ಯಲ್ಲಾಪುರ-ಮುಂಡಗೋಡ ರಸ್ತೆಯ ದೇವರಕಾಡು ಬಳಿಯ ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿಯ ವಿರುದ್ಧ ಎನ್.ಡಿ.ಪಿ.ಎಸ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ರವೀಂದ್ರನಗರದ ಮಂಜುನಾಥ ಹನುಮಂತ ಬೋವಿವಡ್ಡರ್ ಎಂಬಾತ ದೇವರಕಾಡು ಹತ್ತಿರ ರಸ್ತೆಯ ಪಕ್ಕ ಗಾಂಜಾ ಸೇವಿಸಿ ಅಮಲಿನಲ್ಲಿದ್ದ.
ಈ ವೇಳೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವಿಸಿರುವುದು ಧೃಢಪಟ್ಟಿದೆ.
ಈ ಬಗ್ಗೆ ಯಲ್ಲಾಪುರ ಠಾಣೆಯಲ್ಲಿ ಪಿಎಸ್ಐ ಯಲ್ಲಾಲಿಂಗ ಕುನ್ನೂರ ಪ್ರಕರಣ ದಾಖಲಿಸಿಕೊಂಡಿದ್ದಾರೆ.







