ಒ.ಸಿ ನೀಡಲು ಬರುವುದಿಲ್ಲ, ಸರ್ಕಾರದಿಂದ ಆದೇಶ ಬಂದರೆ ನೀಡಲಾಗುವುದೆಂದು ಮುಖ್ಯಾಧಿಕಾರಿ ತಿಳಿಸಿದರು. ಸದ್ಯಕ್ಕೆ ಆ ಪ್ರದೇಶದವರಿಗೆ ಸೋಲಾರ್ ದೀಪದ ವ್ಯವಸ್ಥೆಯನ್ನು ಮಾಡುವಂತೆ ಸೋಮು ನಾಯ್ಕ ಒತ್ತಾಯಿಸಿದರು. ‌

ShareSendTweetShare
ADVERTISEMENT
Previous Post

ಉಚಗೇರಿ-ಚಿಪಗೇರಿಯಲ್ಲಿ ಗಜಾನನೋತ್ಸವದ ರಜತ ಸಂಭ್ರಮ

Next Post

ಯಲ್ಲಾಪುರದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ಕಾರಣ ಏನು?

Next Post
ಯಲ್ಲಾಪುರದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ಕಾರಣ ಏನು?

ಯಲ್ಲಾಪುರದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ಕಾರಣ ಏನು?

ರಸ್ತೆ ಕುಸಿಯುವ ಭೀತಿ

ರಸ್ತೆ ಕುಸಿಯುವ ಭೀತಿ

ಹುಂಡಿ ಹಣ ಕದ್ದರು, ಪೊಲೀಸರ ಕೈಗೆ ಸಿಕ್ಕಿ ಬಿದ್ದರು.‌

ಹುಂಡಿ ಹಣ ಕದ್ದರು, ಪೊಲೀಸರ ಕೈಗೆ ಸಿಕ್ಕಿ ಬಿದ್ದರು.‌

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.