ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 17 ರಂದು ಭಾರತೀಯ ಜನತಾ ಪಾರ್ಟಿ ಅಂಕೋಲಾ ಮಂಡಲ, ಯುವ ಮೋರ್ಚಾ ಹಾಗೂ ವಿವಿಧ ಶಕ್ತಿಕೇಂದ್ರಗಳ ಸಹಯೋಗದಲ್ಲಿ ಪಕ್ಷದ ಸೇವಾ ಪಾಕ್ಷಿಕದ ಭಾಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಕಲ್ಲೇಶ್ವರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವಾರದಲ್ಲಿ ಆಯೋಜಿಸಲಾಗಿದೆ.
ರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ ಇವರ ಸಹಕಾರದೊಂದಿಗೆ ನಡೆಯಲಿರುವ ಈ ಶಿಬಿರದಲ್ಲಿ 18 ವರ್ಷ ಮೇಲ್ಪಟ್ಟ ಆರೋಗ್ಯವಂತ ಪುರುಷ ,ಮಹಿಳೆಯರು ರಕ್ತದಾನ ಮಾಡಬಹುದಾಗಿದೆ.
ಬೆಳಗ್ಗೆ 9.30 ರಿಂದ ಪ್ರಾರಂಭವಾಗಿ ಮಧ್ಯಾಹ್ನ 3 ಗಂಟೆಯವರೆಗೆ ಶಿಬಿರ ನಡೆಯಲಿದೆ. ಜೀವ ಉಳಿಸುವ ಪುಣ್ಯ ಕಾರ್ಯಗಳಲ್ಲೊಂದಾದ ರಕ್ತದಾನವನ್ನು ಹೆಚ್ಚಿನ ಸಂಖ್ಯೆಯ ಜನರು ಮಾಡುವ ಮೂಲಕ, ಶಿಬಿರವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ವಿನಂತಿಸಿದ್ದಾರೆ.







