ಕರ್ತವ್ಯ ನಿರತ ಕೆ.ಎಸ್.ಆರ್.ಟಿ.ಸಿ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಇಬ್ಬರ ವಿರುದ್ಧ ಹೊನ್ನಾವರ ತಾಲೂಕಿನ ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಮಟಾದಿಂದ ಭಟ್ಕಳಕ್ಕೆ ಹೋಗುತ್ತಿದ್ದ ಬಸ್ ಚಾಲಕ ಮಂಜುನಾಥ ಹನುಮಂತ ಶಿರಗುಂಪಿ ಅವರು, ಏಕಾಏಕಿ ಎದುರಿನಲ್ಲಿ ಹಸು ಬಂದ ಕಾರಣ ಬಸ್ ನ್ನು ಎಡಬದಿಗೆ ತೆಗೆದುಕೊಂಡಿದ್ದಾರೆ. ಹಿಂಬದಿಯಿಂದ ಬರುತ್ತಿದ್ದ ಕಾರಿನಲ್ಲಿದ್ದ ಸಂಗೀತಾ ರೊಡ್ರಗೀಸ್ ಹಾಗೂ ಅಶ್ವಿನ್ ರೊಡ್ರಗಿಸ್ ಎಂಬವರು ಕೋಪಗೊಂಡು, ಬಸ್ ನೊಳಗೆ ಬಂದು ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಂಗೀತಾ ತನ್ನ ಚಪ್ಪಲಿಯಿಂದ ಚಾಲಕನಿಗೆ ಹೊಡೆದಿದ್ದಾಳೆ.
ಕರ್ತವ್ಯನಿರತ ಚಾಲಕನ ಮೇಲೆ ಹಲ್ಲೆ ನಡೆಸಿದ ಇಬ್ಬರ ವಿರುದ್ಧ ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






